ದೇವಯಾನಿ ಪ್ರಕರಣ; ಕ್ಷಮೆಯಾಚಿಸಲ್ಲ ಎಂದ ಅಮೆರಿಕ
ವಾಷಿಂಗ್ಟನ್/ನವದೆಹಲಿ, ಡಿ.20: ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಅವರ ಜತೆ ಅಮಾನವೀಯವಾಗಿ ನಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿಂದರೆ ಕ್ಷಮೆ ಕೇಳಬೇಕು ಮತ್ತು ಅವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಅಮೆರಿಕಕ್ಕೆ ಭಾರತ ಮಾಡಿದ ಮನವಿ ಕಸದ ಬುಟ್ಟಿಗೆ ಬಿದ್ದಿದೆ.
'ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ದೇವಯಾನಿ ಅವರ ಮೇಲಿನ ಆರೋಪಗಳಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದು ಕಾನೂನಿಗೆ ಸಂಬಂಧಿಸಿದ ವಿಚಾರ' ಎಂದು ಅಮರಿಕ ರಾಜ್ಯ ವಕ್ತಾರ ಮರಿಯಾ ಹರ್ಫ್ ಅವರು ತಿಳಿಸಿದ್ದಾರೆ. ಆದರೆ, ದೇವಯಾನಿ ಅವರಿಗೆ ಶಿಕ್ಷೆಯಿಂದ ವಿನಾಯತಿ ನೀಡುತ್ತಿರಾ ಮತ್ತು ಅಮೆರಿಕ ನ್ಯಾಯಾಲಯದಲ್ಲಿ ಅವರ ಮೇಲಿನ ಆರೋಪಗಳನ್ನು ಕೈ ಬಿಡುತ್ತಿರಾ ಎಂಬ ವರದಿಗಾರರ ಪ್ರಶ್ನೆಗೆ, ಇಲ್ಲ. ಯಾರೂ ಆರೋಪಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಉತ್ತರಿಸಿದ್ದಾರೆ.

ಭಾರತೀಯ ರಾಜತಾಂತ್ರಿಕ ಅಧಿಕಾರಿಯ ವಿರುದ್ಧದ ಆರೋಪಗಳನ್ನು ಕೈಬಿಡಲು ನಿರಾಕರಿಸಿದ ಹರ್ಫ್, ದೇವಯಾನಿ ವಿರುದ್ಧದ ದೂರಿನ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಹೀಗಾಗಿ ನಾನು ಆ ಬಗ್ಗೆ ಏನನ್ನು ಹೇಳುವುದಿಲ್ಲ ಎಂದಿದ್ದಾರೆ. ದೇವಯಾನಿ ಪ್ರಕರಣದ ಬೆಳವಣಿಗೆಗಳ ಮುಖ್ಯಾಂಶ ಇಲ್ಲಿ ಓದಿ:
* ಭಾರತಕ್ಕೆ ಯುಎಸ್ ರಾಯಭಾರಿ ನ್ಯಾನ್ಸಿ ಪೊವೆಲ್ ಅವರು ವಿದೇಶಾಂಗ ಖಾತೆ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
* ದೇವಯಾನಿ ಜತೆಗಿನ ಅಮಾನವೀಯ ವರ್ತನೆಗೆ ಅಮೆರಿಕ ವಿಷಾದ ವ್ಯಕ್ತಪಡಿಸಿತ್ತು. ಇದನ್ನು ತಿರಸ್ಕರಿಸಿದ್ದ ಭಾರತ, ವಿಷಾದ ವ್ಯಕ್ತಪಡಿಸಿದರೆ ಸಾಲದು ಅಮೆರಿಕ ತನ್ನ ತಪ್ಪಿಗಾಗಿ ಕ್ಷಮೆ ಕೋರಬೇಕು ಎಂದು ಪಟ್ಟುಹಿಡಿದಿದೆ.
* ದೇವಯಾನಿ ವಿರುದ್ಧ ದಾಖಲಿಸಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಕಮಲ್ ನಾಥ್ ಭಾರತ ಒತ್ತಾಯಿಸಿದೆ. ಆದರೆ, ಕಾನೂನು ಪ್ರಕಾರ ವಿಚಾರಣೆ ನಡೆಯಲೇಬೇಕು ಎಂದು ಅಮೆರಿಕ ಹೇಳಿದೆ.
* ಬಿಜೆಪಿ ವಕ್ತಾರ ಮುಖ್ತಾರ್ ಅಬ್ಬಾಸ್ ನಖ್ವಿ ಮಾತನಾಡಿ, ಅಮೆರಿಕ ಕ್ಷಮೆಯಾಚಿಸಲೆ ಬೇಕು ಎಂದು ಒತ್ತಾಯಿಸಿದ್ದಾರೆ.
* ಈ ನಡುವೆ ದೇವಯಾನಿ ಅವರ ಮನೆ ಕೆಲಸಗಾರ್ತಿ ಸಂಗೀತ ರಿಚರ್ಡ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಭಾರತಕ್ಕೆ ಆಕೆ ಕಾಲಿಡುತ್ತಿದ್ದಂತೆ ಬಂಧಿಸುವ ಸಾಧ್ಯತೆಯಿದೆ. ದೆಹಲಿ ಕೋರ್ಟ್ ಸಂಗೀತ ಹಾಗೂ ಆಕೆ ಪತಿ ಫಿಲಿಫ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
* ದೇವಯಾನಿ ತಂದೆ ಉತ್ತಮ್ ಖೋಬ್ರಾಗಡೆ ಅವರು ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡು ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ನ್ಯಾಯ ಸಿಗದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಹೂಡುವುದಾಗಿ ಹೇಳಿದ್ದಾರೆ.
* ಈ ನಡುವೆ ಸಂಗೀತ ರಿಚರ್ಡ್ ಒಬ್ಬ ಯುಎಸ್ ಗೂಢಚಾರಿಣಿ ಎಂಬ ಸುದ್ದಿಗಳು ಹಬ್ಬಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications