Wrestlers protest: ಇಂತಹ ದಿನಗಳನ್ನು ನೋಡಲು ಪದಕ ಗೆದ್ದು ತಂದೆವೇ..? ಕಣ್ಣೀರಿಟ್ಟ ವಿನೇಶ್ ಫೋಗಟ್
ನವದೆಹಲಿ, ಮೇ. 04: ದೆಹಲಿಯ ಪೋಲಿಸ್ ಸಿಬ್ಬಂದಿ ತಾವು ಪ್ರತಿಭಟನೆ ನಡೆಸುತ್ತಿರುವ ಗುಂಪಿನ ಕೆಲವು ಸದಸ್ಯರ ಮೇಲೆ ಹಲ್ಲೆ ಮಾಡಿರುವ ಆರೋಪದ ನಂತರ ಕುಸ್ತಿಪಟು ವಿನೇಶ್ ಫೋಗಟ್ ಭಾವುಕರಾಗಿದ್ದಾರೆ. "ಈ ದಿನವನ್ನು ನೋಡಲು ನಾವು ಪದಕಗಳನ್ನು ಗೆದ್ದಿದ್ದೇವೆಯೇ" ಎಂದು ಪ್ರಶ್ನಿಸಿರುವ ಅವರು ಕ್ಯಾಮೆರಾ ಮುಂದೆ ಕಣ್ಣೀರನ್ನು ತಡೆಯಲು ಪ್ರಯತ್ನಿಸಿದ್ದಾರೆ.
"ಕುಡಿದ" ಪೊಲೀಸ್ ಅಧಿಕಾರಿಯೊಬ್ಬರು ಮದ್ಯದ ಅಮಲಿನಲ್ಲಿ ಇಬ್ಬರು ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದರು. ಆದರೆ ಅವರ ಸಹೋದ್ಯೋಗಿಗಳು ಮೂಕ ಪ್ರೇಕ್ಷಕರಾಗಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. "ಮಹಿಳಾ ಪೊಲೀಸ್ ಅಧಿಕಾರಿಗಳು ಇರಲಿಲ್ಲ. ಆ ಪೊಲೀಸ್ ಅಧಿಕಾರಿ ಎಲ್ಲರನ್ನು ನೂಕ್ಕುತ್ತಿದ್ದರು ಮತ್ತು ಬಲವಂತವಾಗಿ ತಳ್ಳುತ್ತಿದ್ದರು" ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

ಪೊಲೀಸರು ನಮ್ಮೊಂದಿಗೆ ಈ ರೀತಿ ವರ್ತಿಸಲು ನಾವು ಅಪರಾಧಿಗಳಲ್ಲ" ಎಂದು ಹೇಳಿರುವ ಅವರು, ಮಹಿಳಾ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಗೈರುಹಾಜರಾಗಿದ್ದನ್ನು ಪ್ರಶ್ನಿಸಿದ್ದಾರೆ. ನನ್ನನ್ನು ಪೊಲೀಸರು ನಿಂದಿಸಿದ್ದಾರೆ ಮತ್ತು ತಳ್ಳಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿ ಎಲ್ಲಿದ್ದಾರೆ" ಎಂದು ಕುಸ್ತಿಪಟು ವಿನೇಶ್ ಫೋಗಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಮತ್ತು ದೆಹಲಿ ಪೊಲೀಸರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ . ತಮ್ಮ ಮೇಲೆ ಹಲ್ಲೆ ನಡೆಸಿದವರು ದೆಹಲಿ ಪೊಲೀಸ್ ಸಿಬ್ಬಂದಿ ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.
#WATCH | Delhi: A scuffle breaks out between protesting wrestlers and Delhi Police at Jantar Mantar pic.twitter.com/gzPJiPYuUU
— ANI (@ANI) May 3, 2023
ಆದರೆ ದಾಳಿಕೋರರ ಗುರುತಿನ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ರಾಷ್ಟ್ರ ರಾಜಧಾನಿಯ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್ನಲ್ಲಿ ಜನರು ಹಿಂಸಾಚಾರಕ್ಕೆ ಸಾಕ್ಷಿಯಾಗಿರುವುದು ಇದೇ ಮೊದಲು. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿರುವ ವಿಡಿಯೋದಲ್ಲಿ ಸ್ಥಳದಲ್ಲಿ ಕುಸ್ತಿಪಟುಗಳು ದೆಹಲಿ ಪೊಲೀಸರ ಸಮವಸ್ತ್ರದ ಸದಸ್ಯರೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದಾಗಿದೆ.
ಘಟನೆ ಬಗ್ಗೆ ಪ್ರತಿಭಟನಾ ಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಸ್ತಿಪಟು ಬಜರಂಗ್ ಪುನಿಯಾ, "ನಮಗೆ ಇಡೀ ದೇಶದ ಬೆಂಬಲದ ಅಗತ್ಯವಿದೆ, ಎಲ್ಲರೂ ದೆಹಲಿಗೆ ಬರಬೇಕು. ಪೊಲೀಸರು ನಮ್ಮ ವಿರುದ್ಧ ಬಲಪ್ರಯೋಗ ಮಾಡುತ್ತಿದ್ದಾರೆ, ಮಹಿಳೆಯರನ್ನು ನಿಂದಿಸುತ್ತಿದ್ದಾರೆ. ಆದರೆ, ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಏನನ್ನೂ ಮಾಡಿಲ್ಲ" ಎಂದು ಕಿಡಿಕಾರಿದ್ದಾರೆ.

ಏಪ್ರಿಲ್ 23 ರಿಂದ ಜಂತರ್ ಮಂತರ್ನಲ್ಲಿ ಧರಣಿ ನಡೆಸುತ್ತಿರುವ ಕುಸ್ತಿಪಟುಗಳು, ಮಳೆಯಿಂದ ಹಾಸಿಗೆಗಳು ಒದ್ದೆಯಾದ ಕಾರಣ ಮಡಚುವ ಹಾಸಿಗೆಗಳನ್ನು ತರುತ್ತಿದ್ದರು. ಇದಕ್ಕೂ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆಯ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಸೋಮನಾಥ್ ಭಾರ್ತಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮತಿಯಿಲ್ಲದೆ ಮಡಚುವ ಹಾಸಿಗೆಗಳೊಂದಿಗೆ ಶಾಸಕರು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಕುಸ್ತಿಪಟುಗಳು ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಹಾಕಿರುವ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಸಂಸದ ಮತ್ತು ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಸಂಸತ್ರಸ್ತರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದಾರೆ. ಸುಪ್ರೀಂಕೋರ್ಟ್ ಮಧ್ಯ ಪ್ರವೇಶದ ನಂತರ ದೆಹಲಿ ಪೊಲೀಸರು ಶುಕ್ರವಾರ ಡಬ್ಲ್ಯುಎಫ್ಐ ಅಧ್ಯಕ್ಷರ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications