Cauvery River: ನೀರಿಲ್ಲದೆ ಒಣಗುತ್ತಿದೆ ತಮಿಳುನಾಡಿನ ಪ್ರಮುಖ ಜಲಾಶಯ
ಒಂದು ಕಡೆ ತಮಿಳುನಾಡು ಕಾವೇರಿ ನೀರಿಗಾಗಿ ಕರ್ನಾಟಕದ ಜೊತೆ ಕಿರಿಕ್ ತೆಗೆದಿದೆ. ಹೀಗೆ ಕಾವೇರಿ ಪ್ರಾಧಿಕಾರದ ಮೂಲಕ ಆದೇಶ ತಂದು ಕಾವೇರಿ ನೀರು ಪಡೆದುಕೊಂಡಿದೆ. ಆದರೆ ಇದು ಎರಡೂ ರಾಜ್ಯದ ನಡುವೆ ಕಿಚ್ಚು ಹೊತ್ತಿಸಿದೆ. ಪರಿಸ್ಥಿತಿ ಹೀಗೆ ಕೈಮೀರಿ ಹೋಗಿರುವ ಸಮಯದಲ್ಲೇ ತಮಿಳುನಾಡಿಗೂ ದೊಡ್ಡ ಆಘಾತ ಎದುರಾಗಿದೆ.
ಹೌದು ತಮಿಳುನಾಡು ಕೂಡ ಈ ಬಾರಿ ಬರದ ಬೇಗೆಯಲ್ಲಿ ನರಳಾಡುವ ಸ್ಥಿತಿ ಇದೆ. ಮಳೆ ಕೊರತೆ ಕಾರಣ ತಮಿಳುನಾಡು ಜಲಾಶಯಗಳು ಕೂಡ ಒಣಗುತ್ತಿದ್ದು, ಅದರಲ್ಲೂ ನೆರೆಯ ರಾಜ್ಯದ ಜೀವನಾಡಿ ಮೆಟ್ಟೂರು ಜಲಾಶಯ ಭಾಗಶಃ ಖಾಲಿಯಾಗಿ ಹೋಗಿದೆ. ಈ ಹಿನ್ನೆಲೆ ಕುಡಿಯುವ ನೀರಿಗೂ ಮುಂದೆ ಸಮಸ್ಯೆ ಎದುರಾಗುವ ಆತಂಕ ಆವರಿಸಿದೆ. ಹಾಗಾದರೆ ಈಗ ಮೆಟ್ಟೂರು ಡ್ಯಾಂನಲ್ಲಿ ಉಳಿದಿರುವ ನೀರು ಎಷ್ಟು? ಮತ್ತೊಮ್ಮೆ ಕಾವೇರಿ ವಿಚಾರಕ್ಕೆ ನೆರೆ ರಾಜ್ಯ ತಮಿಳುನಾಡು ಹಾಗೂ ಕರ್ನಾಟಕದ ಮಧ್ಯೆ ವಾರ್ ಆಗುತ್ತಾ?

ಮೆಟ್ಟೂರು ಜಲಾಶಯ ಖಾಲಿ ಖಾಲಿ
ಅಂದಹಾಗೆ ತಮಿಳುನಾಡಿನ ಸುಮಾರು 24 ಜಿಲ್ಲೆಗಳು ಅವಲಂಬಿಸಿರುವುದು ಇದೇ ಡ್ಯಾಂನ ನೀರನ್ನು. ಹೀಗಾಗಿ ಕಾವೇರಿ ವಿಚಾರಕ್ಕೆ ತಮಿಳುನಾಡು ದೊಡ್ಡ ಕಿರಿಕ್ ತೆಗೆಯುತ್ತೆ. ಆದರೆ ಕುಡಿಯುವ ನೀರನ್ನ ಮೊದಲು ರಕ್ಷಣೆ ಮಾಡುವ ಬದಲು, ತಮಿಳುನಾಡು ಸರ್ಕಾರ ಕೃಷಿಗೆ ಆದ್ಯತೆ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಎಲ್ಲಾ ಕಿರಿಕಿರಿ ನಡುವೆ ಈಗ ಮೆಟ್ಟೂರು ಡ್ಯಾಂ ನೀರಿನ ಮಟ್ಟ 32 ಅಡಿಗೆ ಕುಸಿದಿದೆ. ಅಂದ್ರೆ 120 ಅಡಿ ಎತ್ತರ ಇರುವ ಮೆಟ್ಟೂರು ಜಲಾಶಯದ ಗರಿಷ್ಠ ಮಟ್ಟ ಈಗ ಕನಿಷ್ಠ ಹಂತಕ್ಕೆ ತಲುಪಿದೆ. ಹೀಗಾಗಿ ಮುಂದೆ ಏನಪ್ಪಾ ಕಥೆ ಎಂಬ ಭಯ ಶುರುವಾಗಿದೆ.
ಈಗ ಎಷ್ಟು ನೀರು ಬಾಕಿ ಇದೆ?
ಇನ್ನು ಮೆಟ್ಟೂರು ಜಲಾಶಯದಲ್ಲಿ ಒಟ್ಟು 93.47 ಟಿಎಂಸಿ ಸಾಮರ್ಥ್ಯ ಇದ್ದರೆ ಈಗ ಬರೀ 8.7 ಟಿಎಂಸಿ ನೀರು ಸಂಗ್ರಹವಾಗಿದೆ. ಹೀಗೆ 1 ತಿಂಗಳ ಕಾಲ ಬರೋಬ್ಬರಿ 6,500 ಕ್ಯೂಸೆಕ್ ನೀರನ್ನು ಕೃಷಿಗೆ ಹರಿಸಿದ ಕಾರಣ ಡ್ಯಾಂ ಖಾಲಿ ಆಗುತ್ತಿದೆ. ಹೀಗಾಗಿ ಈಗ ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಕಡಿಮೆ ಮಾಡಲಾಗಿದೆ. ದಿಢೀರ್ 4,000 ಕ್ಯೂಸೆಕ್ಗೆ ನೀರು ಬಿಡುಗಡೆ ಪ್ರಮಾಣ ಇಳಿಸಲಾಗಿದೆ. ಈ ಮೂಲಕ ಕುಡಿಯುವ ನೀರಿನ ರಕ್ಷಣೆಗೆ ಈಗ ತಮಿಳುನಾಡು ಸರ್ಕಾರ ಎಚ್ಚೆತ್ತುಕೊಂಡಿದೆ.

ಒಟ್ನಲ್ಲಿ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನೀರಿನ ತಿಕ್ಕಾಟಕ್ಕೆ ಒಂದು ಅಂತ್ಯ ಹಾಡಬೇಕಿದೆ. ಇದಕ್ಕೆಲ್ಲಾ ಮೇಕೆದಾಟು ಜಲಾಶಯ ಸೂಕ್ತ ಉತ್ತರ ನೀಡಬಲ್ಲದು. ಹೀಗಾಗಿ ಆದಷ್ಟು ಬೇಗ ಮೇಕದಾಟು ಡ್ಯಾಂ ನಿರ್ಮಾಣವಾಗಲಿ ಎಂಬ ಸಲಹೆಯನ್ನ ತಜ್ಞರು ಇದೀಗ ನೀಡುತ್ತಿದ್ದಾರೆ. ಆದರೆ ಇದು ನೆರವೇರುತ್ತಾ? ಇಲ್ಲ ತಮಿಳುನಾಡು & ಕರ್ನಾಟಕದ ಕಾವೇರಿ ಕಿತ್ತಾಟ ಹೀಗೆ ಮುಂದುವರಿಯುತ್ತಾ? ಕಾದು ನೋಡಬೇಕಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications