ನಿಮ್ಮ ಮೊಬೈಲ್ಗೆ ತುರ್ತು ಎಚ್ಚರಿಕೆ ಫ್ಲಾಷ್ ಮೆಸೇಜ್ ಬಂದಿದೆಯಾ? ಏನಿದರ ಅರ್ಥ ತಿಳಿಯಿರಿ
ಭಾರಿ ಮಳೆ, ಪ್ರವಾಹ, ಭೂಕಂಪ, ಸುನಾಮಿಯಂತಹ ತುರ್ತು ಸಂದರ್ಭಗಳಲ್ಲಿ ಜನರನ್ನು ಎಚ್ಚರಿಸುವುದು ಅಗತ್ಯ, ಇದು ಎಷ್ಟೋ ಜೀವಗಳನ್ನು ಉಳಿಸಲು ಸಹಕಾರಿಯಾಗಿದೆ. ಆದರೆ ಜನರಿಗೆ ಈ ರೀತಿ ಸಂದೇಶ ಕಳುಹಿಸುವುದು ಹೇಗೆ? ಅಂತಹದ್ದೊಂದು ಕೆಲಸವನ್ನು ಭಾರತ ಸರ್ಕಾರ ಕೈಗೆತ್ತಿಕೊಂಡಿದೆ.
ದೂರಸಂಪರ್ಕ ಇಲಾಖೆ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಹಲವಾರು ಸ್ಮಾರ್ಟ್ಫೋನ್ಗಳಲ್ಲಿ ಪರೀಕ್ಷಾ ಫ್ಲಾಶ್ ಕಳುಹಿಸುವ ಮೂಲಕ ಪರೀಕ್ಷಿಸಿದೆ. ಬಳಕೆದಾರರು ತಮ್ಮ ಫೋನ್ಗಳಲ್ಲಿ 'ತುರ್ತು ಎಚ್ಚರಿಕೆ: ತೀವ್ರ' ಫ್ಲ್ಯಾಷ್ನೊಂದಿಗೆ ಜೋರಾಗಿ ಬೀಪ್ ಶಬ್ದವನ್ನು ಕೇಳಿದ್ದಾರೆ. ಇಂದು ಮಧ್ಯಾಹ್ನ 1.35ಕ್ಕೆ ಆಂಡ್ರಾಯ್ಡ್ ಫೋನ್ ಬಳಕೆದಾರರಿಗೆ ಈ ಫ್ಲಾಶ್ ಸಂದೇಶ ಬಂದಿದೆ.

"ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ ಏಕೆಂದರೆ ನಿಮ್ಮ ಕಡೆಯಿಂದ ಯಾವುದೇ ಕ್ರಮದ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಟೆಸ್ಟ್ ಪ್ಯಾನ್-ಇಂಡಿಯಾ (TEST Pan-India) ತುರ್ತು ಎಚ್ಚರಿಕೆ ವ್ಯವಸ್ಥೆಗೆ ಕಳುಹಿಸಲಾಗಿದೆ . ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ" ಎಂದು ಫ್ಲಾಶ್ ಸಂದೇಶದಲ್ಲಿ ತಿಳಿಸಲಾಗಿದೆ.
ಆಂಡ್ರಾಯ್ಡ್ ಫೋನ್ಗಳಿಗೆ ಸಂದೇಶ
ಮೊಬೈಲ್ ಆಪರೇಟರ್ಗಳು ಮತ್ತು ಸೆಲ್ ಬ್ರಾಡ್ಕಾಸ್ಟ್ ಸಿಸ್ಟಮ್ಗಳ ತುರ್ತು ಎಚ್ಚರಿಕೆ ಪ್ರಸಾರ ಸಾಮರ್ಥ್ಯಗಳ ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ನಿರ್ಣಯಿಸಲು ವಿವಿಧ ಪ್ರದೇಶಗಳಲ್ಲಿ ಕಾಲಕಾಲಕ್ಕೆ ಇಂತಹ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ದೂರಸಂಪರ್ಕ ಇಲಾಖೆಯ ಸೆಲ್ ಬ್ರಾಡ್ಕಾಸ್ಟಿಂಗ್ ಸಿಸ್ಟಮ್ ತಿಳಿಸಿದೆ.
Many ppl are getting the below message. Nothing to worry No Action required.
— Vinod (@vinodgounder7) August 17, 2023
This is a SAMPLE TESTING MESSAGE sent through Cell Broadcasting System by Deprt of Telecom. This message has been sent to TEST Pan-India Emergency Alert System being implemented by GOI #telecom #India pic.twitter.com/SHvXaUvl6n
ಭೂಕಂಪಗಳು, ಸುನಾಮಿಗಳು ಮತ್ತು ಹಠಾತ್ ಪ್ರವಾಹಗಳಂತಹ ವಿಪತ್ತುಗಳಿಗೆ ಉತ್ತಮವಾಗಿ ಸನ್ನದ್ಧವಾಗಿರಲು ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದೊಂದಿಗೆ ಕೆಲಸ ಮಾಡುತ್ತಿದೆ. ಭಾರತದಲ್ಲಿನ ಫೋನ್ ಬಳಕೆದಾರರು ಜುಲೈ 20 ರಂದು ಇದೇ ರೀತಿಯ ಪರೀಕ್ಷಾ ಎಚ್ಚರಿಕೆಯನ್ನು ಸ್ವೀಕರಿಸಿದ್ದರು.
ಇದು ನಾಗರೀಕರನ್ನು ವಿಪತ್ತುಗಳಿಂದ ತಪ್ಪಿಸಲು ಸಹಾಯ ಮಾಡುತ್ತದೆ. ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಭಾರಿ ಮಳೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ, ಹಲವು ಕಡೆಗಳಲ್ಲಿ ಹಠಾತ್ ಪ್ರವಾಹ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಿದರೆ, ನಾಗರಿಕರು ಮುನ್ನೆಚ್ಚರಿಕೆ ವಹಿಸುವುದು, ಸುರಕ್ಷಿತ ಸ್ಥಳಗಳನ್ನು ಸೇರಿಕೊಳ್ಳಲು ಅನುಕೂಲಕರವಾಗಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications