ಬೆಂಗಳೂರಲ್ಲಿ ಬ್ಯುಸಿನೆಸ್ಮ್ಯಾನ್, ಈಗ ರಾಜಸ್ಥಾನದ ವಿಧಾನಸಭೆಗೆ ಶಾಸಕ!
ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಿಗರನ್ನ ಬಿಟ್ಟು ಬೇರೆ ಬೇರೆ ರಾಜ್ಯದಿಂದ ಬಂದ ಜನಗಳ ಸಂಖ್ಯೆಯೇ ಹೆಚ್ಚು. ಹೀಗಾಗಿ ಬೆಂಗಳೂರಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಕನ್ನಡವೆ ಖಾಲಿ ಆಗುತ್ತೆ ಎಂಬ ಭಯ ಆವರಿಸಿದೆ. ಹೀಗಿದ್ದಾಗ ಬೆಂಗಳೂರಲ್ಲಿ ನೆಲೆಸಿದ್ದ ಉದ್ಯಮಿಯೊಬ್ರು, ಇದೀಗ ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ! ಅರೆ ಅದು ಹೇಗೆ ಸಾಧ್ಯವಾಯ್ತು ಅಂದ್ರಾ? ರಿಯಲ್ ಸ್ಟೋರಿಯ, ಕಂಪ್ಲೀಟ್ ಕಹಾನಿ ಇಲ್ಲಿದೆ.
ಹೌದು, ರಾಜಸ್ಥಾನ ವಿಧಾನಸಭಾ ಅಖಾಡದಲ್ಲಿ ಕಾಂಗ್ರೆಸ್ಗೆ ಖೆಡ್ಡಾ ತೋಡಿದ ಬಿಜೆಪಿಯ ನಾಯಕರು ಭರ್ಜರಿ ಗೆಲುವು ಸಾಧಿಸಿದ್ದಾರೆ. 199 ಸದಸ್ಯ ಬಲದ ರಾಜಸ್ಥಾನದಲ್ಲಿ ಇದೀಗ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ ಅಧಿಕಾರ ಹಿಡಿದಿದ್ದು, 115 ಸ್ಥಾನಗಳಲ್ಲಿ ಬಿಜೆಪಿಗೆ ಜಯ ಸಿಕ್ಕಿದೆ. ಹೀಗಿದ್ದಾಗ ಬೆಂಗಳೂರು ವ್ಯಾಪಾರಿ ರಾಜಸ್ಥಾನಕ್ಕೆ ಹೋಗಿ ಶಾಸಕನಾದ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಶುರುವಾಗಿದೆ. ಹಾಗಾದರೆ ಯಾರು ಆ ಬೆಂಗಳೂರಿನ ವ್ಯಾಪಾರಿ..? ಈ ವ್ಯಾಪಾರಿ ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದು ಹೇಗೆ?

ಭರ್ಜರಿ 1.17 ಲಕ್ಷ ಮತ!
ಹೌದು ಇದು ಬೆಂಗಳೂರಿನ ಉದ್ಯಮಿ ಒಬ್ಬರು, ರಾಜಸ್ಥಾನ ಶಾಸಕರಾಗಿ ಆಯ್ಕೆಯಾಗಿರುವ ಕಥೆ. ಅಂದಹಾಗೆ ಬೆಂಗಳೂರು ನಗರದ, ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಇದೀಗ ರಾಜಸ್ಥಾನದ ಸಹಾರಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯ ರಾಜಸ್ಥಾನ ಚುನಾವಣೆಯಲ್ಲಿ 1.17 ಲಕ್ಷ ಮತ ಗಳಿಸಿ, ಲಾಡುಲಾಲ ಪಿಟ್ಲಿಯಾ ಎನ್ನುವವರು ಜಯ ಗಳಿಸಿದ್ದಾರೆ.
ಈ ವ್ಯಕ್ತಿ ಬೇರೆ ಯಾರೂ ಅಲ್ಲ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿರುವವರು. ಪಿಟ್ಲಿಯಾ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಭ್ಯರ್ಥಿ ರಾಜೇಂದ್ರ ತ್ರಿವೇದಿ 54,684 ಪಡೆದಿದ್ದರೆ ಲಾಡುಲಾಲ ಪಿಟ್ಲಿಯಾ ಅವರು ಬರೋಬ್ಬರಿ 1.17 ಲಕ್ಷ ಮತ ಗಳಿಸಿದ್ದಾರೆ.

ಬೆಂಗಳೂರಿನಲ್ಲೇ ಬಂಗಲೆ ಇದೆ!
ಇಷ್ಟು ಮಾತ್ರವಲ್ಲ, ಬೆಂಗಳೂರಿನ ರಾಜಾಜಿನಗರ ಜುಗನಹಳ್ಳಿಯ 2ನೇ ಬ್ಲಾಕ್ನ ಬಂಗಲೆಯಲ್ಲಿ ಪಿಟ್ಲಿಯಾ ವಾಸವಾಗಿದ್ದರು. ಚಿಕ್ಕಪೇಟೆಯಲ್ಲಿ ಜವಳಿ ವ್ಯಾಪಾರವನ್ನು ನಡೆಸುತ್ತಿದ್ದರು. ಸದ್ಯ ಅವರ ಮಕ್ಕಳು ಆ ವ್ಯಾಪಾರ ಮುಂದುವರೆಸಿಕೊಂಡು ಹೋಗುತ್ತಿದ್ದಾರಂತೆ. ಈಗ ಪಿಟ್ಲಿಯಾ ಅವರು ರಾಜಸ್ಥಾನದ ಶಾಸಕರಾಗಿ ಆಯ್ಕೆ ಆಗಿದ್ದಾರೆ. 2018ರಲ್ಲಿ ರಾಜಸ್ಥಾನದ ವಿಧಾನ ಸಭೆ ಚುನಾವಣೆಯಲ್ಲಿ ಪಿಟ್ಲಿಯಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ದೇಶದ ಗಮನ ಸೆಳೆದ ಸುದ್ದಿ
ಇನ್ನು 2018ರಲ್ಲಿ, ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಪಿಟ್ಲಿಯಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿನ್ನೆಲೆ ಬಿಜೆಪಿಗೆ ಸಮಸ್ಯೆ ಆಗಿತ್ತು ಎನ್ನಲಾಗಿದೆ. ಒಟ್ನಲ್ಲಿ ಈ ಮೂಲಕ ಆಗ ಸೋತರು ಮತ್ತೊಮ್ಮೆ ಪ್ರಯತ್ನ ಮಾಡಿ ಬೆಂಗಳೂರು ಮೂಲದ ಉದ್ಯಮಿ ಈಗ ರಾಜಸ್ಥಾನದ ಶಾಸಕರಾಗಿದ್ದಾರೆ. ಇದು ದೇಶದ ಗಮನ ಸೆಳೆಯುತ್ತಿರುವುದು ಸುಳ್ಳಲ್ಲ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications