ಉತ್ತರಕಾಶಿ ಸುರಂಗ ಕಾರ್ಯಾಚರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು
ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸಿಲ್ಕ್ಯಾರಾ ಸುರಂಗ ಕುಸಿತವಾಗಿ, 41 ಕಾರ್ಮಿಕರು ಕಳೆದ 17 ದಿನಗಳಿಂದ ನರಳಾಡುತ್ತಿದ್ದರು. ಅವರನ್ನೆಲ್ಲಾ ಇದೀಗ ಬೃಹತ್ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಹೊರಗಡೆ ಕರೆದುಕೊಂಡು ಬರಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಹೇಳಿದ್ದೇನು? ಕಾರ್ಯಾಚರಣೆ ಕುರಿತಾಗಿ ಕರ್ನಾಟಕ ಸಿಎಂ ಪ್ರತಿಕ್ರಿಯೆ ಹೇಗಿತ್ತು?
ಇಡೀ ಜಗತ್ತೇ ಇಂದು ಉತ್ತರಾಖಂಡದ ಉತ್ತರಕಾಶಿ ಮೇಲೆ ಗಮನ ಇಟ್ಟು ಕುಳಿತಿತ್ತು. ಇದು ಯಾಕೆ ಅಂದ್ರೆ ಅಲ್ಲಿನ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವ ರಕ್ಷಣೆಗೆ, ಹಗಲು & ರಾತ್ರಿ ಲೆಕ್ಕಿಸದೆ ಹೋರಾಟ ನಡೆಯುತ್ತಿತ್ತು. ಹೀಗಿದ್ದಾಗಲೆ ಇಂದು ಸಂಜೆ ವೇಳೆಗೆ ಸಿಹಿಸುದ್ದಿ ಸಿಕ್ಕಿದ್ದು, 41 ಕ್ಕೆ 41 ಕಾರ್ಮಿಕರು ಸುರಕ್ಷಿತವಾಗಿ ಹೊರಗೆ ಬಂದು ತಮ್ಮ ಕುಟುಂಬಗಳನ್ನು ಸೇರಿದ್ದಾರೆ. ಹೀಗಾಗಿ ಇಡೀ ದೇಶಕ್ಕೆ ದೇಶ ಸುರಂಗ ತಜ್ಞರನ್ನು ಮತ್ತು ಈ ಕಾರ್ಯಾಚರಣೆಗೆ ಸಹಕರಿಸಿದ ಪ್ರತಿಯೊಬ್ಬರನ್ನೂ ಸ್ಮರಿಸುತ್ತಿದೆ. ಇದೇ ಸಮಯದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಕಾರ್ಯಾಚರಣೆ ಬಗ್ಗೆ ಸಿಎಂ ಪ್ರತಿಕ್ರಿಯೆ
ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, 'ಸತತ ಹದಿನೇಳು ದಿನಗಳ ರಕ್ಷಣಾ ಕಾರ್ಯಾಚರಣೆ ನಂತರ ಉತ್ತರಾಖಂಡದ ಸುರಂಗದೊಳಗೆ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿರುವುದು ನೋಡಿ ಅತ್ಯಂತ ಖುಷಿಯಾಯಿತು. ಈ ಸವಾಲಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ರಕ್ಷಣಾ ಸಿಬ್ಬಂದಿಗಳಿಗೆ ಧನ್ಯವಾದಗಳು. ನಿಮ್ಮ ಶ್ರಮ ಮತ್ತು ನಿರಂತರ ಪ್ರಯತ್ನದಿಂದ ಸುರಂಗದೊಳಗೆ ಸಿಲುಕಿದ್ದ ಕಾರ್ಮಿಕರಿಗೆ ಮರುಹುಟ್ಟು ಸಿಕ್ಕಂತಾಗಿದೆ. ಕೋಟ್ಯಂತರ ಭಾರತೀಯರ ಹಾರೈಕೆಗಳು, ಕಾರ್ಮಿಕರ ಕುಟುಂಬ ಸದಸ್ಯರ ಪ್ರಾರ್ಥನೆ ಈ ಕ್ಷಣ ಫಲ ನೀಡಿದೆ.' ಎಂದಿದ್ದಾರೆ.
ಸತತ ಹದಿನೇಳು ದಿನಗಳ ರಕ್ಷಣಾ ಕಾರ್ಯಾಚರಣೆ ನಂತರ ಉತ್ತರಾಖಂಡದ ಸುರಂಗದೊಳಗೆ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿರುವುದು ನೋಡಿ ಅತ್ಯಂತ ಖುಷಿಯಾಯಿತು. ಈ ಸವಾಲಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ರಕ್ಷಣಾ ಸಿಬ್ಬಂದಿಗಳಿಗೆ ಧನ್ಯವಾದಗಳು.
— CM of Karnataka (@CMofKarnataka) November 28, 2023
ನಿಮ್ಮ ಶ್ರಮ ಮತ್ತು ನಿರಂತರ ಪ್ರಯತ್ನದಿಂದ ಸುರಂಗದೊಳಗೆ ಸಿಲುಕಿದ್ದ…
ಘಟನೆ ನಡೆದಿದ್ದು ಹೇಗೆ?
17 ದಿನಗಳ ಹಿಂದೆ ಅಂದ್ರೆ ನ. 12 ರಂದು, ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿ ಇದ್ದ ಸಿಲ್ಕ್ಯಾರಾ ಸುರಂಗ ಕುಸಿತವಾಗಿತ್ತು. ಆದ್ರೆ ದಿಢೀರ್ ಹೀಗೆ ಸುರಂಗ ಕುಸಿತ ಕಂಡ ಕಾರಣ ಅದರೊಳಗೆ ಸಿಲುಕಿದ್ದ 41 ಕಾರ್ಮಿಕರು ನರಳಾಡಿಬಿಟ್ಟರು. ಹೀಗಾಗಿ ಅವರ ರಕ್ಷಣೆಗಾಗಿ ಕಳೆದ 17 ದಿನದಿಂದ ಜಗತ್ತಿನ ವಿವಿಧ ದೇಶಗಳಿಂದ ಬಂದಿದ್ದ, ತಜ್ಞರ ಸಹಾಯ ಪಡೆದು ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಕಾರ್ಯಾಚರಣೆ ಯಶಸ್ವಿಯಾಗಿ ನಡೆದು, 41 ಕಾರ್ಮಿಕರನ್ನು ಒಬ್ಬೊಬ್ಬರಾಗಿ ಹೊರಗಡೆ ತರಲಾಗಿದೆ.
'ರ್ಯಾಟ್ ಹೋಲ್' ತಂತ್ರದ ಮೊರೆ
41 ಜನರ ಜೀವ ಉಳಿಸಲು ಹಲವು ತಂತ್ರ ಪ್ರಯೋಗ ಮಾಡಿದ್ದರು ತಜ್ಞರು. ಕಾರ್ಮಿಕರನ್ನ ಉಳಿಸಲು ರಕ್ಷಣಾ ತಂಡಗಳು ಅಂತಿಮವಾಗಿ ಬಂಡೆ ತೆರವುಗೊಳಿಸಿದ್ದವು. ಇಷ್ಟೆಲ್ಲಾ ಮಾಡಿ, ಬಡ ಕಾರ್ಮಿಕರ ಜೀವ ಉಳಿಸಲು ಯತ್ನಿಸಿದರೂ ಅದು ಪ್ರಯೋಗಕ್ಕೆ ಬಂದಿರಲಿಲ್ಲ. ಇದೇ ಕಾರಣಕ್ಕೆ 'ರ್ಯಾಟ್ ಹೋಲ್' ತಂತ್ರಜ್ಞಾನದ ಮೊರೆ ಹೋಗಿ ರಂಧ್ರ ಕೊರೆದು ಒಟ್ಟಾರೆ 41 ಕಾರ್ಮಿಕರನ್ನು ರಕ್ಷಿಸಿ ಹೊರಗೆ ಕರೆತರಲಾಗಿದೆ. ಹೈಟೆಕ್ ಯಂತ್ರಗಳು ಅಥವಾ ಆಗರ್ಗಳು ಸುಮಾರು 60 ಮೀಟರ್ ಬಂಡೆಯನ್ನ ಕೊರೆಯಲು ವಿಫಲವಾದ ನಂತರ, 'ರ್ಯಾಟ್ ಹೋಲ್' ತಂತ್ರದ ಮೂಲಕ ಸುರಂಗ ಕೊರೆದು 41 ಜೀವಗಳನ್ನು ಇದೀಗ ಉಳಿಸಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications