2.5 ವರ್ಷಗಳಲ್ಲಿ 2.5 ಲಕ್ಷ ಗ್ರಾಮಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ
ನವದೆಹಲಿ, ಜುಲೈ 08: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದೆನಿಸಿರುವ 'ಡಿಜಿಟಲ್ ಇಂಡಿಯಾ' ಮೂಲಕ ದೇಶದ 2.5 ಲಕ್ಷಕ್ಕೂ ಅಧಿಕ ಗ್ರಾಮಗಳಿಗೆ ಬ್ರಾಡ್ ಬ್ಯಾಂಡ್ ಇಂಟರ್ನೆಟ್ ಸಂಪರ್ಕ ಒದಗಿಸಲಾಗುವುದು ಎಂದು ಟೆಲಿಕಾಂ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಿ ಡಾಟ್ ಉತ್ಪಾದನೆಯ ನಾಲ್ಕು ಬ್ರಾಡ್ ಬ್ಯಾಂಡ್ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದ ನಂತರ ಸಚಿವ ರವಿಶಂಕರ್ ಪ್ರಸಾದ್ ಮಾತನಾಡಿ, 'ಭಾರತೀಯ ದೂರವಾಣಿ ಬಳಕೆದಾರರ ಸಂಖ್ಯೆ ನೂರು ಕೋಟಿ ದಾಟಿದ್ದು, ಇದರಲ್ಲಿ 97.8 ಕೋಟಿ ಜನರು ಮೊಬೈಲ್ ಬಳಕೆದಾರರಿದ್ದಾರೆ. ಮುಂದಿನ ಎರಡೂವರೆ ವರ್ಷಗಳಲ್ಲಿ 2.5 ಲಕ್ಷ ಗ್ರಾಮಗಳಿಗೆ ಇಂಟರ್ನೆಟ್ ಸಂಪರ್ಕ ಸಿಗಲಿದೆ. 500 ಮಿಲಿಯನ್ ತನಕ ಬಳಕೆದಾರರ ಸಂಖ್ಯೆ ಹೆಚ್ಚಿಸಲಾಗುವುದು ಎಂದರು.

ಸುಮಾರು 125 ಕೋಟಿ ಜನಸಂಖ್ಯೆ ಹೊಂದಿರುವ ದೇಶದಲ್ಲಿ 100 ಕೋಟಿ ಜನರು ದೂರವಾಣಿ ಸಂಪರ್ಕ ಹೊಂದಿರುವುದು ಉತ್ತಮ ಬೆಳವಣಿಗೆ. ಇದರಲ್ಲಿ 30 ಕೋಟಿ ಬಳಕೆದಾರರು ಇಂಟರ್ನೆಟ್ ಬಳಸಿಕೊಳ್ಳುತ್ತಿದ್ದು, ಮುಂದಿನ ಎರಡು ವರ್ಷಗಳ ಅವಧಿಯಲ್ಲಿ 50 ಕೋಟಿ ಜನರಿಗೆ ಇಂಟರ್ನೆಟ್ ಸೌಲಭ್ಯ ಸಿಗಲಿದೆ ಎಂದು ಹೇಳಿದರು.
Centre for Development of Telematics (ಸಿ-ಡಾಟ್) ಅಭಿವೃದ್ಧಿಪಡಿಸಿರುವ ದೂರವ್ಯಾಪಿ ವೈಫೈ ವ್ಯವಸ್ಥೆ, ಸೌರಶಕ್ತಿ ಆಧರಿತ ವೈ-ಫೈ ವ್ಯವಸ್ಥೆ , 100 ಜಿಬಿಪಿಎಸ್ ಆಫ್ಟಿಕಲ್ ಕೇಬಲ್ ಲಿಂಕ್(ಸುತೀವ್ರ) ಮತ್ತು ಸಿ-ಡಾಟ್ ನೆಕ್ಸ್ಟ್ ಜನರೇಷನ್ ನೆಟ್ವರ್ಕ್ ಉದ್ಘಾಟಿಸಿದರು.ಐಟಿ ಪಾರ್ಕ್, ಕೈಗಾರಿಕಾ ಕಾಂಪ್ಲೆಕ್ಸ್, ನಗರದ ಆಂತರಿಕ ಇಂಟರ್ನೆಟ್ ಟ್ರಾಫಿಕ್ ಹಾಗೂ ಡಾಟಾ ಸೆಂಟರ್ ಗಳಿಗೆ ಈ ಉತ್ಪನ್ನಗಳು ಪ್ರಯೋಜನಕಾರಿ ಎಂದು ಸಚಿವರು ತಿಳಿಸಿದರು. (ಐಎಎನ್ ಎಸ್)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications