ಬೆಂಗಳೂರಲ್ಲಿ ಬ್ಯುಸಿನೆಸ್ಮ್ಯಾನ್, ಈಗ ರಾಜಸ್ಥಾನದ ವಿಧಾನಸಭೆಗೆ ಶಾಸಕ!
ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಿಗರನ್ನ ಬಿಟ್ಟು ಬೇರೆ ಬೇರೆ ರಾಜ್ಯದಿಂದ ಬಂದ ಜನಗಳ ಸಂಖ್ಯೆಯೇ ಹೆಚ್ಚು. ಹೀಗಾಗಿ ಬೆಂಗಳೂರಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಕನ್ನಡವೆ ಖಾಲಿ ಆಗುತ್ತೆ ಎಂಬ ಭಯ ಆವರಿಸಿದೆ. ಹೀಗಿದ್ದಾಗ ಬೆಂಗಳೂರಲ್ಲಿ ನೆಲೆಸಿದ್ದ ಉದ್ಯಮಿಯೊಬ್ರು, ಇದೀಗ ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ! ಅರೆ ಅದು ಹೇಗೆ ಸಾಧ್ಯವಾಯ್ತು ಅಂದ್ರಾ? ರಿಯಲ್ ಸ್ಟೋರಿಯ, ಕಂಪ್ಲೀಟ್ ಕಹಾನಿ ಇಲ್ಲಿದೆ.
ಹೌದು, ರಾಜಸ್ಥಾನ ವಿಧಾನಸಭಾ ಅಖಾಡದಲ್ಲಿ ಕಾಂಗ್ರೆಸ್ಗೆ ಖೆಡ್ಡಾ ತೋಡಿದ ಬಿಜೆಪಿಯ ನಾಯಕರು ಭರ್ಜರಿ ಗೆಲುವು ಸಾಧಿಸಿದ್ದಾರೆ. 199 ಸದಸ್ಯ ಬಲದ ರಾಜಸ್ಥಾನದಲ್ಲಿ ಇದೀಗ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ ಅಧಿಕಾರ ಹಿಡಿದಿದ್ದು, 115 ಸ್ಥಾನಗಳಲ್ಲಿ ಬಿಜೆಪಿಗೆ ಜಯ ಸಿಕ್ಕಿದೆ. ಹೀಗಿದ್ದಾಗ ಬೆಂಗಳೂರು ವ್ಯಾಪಾರಿ ರಾಜಸ್ಥಾನಕ್ಕೆ ಹೋಗಿ ಶಾಸಕನಾದ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಶುರುವಾಗಿದೆ. ಹಾಗಾದರೆ ಯಾರು ಆ ಬೆಂಗಳೂರಿನ ವ್ಯಾಪಾರಿ..? ಈ ವ್ಯಾಪಾರಿ ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದು ಹೇಗೆ?

ಭರ್ಜರಿ 1.17 ಲಕ್ಷ ಮತ!
ಹೌದು ಇದು ಬೆಂಗಳೂರಿನ ಉದ್ಯಮಿ ಒಬ್ಬರು, ರಾಜಸ್ಥಾನ ಶಾಸಕರಾಗಿ ಆಯ್ಕೆಯಾಗಿರುವ ಕಥೆ. ಅಂದಹಾಗೆ ಬೆಂಗಳೂರು ನಗರದ, ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಇದೀಗ ರಾಜಸ್ಥಾನದ ಸಹಾರಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯ ರಾಜಸ್ಥಾನ ಚುನಾವಣೆಯಲ್ಲಿ 1.17 ಲಕ್ಷ ಮತ ಗಳಿಸಿ, ಲಾಡುಲಾಲ ಪಿಟ್ಲಿಯಾ ಎನ್ನುವವರು ಜಯ ಗಳಿಸಿದ್ದಾರೆ.
ಈ ವ್ಯಕ್ತಿ ಬೇರೆ ಯಾರೂ ಅಲ್ಲ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿರುವವರು. ಪಿಟ್ಲಿಯಾ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಭ್ಯರ್ಥಿ ರಾಜೇಂದ್ರ ತ್ರಿವೇದಿ 54,684 ಪಡೆದಿದ್ದರೆ ಲಾಡುಲಾಲ ಪಿಟ್ಲಿಯಾ ಅವರು ಬರೋಬ್ಬರಿ 1.17 ಲಕ್ಷ ಮತ ಗಳಿಸಿದ್ದಾರೆ.

ಬೆಂಗಳೂರಿನಲ್ಲೇ ಬಂಗಲೆ ಇದೆ!
ಇಷ್ಟು ಮಾತ್ರವಲ್ಲ, ಬೆಂಗಳೂರಿನ ರಾಜಾಜಿನಗರ ಜುಗನಹಳ್ಳಿಯ 2ನೇ ಬ್ಲಾಕ್ನ ಬಂಗಲೆಯಲ್ಲಿ ಪಿಟ್ಲಿಯಾ ವಾಸವಾಗಿದ್ದರು. ಚಿಕ್ಕಪೇಟೆಯಲ್ಲಿ ಜವಳಿ ವ್ಯಾಪಾರವನ್ನು ನಡೆಸುತ್ತಿದ್ದರು. ಸದ್ಯ ಅವರ ಮಕ್ಕಳು ಆ ವ್ಯಾಪಾರ ಮುಂದುವರೆಸಿಕೊಂಡು ಹೋಗುತ್ತಿದ್ದಾರಂತೆ. ಈಗ ಪಿಟ್ಲಿಯಾ ಅವರು ರಾಜಸ್ಥಾನದ ಶಾಸಕರಾಗಿ ಆಯ್ಕೆ ಆಗಿದ್ದಾರೆ. 2018ರಲ್ಲಿ ರಾಜಸ್ಥಾನದ ವಿಧಾನ ಸಭೆ ಚುನಾವಣೆಯಲ್ಲಿ ಪಿಟ್ಲಿಯಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ದೇಶದ ಗಮನ ಸೆಳೆದ ಸುದ್ದಿ
ಇನ್ನು 2018ರಲ್ಲಿ, ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಪಿಟ್ಲಿಯಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿನ್ನೆಲೆ ಬಿಜೆಪಿಗೆ ಸಮಸ್ಯೆ ಆಗಿತ್ತು ಎನ್ನಲಾಗಿದೆ. ಒಟ್ನಲ್ಲಿ ಈ ಮೂಲಕ ಆಗ ಸೋತರು ಮತ್ತೊಮ್ಮೆ ಪ್ರಯತ್ನ ಮಾಡಿ ಬೆಂಗಳೂರು ಮೂಲದ ಉದ್ಯಮಿ ಈಗ ರಾಜಸ್ಥಾನದ ಶಾಸಕರಾಗಿದ್ದಾರೆ. ಇದು ದೇಶದ ಗಮನ ಸೆಳೆಯುತ್ತಿರುವುದು ಸುಳ್ಳಲ್ಲ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications