ಗ್ರಾಮಗಳಿಗೆ ಬ್ರಾಡ್ಬ್ಯಾಂಡ್ ಒದಗಿಸಲು 19,041 ಕೋಟಿ ರೂ ಮೀಸಲು
ನವದೆಹಲಿ, ಜೂನ್ 29: ಕೋವಿಡ್-19 ಸಾಂಕ್ರಾಮಿಕ ಪೀಡಿತ ಕ್ಷೇತ್ರಗಳಿಗೆ ಮೋದಿ ಸರ್ಕಾರ ಆರ್ಥಿಕ ಪ್ಯಾಕೇಜ್ ಮುಂದುವರೆಸಿದೆ. ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ನವದೆಹಲಿಯಲ್ಲಿ ಆರ್ಥಿಕ ಪರಿಹಾರ ಪ್ಯಾಕೇಜ್ ಘೋಷಿಸಿದರು.
ಪ್ರಗತಿ ಮತ್ತು ಉದ್ಯೋಗಕ್ಕೆ ಉತ್ತೇಜನ ನೀಡಲು ಸರ್ಕಾರವು ವಿಶೇಷ ಗಮನ ನೀಡಿದ್ದು,ಎಂಟು ಯೋಜನೆಗಳನ್ನು ಘೋಷಿಸಲಾಯಿತು. ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ಭಾರತ್ ನೆಟ್ ಪಿಪಿಪಿ ಮಾದರಿ ಮೂಲಕ ಪ್ರತಿ ಗ್ರಾಮಕ್ಕೆ ಬ್ರಾಡ್ಬ್ಯಾಂಡ್ ಕಲ್ಪಿಸಲು 19,041 ಕೋಟಿ ರೂ ಮೀಸಲಿಡಲಾಗಿದೆ.
2,50,000 ಗ್ರಾಮ ಪಂಚಾಯಿತಿಗಳ ಪೈಕಿ, 1,56,223 ಗ್ರಾಮ ಪಂಚಾಯಿತಿಗಳಲ್ಲಿ 2021 ಮೇ 31 ರೊಳಗೆ ಸೇವೆ ಒದಗಿದಲಾಗಿದೆ. 16 ರಾಜ್ಯಗಳಲ್ಲಿ (9 ಪ್ಯಾಕೇಜ್ ಗಳಾಗಿ ಒಟ್ಟುಗೂಡಿಸಲಾಗಿದೆ) ಪಿಪಿಪಿ ಮಾದರಿಯಲ್ಲಿ ಭಾರತ್ ನೆಟ್ ಅನ್ನು ಕಾರ್ಯಸಾಧ್ಯತೆಯ ಆಧಾರದ ಮೇಲೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 19,041 ಕೋಟಿ ರೂ. ಒದಗಿಸಲಾಗುವುದು. ಹೀಗಾಗಿ, ಭಾರತ್ ನೆಟ್ ಅಡಿಯಲ್ಲಿ ಒಟ್ಟು ವಿನಿಯೋಗವನ್ನು 61,109 ಕೋಟಿ ರೂ.ಗೆ ಹೆಚ್ಚಿಸಲಾಗುವುದು. ಇದು ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಜನವಸತಿ ಗ್ರಾಮಗಳನ್ನು ಒಳಗೊಳ್ಳಲು ಭಾರತ್ ನೆಟ್ ವಿಸ್ತರಣೆ ಮತ್ತು ನವೀಕರಣಕ್ಕೆ ಅನುವು ಮಾಡಿಕೊಡುತ್ತದೆ.

ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಯೋಜನೆಗಳ ಅನುಮೋದನೆಯ ಪ್ರಸ್ತುತ ಪ್ರಕ್ರಿಯೆಗಳು ದೀರ್ಘವಾಗಿವೆ ಮತ್ತು ಅನೇಕ ಹಂತದ ಅನುಮೋದನೆಯನ್ನು ಒಳಗೊಂಡಿವೆ. ಪಿಪಿಪಿ ಪ್ರಸ್ತಾಪಗಳ ಮೌಲ್ಯಮಾಪನ ಮತ್ತು ಅನುಮೋದನೆ ಮತ್ತು ಇನ್ವಿಟ್ಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯ ಸ್ವತ್ತುಗಳಿಂದ ಹಣಗಳಿಕೆಗಾಗಿ ಹೊಸ ನೀತಿಯನ್ನು ರೂಪಿಸಲಾಗುವುದು. ಮೂಲಸೌಕರ್ಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಹಣಕಾಸು ಒದಗಿಸುವಲ್ಲಿ ಖಾಸಗಿ ವಲಯದ ದಕ್ಷತೆಗೆ ಅನುಕೂಲವಾಗುವಂತೆ ಯೋಜನೆಗಳ ತ್ವರಿತ ಅನುಮೋದನೆಯನ್ನು ಖಾತ್ರಿಪಡಿಸುವ ಗುರಿಯನ್ನು ಈ ನೀತಿಯು ಹೊಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications