Rain News: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೆ ಶಾಕ್!
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಭಾರಿ ಹಿನ್ನಡೆಯಾಗುತ್ತದೆ. ಅದ್ರಲ್ಲೂ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಈಗ ಭಾರಿ ಮಳೆ ಸುರಿಯುತ್ತಿದ್ದರೂ, ಕಾವೇರಿ ನೀರು ಬಿಡುವಂತೆ ಕರ್ನಾಟಕದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದೀಗ ಮತ್ತೊಮ್ಮೆ ಅಂತಹದ್ದೇ ಆದೇಶ ಹೊರಬಿದ್ದಿದ್ದು, ಕನ್ನಡಿಗರಿಗೆ ಈ ವರ್ಷ ಕುಡಿಯುವ ನೀರಿಗೂ ಭೀಕರ ಪರಿಸ್ಥಿತಿ ನಿರ್ಮಾಣ ಆಗುವುದು ಬಹುತೇಕ ಗ್ಯಾರಂಟಿ ಆಗಿದೆ.
ಹೌದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಅಂದ್ರೆ ಡಿಸೆಂಬರ್ 31ರ ತನಕ ಪ್ರತಿದಿನ 3,216 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ಇದೀಗ ಶಿಫಾರಸು ಮಾಡಿದೆ. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಪಟ್ಟಂತೆ ಕರ್ನಾಟಕ & ತಮಿಳುನಾಡು ರಾಜ್ಯದ ಅಧಿಕಾರಿಗಳ ಜೊತೆ ಕಾವೇರಿ ನೀರು ನಿಯಂತ್ರಣ ಸಮಿತಿಯ 90ನೇ ಸಭೆ ನಡೆಸಿತು. ಇಂದು ನಡೆದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ರಿಲೀಫ್ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಆಗಿದ್ದೆ ಬೇರೆ ಕರ್ನಾಟಕದ ಮೇಲೆ ಮತ್ತೆ ಹೊರೆ ಬಿದ್ದಿದೆ.

ಕರ್ನಾಟಕದ ಮನವಿಗೆ ಬೆಲೆಯೇ ಇಲ್ವಾ?
ಮುಂದಿನ 30 ದಿನಗಳ ಕಾಲ ಕರ್ನಾಟಕ ಒಟ್ಟು 5,000 ಕ್ಯೂಸೆಕ್ ನೀರು ಹರಿಸಲು ಶಿಫಾರಸು ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಎದುರು ತಮಿಳುನಾಡು ಬೇಡಿಕೆ ಇಟ್ಟಿದೆ. ಆದ್ರೆ ಕರ್ನಾಟಕದ ಅಧಿಕಾರಿಗಳು ಕಾವೇರಿ ಕೊಳ್ಳದ ಪರಿಸ್ಥಿತಿ ವಿವರಿಸಿದ್ದರು. ಕರ್ನಾಟಕದ 4 ಜಲಾಶಯಗಳಿಗೆ ಒಳಹರಿವು ನಿಂತಿದೆ. 2023 ನ. 21ರಂತೆ ಈ ನಾಲ್ಕೂ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಕುಸಿತ ಕಂಡಿದೆ. ಹೀಗಾಗಿ ನೀರಾವರಿ ಸೇರಿದಂತೆ ಕುಡಿಯುವ ನೀರು & ಇತರ ಅವಶ್ಯಕತೆಗೆ ನೀರಿನ ಕೊರತೆ ಎದುರಾಗಿದೆ ಹೀಗಾಗಿ ನೀರು ಬಿಡುವಂತೆ ಆದೇಶ ನೀಡಬೇಡಿ ಎಂದು ಕರ್ನಾಟಕ ಬೇಡಿಕೆ ಇಟ್ಟಿತ್ತು.
ಇಷ್ಟೆಲ್ಲದರ ನಡುವೆ ಡಿಸೆಂಬರ್ 31ರ ತನಕ ನಿತ್ಯ 3216 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಶಿಫಾರಸು ಮಾಡಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ಅಲ್ಲದೆ ಈ ವರ್ಷ ಬೇಸಿಗೆ ಸಮಯಕ್ಕೆ ಕನಿಷ್ಠ ಕುಡಿಯುವ ನೀರಿಗೂ ತೊಂದರೆ ಎದುರಾಗುವ ಆತಂಕ ಆವರಿಸಿದೆ.
-
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ











Click it and Unblock the Notifications