ದೇವಯಾನಿ ಪ್ರಕರಣ; ಕ್ಷಮೆಯಾಚಿಸಲ್ಲ ಎಂದ ಅಮೆರಿಕ
ವಾಷಿಂಗ್ಟನ್/ನವದೆಹಲಿ, ಡಿ.20: ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಅವರ ಜತೆ ಅಮಾನವೀಯವಾಗಿ ನಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿಂದರೆ ಕ್ಷಮೆ ಕೇಳಬೇಕು ಮತ್ತು ಅವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಅಮೆರಿಕಕ್ಕೆ ಭಾರತ ಮಾಡಿದ ಮನವಿ ಕಸದ ಬುಟ್ಟಿಗೆ ಬಿದ್ದಿದೆ.
'ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ದೇವಯಾನಿ ಅವರ ಮೇಲಿನ ಆರೋಪಗಳಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದು ಕಾನೂನಿಗೆ ಸಂಬಂಧಿಸಿದ ವಿಚಾರ' ಎಂದು ಅಮರಿಕ ರಾಜ್ಯ ವಕ್ತಾರ ಮರಿಯಾ ಹರ್ಫ್ ಅವರು ತಿಳಿಸಿದ್ದಾರೆ. ಆದರೆ, ದೇವಯಾನಿ ಅವರಿಗೆ ಶಿಕ್ಷೆಯಿಂದ ವಿನಾಯತಿ ನೀಡುತ್ತಿರಾ ಮತ್ತು ಅಮೆರಿಕ ನ್ಯಾಯಾಲಯದಲ್ಲಿ ಅವರ ಮೇಲಿನ ಆರೋಪಗಳನ್ನು ಕೈ ಬಿಡುತ್ತಿರಾ ಎಂಬ ವರದಿಗಾರರ ಪ್ರಶ್ನೆಗೆ, ಇಲ್ಲ. ಯಾರೂ ಆರೋಪಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಉತ್ತರಿಸಿದ್ದಾರೆ.

ಭಾರತೀಯ ರಾಜತಾಂತ್ರಿಕ ಅಧಿಕಾರಿಯ ವಿರುದ್ಧದ ಆರೋಪಗಳನ್ನು ಕೈಬಿಡಲು ನಿರಾಕರಿಸಿದ ಹರ್ಫ್, ದೇವಯಾನಿ ವಿರುದ್ಧದ ದೂರಿನ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಹೀಗಾಗಿ ನಾನು ಆ ಬಗ್ಗೆ ಏನನ್ನು ಹೇಳುವುದಿಲ್ಲ ಎಂದಿದ್ದಾರೆ. ದೇವಯಾನಿ ಪ್ರಕರಣದ ಬೆಳವಣಿಗೆಗಳ ಮುಖ್ಯಾಂಶ ಇಲ್ಲಿ ಓದಿ:
* ಭಾರತಕ್ಕೆ ಯುಎಸ್ ರಾಯಭಾರಿ ನ್ಯಾನ್ಸಿ ಪೊವೆಲ್ ಅವರು ವಿದೇಶಾಂಗ ಖಾತೆ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
* ದೇವಯಾನಿ ಜತೆಗಿನ ಅಮಾನವೀಯ ವರ್ತನೆಗೆ ಅಮೆರಿಕ ವಿಷಾದ ವ್ಯಕ್ತಪಡಿಸಿತ್ತು. ಇದನ್ನು ತಿರಸ್ಕರಿಸಿದ್ದ ಭಾರತ, ವಿಷಾದ ವ್ಯಕ್ತಪಡಿಸಿದರೆ ಸಾಲದು ಅಮೆರಿಕ ತನ್ನ ತಪ್ಪಿಗಾಗಿ ಕ್ಷಮೆ ಕೋರಬೇಕು ಎಂದು ಪಟ್ಟುಹಿಡಿದಿದೆ.
* ದೇವಯಾನಿ ವಿರುದ್ಧ ದಾಖಲಿಸಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಕಮಲ್ ನಾಥ್ ಭಾರತ ಒತ್ತಾಯಿಸಿದೆ. ಆದರೆ, ಕಾನೂನು ಪ್ರಕಾರ ವಿಚಾರಣೆ ನಡೆಯಲೇಬೇಕು ಎಂದು ಅಮೆರಿಕ ಹೇಳಿದೆ.
* ಬಿಜೆಪಿ ವಕ್ತಾರ ಮುಖ್ತಾರ್ ಅಬ್ಬಾಸ್ ನಖ್ವಿ ಮಾತನಾಡಿ, ಅಮೆರಿಕ ಕ್ಷಮೆಯಾಚಿಸಲೆ ಬೇಕು ಎಂದು ಒತ್ತಾಯಿಸಿದ್ದಾರೆ.
* ಈ ನಡುವೆ ದೇವಯಾನಿ ಅವರ ಮನೆ ಕೆಲಸಗಾರ್ತಿ ಸಂಗೀತ ರಿಚರ್ಡ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಭಾರತಕ್ಕೆ ಆಕೆ ಕಾಲಿಡುತ್ತಿದ್ದಂತೆ ಬಂಧಿಸುವ ಸಾಧ್ಯತೆಯಿದೆ. ದೆಹಲಿ ಕೋರ್ಟ್ ಸಂಗೀತ ಹಾಗೂ ಆಕೆ ಪತಿ ಫಿಲಿಫ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
* ದೇವಯಾನಿ ತಂದೆ ಉತ್ತಮ್ ಖೋಬ್ರಾಗಡೆ ಅವರು ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡು ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ನ್ಯಾಯ ಸಿಗದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಹೂಡುವುದಾಗಿ ಹೇಳಿದ್ದಾರೆ.
* ಈ ನಡುವೆ ಸಂಗೀತ ರಿಚರ್ಡ್ ಒಬ್ಬ ಯುಎಸ್ ಗೂಢಚಾರಿಣಿ ಎಂಬ ಸುದ್ದಿಗಳು ಹಬ್ಬಿವೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications