ಬಿಜೆಪಿ ಮೈತ್ರಿಕೂಟದಲ್ಲಿ ಮಹಾ ಬಿರುಕು: ತೆಲುಗುದೇಶಂ ಹೊರಕ್ಕೆ?
Recommended Video

ಶಿವಸೇನೆಯ ನಂತರ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಮತ್ತೊಂದು ಪ್ರಮುಖ ಸದಸ್ಯ ತೆಲುಗುದೇಶಂ ಪಾರ್ಟಿ ಕೂಟದಿಂದ ಹೊರಬರುವ ಸೂಚನೆಯನ್ನು ನೀಡಿದೆ. ಭಾನುವಾರ (ಫೆ 4) ನಡೆಯಲಿರುವ ಪಕ್ಷದ ಸದಸ್ಯರ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಟಿಡಿಪಿ ಹೇಳಿದೆ.
ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಾಲದಿಂದಲೂ ಬಿಜೆಪಿ ಮೈತ್ರಿಕೂಟದ ಜೊತೆ ಗುರುತಿಸಿಕೊಂಡಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು ಮೈತ್ರಿ ಮುರಿದುಕೊಳ್ಳುವ ಬೆದರಿಕೆಯನ್ನೊಡ್ಡಿತ್ತು.
ಮೊನ್ನೆ ಮಂಡಿಸಲಾದ ಕೇಂದ್ರ ಆಯವ್ಯಯದಲ್ಲಿ ಆಂಧ್ರಪ್ರದೇಶ ಸರಕಾರ ಸಲ್ಲಿಸಿದ್ದ ಯಾವುದೇ ಪ್ರಸ್ತಾವನೆಗೆ ಕೇಂದ್ರ ಸರಕಾರ ಸೊಪ್ಪು ಹಾಕದೇ ಇದ್ದದ್ದು, ಮೇಲ್ನೋಟಕ್ಕೆ ತೆಲುಗುದೇಶಂ ಪಕ್ಷಕ್ಕಿರುವ ಸಿಟ್ಟು. ಟಿಡಿಪಿ ಎರಡು ಪ್ರಮುಖ ಪ್ರಸ್ತಾವನೆಯನ್ನು ವಿತ್ತಸಚಿವ ಜೇಟ್ಲಿಗೆ ಸಲ್ಲಿಸಿತ್ತು.
ಆದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರತಿನಿಧಿಗಳು, ವೈಎಸ್ಆರ್ ಪಕ್ಷದ ಜಗನ್ಮೋಹನ್ ರೆಡ್ಡಿಯವರನ್ನು ಭೇಟಿಯಾಗಿದ್ದೂ, ಬಿಜೆಪಿ ಮೇಲೆ ಚಂದ್ರಬಾಬು ನಾಯ್ಡು ಅವರಿಗಿರುವ ಬೇಸರಕ್ಕೆ ಕಾರಣ ಎನ್ನಲಾಗುತ್ತಿದೆ. ಬಿಜೆಪಿ ಪ್ರತಿನಿಧಿಗಳು ಭೇಟಿಯಾದ ನಂತರ, ಬಿಜೆಪಿ ಸೇರಲು ನನಗೇನೂ ತಕರಾರಿಲ್ಲ ಎಂದು ಜಗನ್ ಹೇಳಿರುವುದರಿಂದ, ಬಿಜೆಪಿ-ಟಿಡಿಪಿ ನಡುವಿನ ವಿರಸ ಇನ್ನೊಂದು ಹಂತಕ್ಕೆ ಬಂದು ನಿಂತಿದೆ.
ಕೇಂದ್ರ ಬಜೆಟ್ ವಿರುದ್ದ ತೆಲುಗುದೇಶಂ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ಬಹುತೇಕ ಟಿಡಿಪಿ ಸದಸ್ಯರು ಮೈತ್ರಿಕೂಟದಿಂದ ಹೊರಬರಲು ಒಲವು ತೋರಿದ್ದಾರೆಂದು ಆಂಧ್ರದ ಪತ್ರಿಕೆಗಳು ವರದಿ ಮಾಡಿವೆ. ಮುಂದೆ ಓದಿ

ಆಂಧ್ರಪ್ರದೇಶದ ರಾಜಧಾನಿಯಾಗಿ ಅಮರಾವತಿ
ಅಖಂಡ ಆಂಧ್ರ ಇಬ್ಭಾಗವಾದ ನಂತರ, ಆಂಧ್ರಪ್ರದೇಶದ ರಾಜಧಾನಿಯಾಗಿ ಅಮರಾವತಿಯೆಂದು ಘೋಷಿಸಲಾಗಿತ್ತು. ಕೇಂದ್ರ ಸರಕಾರದ ವಿಶೇಷ ಅನುದಾನದಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಹೊಸ ರಾಜಧಾನಿಯ ಕೆಲವು ಯೋಜನೆಗಳನ್ನು, ಕೇಂದ್ರದ ಅನುಮತಿಯಿಲ್ಲದೇ ಚಂದ್ರಬಾಬು ನಾಯ್ಡು ಸರಕಾರ ಕೈಗೆತ್ತಿಕೊಂಡಿದೆ ಎನ್ನುವ ಮಾತು ಕೇಳಿಬರುತ್ತಿತ್ತು.

ಚಂದ್ರಬಾಬು ನಾಯ್ಡು ಸರಕಾರ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿತ್ತು
2018ರ ಸಾಲಿನ ಬಜೆಟ್ ನಲ್ಲಿ ಪೋಲವರಂ ಯೋಜನೆ ಮತ್ತು ಅಮರಾವತಿ ನಿರ್ಮಾಣಕ್ಕಾಗಿ ಹೊಸ ಪ್ಯಾಕೇಜ್ ಘೋಷಿಸಬೇಕೆಂದು ಚಂದ್ರಬಾಬು ನಾಯ್ಡು ಸರಕಾರ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಫೆಬ್ರವರಿ ಒಂದರಂದು ಮಂಡಿಸಲಾದ ಬಜೆಟಿನಲ್ಲಿ ಕೇಂದ್ರ ಈ ಬಗ್ಗೆ ಘೋಷಣೆ ಮಾಡಿರಲಿಲ್ಲ. ಇದು ಮೈತ್ರಿಯಲ್ಲಿನ ಅಪಸ್ವರಕ್ಕೆ ಮೇಲ್ನೋಟಕ್ಕೆ ಕಾಣುತ್ತಿರುವ ಕಾರಣ.

ಬಿಜೆಪಿ ಮೈತ್ರಿಕೂಟ ಸೇರಿಕೊಳ್ಳಲು ನನ್ನದೇನೂ ಅಭ್ಯಂತರವಿಲ್ಲ
ಪ್ರಜಾ ಸಂಕಲ್ಪ ಯಾತ್ರೆಯ ವೇಳೆ, ಬಿಜಿಪಿ ಮುಖಂಡರು ಜಗನ್ಮೋಹನ್ ರೆಡ್ಡಿಯವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ, ನಾನು ಬಿಜೆಪಿ ಜೊತೆ ಉತ್ತಮ ಸಂಬಂಧವನ್ನು ಹೊಂದಿದ್ದೇನೆ. ಆಂಧ್ರಪ್ರದೇಶದ ಅಭಿವೃದ್ದಿಗೆ ಕೇಂದ್ರ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಿದರೆ, 2019ರ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಸೇರಿಕೊಳ್ಳಲು ನನ್ನದೇನೂ ಅಭ್ಯಂತರವಿಲ್ಲ ಎಂದು ಜಗನ್ ಹೇಳಿರುವುದು, ಟಿಡಿಪಿ ಮುಖಂಡರ ಕಣ್ಣು ಕೆಂಪಗಾಗಿಸಿದೆ.

ಸದಸ್ಯ ಪಕ್ಷಗಳಿಗೆ ತೆಲುಗುದೇಶಂ ಬಹಿರಂಗ ಆಹ್ವಾನ
ಬಜೆಟ್ ಮಂಡಣೆಯಾದ ನಂತರ ಎನ್ಡಿಎ ಮೈತ್ರಿಕೂಟದಿಂದ ಹೊರಬನ್ನಿ ಎಂದು ಕೂಟದ ಇತರ ಸದಸ್ಯ ಪಕ್ಷಗಳಿಗೆ ತೆಲುಗುದೇಶಂ ಬಹಿರಂಗ ಆಹ್ವಾನ ನೀಡಿದೆ. ಸರಕಾರದಿಂದ ತೆಲುಗುದೇಶಂ ಸಚಿವರನ್ನು ವಾಪಸ್ ಕರೆಸಿಕೊಳ್ಳಿ ಎಂದು ಟಿಡಿಪಿ ಮುಖಂಡರು, ಚಂದ್ರಬಾಬು ನಾಯ್ಡುಗೆ ಮನವಿ ಮಾಡಿದ್ದಾರೆ. ಅಶೋಕ್ ಗಜಪತಿ ರಾಜು ಮತ್ತು ವೈ ಎಸ್ ಚೌಧುರಿ ಕೇಂದ್ರ ಸಚಿವ ಸಂಪುಟದಲ್ಲಿದ್ದಾರೆ.

ಏಕಾಂಗಿಯಾಗುವ ಭಯ ಟಿಡಿಪಿ ಮತ್ತು ಶಿವಸೇನೆಗೆ
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸಂಬಂಧ ತೀರಾ ಹಳಸಿದ್ದು ಮೈತ್ರಿಕೂಟದಿಂದ ಹೊರಬರುವುದಾಗಿ ಈಗಾಗಲೇ ಸೇನೆ ಎಚ್ಚರಿಕೆ ನೀಡಿದೆ. ಆದರೆ, ತೃತೀಯ ರಂಗ ಅಸ್ತಿತ್ವದಲ್ಲಿ ಇಲ್ಲದೇ ಇರುವುದರಿಂದ ಜೊತೆಗೆ ಯುಪಿಎ ಮೈತ್ರಿಕೂಟಕ್ಕೆ ಸೇರಲು ಪಕ್ಷದ ಸದಸ್ಯರು ಒಪ್ಪದೇ ಇರುವುದರಿಂದ, ಎನ್ಡಿಎ ಮೈತ್ರಿಕೂಟದಿಂದ ಹೊರಬಂದರೆ ಏಕಾಂಗಿಯಾಗುವ ಭಯ ಟಿಡಿಪಿ ಮತ್ತು ಶಿವಸೇನೆಗೆ ಕಾಡುತ್ತಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications