ನಟ ರಣಬೀರ್ ಕಪೂರ್ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ, ಕಾರಣವೇನು ಗೊತ್ತಾ?
ನವದೆಹಲಿ, ಅಕ್ಟೋಬರ್ 04: ಗೇಮಿಂಗ್ ಆಪ್ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಣಬೀರ್ ಕಪೂರ್ಗೆ ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಮಹಾದೇವ್ ಆನ್ಲೈನ್ ಬುಕ್ ಬೆಟ್ಟಿಂಗ್ ಆಪ್ಗೆ ರಣಬೀರ್ ಕಪೂರ್ ಸೋಷಿಯಲ್ ಮೀಡಿಯಾ ಇನ್ಪ್ಲೂಯನ್ಸರ್ ಆಗಿದ್ದಾರೆ. ಅಲ್ಲದೆ ಈ ಆಪ್ಗಾಗಿ ಪ್ರಚಾರ ಕೈಗೊಳ್ಳಲು ಹಣವನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ವಿಚಾರಣೆಗೆ ರಣಬೀರ್ ಕಪೂರ್ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಬಾಲಿವುಡ್ ನಟರು, ಗಾಯಕರು ಮತ್ತು ಹಾಸ್ಯನಟರು ಸೇರಿದಂತೆ ಹಲವಾರು ಖ್ಯಾತ ಸೆಲೆಬ್ರಿಟಿಗಳು ದುಬೈನಲ್ಲಿ ಆನ್ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ನ ಸಹ-ಪ್ರವರ್ತಕ ಸೌರಭ್ ಚಂದ್ರಕರ್ ಅವರ ಅದ್ದೂರಿ ವಿವಾಹದಲ್ಲಿ ಭಾಗವಹಿಸಿದ್ದಕ್ಕಾಗಿ ತನಿಖಾ ಸಂಸ್ಥೆಯ ವಿಚಾರಣೆಗೆ ಒಳಗಾಗಬೇಕಿದೆ. ಆಪ್ ವಿರುದ್ಧ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲವು ಸೆಲೆಬ್ರಿಟಿಗಳನ್ನು ಸಾಕ್ಷಿಗಳಾಗಿ ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ಏಜೆನ್ಸಿ ಮೂಲಗಳು ತಿಳಿಸಿವೆ.
ಕಳೆದ ತಿಂಗಳು ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ವಂಚನೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ ₹ 417 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿತ್ತು.
ಏನಿದು ಮಹದೇವ್ ಆನ್ಲೈನ್ ಬೆಟ್ಟಿಂಗ್ ಆಪ್ ಕೇಸ್?
ಮಹದೇವ್ ಆನ್ಲೈನ್ ಬುಕ್ ಆ್ಯಪ್ ಯುಎಇಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಇದರೊಂದಿಗೆ ಸಂಪರ್ಕ ಹೊಂದಿದ ಮನಿ ಲಾಂಡರಿಂಗ್ ನೆಟ್ವರ್ಕ್ಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೋಲ್ಕತ್ತಾ, ಭೋಪಾಲ್, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಹುಡುಕಾಟ ನಡೆಸಿತ್ತು.
ಈ ಬೃಹತ್ ಪ್ರಮಾಣದ ಹಣ ವರ್ಗಾವಣೆ ಕಾರ್ಯಾಚರಣೆಗಳನ್ನು ಆಫ್-ಶೋರ್ ಖಾತೆಗಳಿಗೆ ಬೆಟ್ಟಿಂಗ್ ಆದಾಯವನ್ನು ಸಿಫನ್ ಮಾಡಲು ವೇದಿಕೆಯನ್ನು ಬಳಸಿಕೊಂಡು ಮಾಡಲಾಗುತ್ತಿದೆ ಎಂದು ಆರೋಪ ಮಾಡಲಾಗಿದೆ. ಈ ಆಪ್ನ ಪ್ರಚಾರಕರು ಮದುವೆಗೆ ₹ 200 ಕೋಟಿ ಖರ್ಚು ಮಾಡಿದ್ದಾರೆ. ಇದರ ಫಲಾನುಭವಿಗಳನ್ನು ಹಿಡಿಯಲು ಸಂಸ್ಥೆ ಹಣದ ಹಾದಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ.
ಆರೋಪಿಗಳಾದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಪ್ರಸ್ತುತ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿದ್ದಾರೆ. ಜಾರಿ ನಿರ್ದೇಶನಾಲಯ ಮತ್ತು ಛತ್ತೀಸ್ಗಢ ಪೊಲೀಸರು ಆಗಸ್ಟ್ನಲ್ಲಿ ಆರೋಪಿಗಳ ವಿರುದ್ಧ ಲುಕ್ಔಟ್ ಸುತ್ತೋಲೆಗಳನ್ನು ಹೊರಡಿಸಿದ್ದಾರೆ. ಇವರಿಬ್ಬರು ಕಳೆದ ತಿಂಗಳು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲು ಪ್ರಯತ್ನಿಸಿದ್ದರು ಆದರೆ ಭಾರತದಲ್ಲಿ ಅಕ್ರಮ ಹಣ ವರ್ಗಾವಣೆಯ ತನಿಖೆಯಿಂದಾಗಿ ಪ್ರವೇಶವನ್ನು ನಿರಾಕರಿಸಲಾಯಿತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications