ಟ್ಯಾಗೋರ್ ಖುರ್ಚಿ ಮೇಲೆ ಕುಳಿತಿರಲಿಲ್ಲ: ಅಮಿತ್ ಶಾ ಸ್ಪಷ್ಟನೆ
ನವದೆಹಲಿ, ಫೆಬ್ರವರಿ 9: ಕಳೆದ ತಿಂಗಳು ಪಶ್ಚಿಮ ಬಂಗಾಳದ ಶಾಂತಿನಿಕೇತನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರವೀಂದ್ರನಾಥ್ ಟ್ಯಾಗೋರ್ ಅವರ ಖುರ್ಚಿಯ ಮೇಲೆ ತಾವು ಕುಳಿತುಕೊಂಡಿದ್ದಾಗಿ ಕಾಂಗ್ರೆಸ್ ಮಾಡಿರುವ ಆರೋಪವನ್ನು ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ.
ಜನವರಿ 20ರಂದು ವಿಶ್ವಭಾರತಿಗೆ ತೆರಳಿದ್ದ ಅಮಿತ್ ಶಾ ಅವರು ಟ್ಯಾಗೋರ್ ಅವರಿಗೆ ಸೇರಿದ್ದ ಖುರ್ಚಿಯ ಮೇಲೆ ಕೂರುವ ಮೂಲಕ ಅವರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ಆರೋಪಿಸಿದ್ದರು. ಇದು ತಪ್ಪು ಮಾಹಿತಿ. ಟ್ಯಾಗೋರ್ ಅವರೇ ಸ್ಥಾಪಿಸಿದ್ದ ವಿಶ್ವವಿದ್ಯಾಲಯದ ಉಪ ಕುಲಪತಿ ಈ ಬಗ್ಗ ಖಾತರಿಪಡಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
'ಶಾಂತಿನಿಕೇತನಕ್ಕೆ ನನ್ನ ಭೇಟಿಯ ಸಂದರ್ಭದಲ್ಲಿ ನಾನು ರವೀಂದ್ರನಾಥ್ ಟ್ಯಾಗೋರ್ ಅವರ ಖುರ್ಚಿಯ ಮೇಲೆ ಕುಳಿತಿದ್ದುದಾಗಿ ಅಧೀರ್ ರಂಜನ್ ಚೌಧುರಿ ಅವರು ನಿನ್ನೆ ಆರೋಪಿಸಿದ್ದಾರೆ. ವಿಶ್ವ ಭಾರತಿಯ ಉಪ ಕುಲಪತಿಯ ಪತ್ರ ನನ್ನ ಬಳಿ ಇದೆ. ಅಲ್ಲಿಂದ ಅಂತಹ ಘಟನೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾನು ಕಿಟಕಿ ಸಮೀಪದಲ್ಲಿ ಕುಳಿತಿದ್ದೆ. ಅಲ್ಲಿ ಯಾರು ಬೇಕಾದರೂ ಕೂರಬಹುದು' ಎಂದು ಅವರು ತಿಳಿಸಿದ್ದಾರೆ.
मैं तो उस कुर्सी पर नहीं बैठा, लेकिन मेरे पास दो फोटो हैं, जिसमें एक पर जवाहर लाल नेहरू जी उस कुर्सी पर बैठे दिख रहे हैं।
— BJP (@BJP4India) February 9, 2021
दूसरी फोटो में राजीव गांधी टैगोर साहब के सोफे पर बैठकर चाय पीते दिख रहे हैं।
- श्री @AmitShah pic.twitter.com/Z9Nns3eJ7W
'ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್, ಪ್ರಣಬ್ ಮುಖರ್ಜಿ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಕೂಡ ಅದೇ ಜಾಗದಲ್ಲಿ ಕುಳಿತಿದ್ದರು. ನಾನು ಟ್ಯಾಗೋರ್ ಖುರ್ಚಿಯ ಮೇಲೆ ಕುಳಿತಿರಲಿಲ್ಲ. ಆದರೆ ಪಂಡಿತ್ ನೆಹರೂ ಮತ್ತು ರಾಜೀವ್ ಗಾಂಧಿ ಅವರು ಟ್ಯಾಗೋರ್ ಖುರ್ಚಿಯ ಮೇಲೆ ಕುಳಿತ ಫೋಟೊಗಳಿವೆ' ಎನ್ನುವ ಮೂಲಕ ತಮ್ಮ ಮೇಲೆ ಮಾಡಿರುವ ಆರೋಪದ ಕೃತ್ಯವನ್ನು ವಾಸ್ತವವಾಗಿ ಕಾಂಗ್ರೆಸ್ ನಾಯಕರೇ ಮಾಡಿದ್ದರು ಎಂದು ತಿರುಗೇಟು ನೀಡಿದ್ದಾರೆ.

ರಾಜೀವ್ ಗಾಂಧಿ ಅವರು ಟ್ಯಾಗೋರ್ ಅವರ ಸೋಫಾ ಮೇಲೆ ಕುಳಿತು ಟೀ ಕುಡಿದಿದ್ದರು ಎಂದು ಫೋಟೊಗಳನ್ನು ಬಿಜೆಪಿ ಹಂಚಿಕೊಂಡಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications