ಸಂಸತ್ ಭವನಕ್ಕೆ ನುಗ್ಗಿದ ಅಪರಿಚಿತರು, ಕೆ.ಎಸ್. ಈಶ್ವರಪ್ಪ ಹೇಳಿದ್ದೇನು
ಸಂಸತ್ ಭವನ ಇಂದು ನಲುಗಿ ಹೋಗಿದ್ದು, ಅಧಿವೇಶನ ನಡೆಯುವ ಸಮಯದಲ್ಲಿ ಒಳ ನುಗ್ಗಿದ ಅಪರಿಚಿತರು ಭಯ ಹುಟ್ಟಿಸಿದ್ದಾರೆ. ಈ ಸುದ್ದಿ ಭಾರತದ ಮೂಲೆ ಮೂಲೆಯಲ್ಲು ಸಂಚಲನ ಸೃಷ್ಟಿಸಿರುವ ಸಮಯದಲ್ಲೇ, ಈ ಆತಂಕಕಾರಿ ಘಟನೆಯ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು ಗೊತ್ತಾ? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಹೌದು, ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ ಅವರು ಹಿಂದಿನಿಂದ ಭಾರತದ ಮೇಲೆ ಭಯೋತ್ಪಾದಕರ ಹಾಗೂ ದೇಶದ್ರೋಹಿಗಳು ಕಣ್ಣಿಟ್ಟಿದ್ದಾರೆ. ಇಂತಹ ದುಷ್ಟ ಶಕ್ತಿ ಮೆಟ್ಟಿನಿಂತು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ದುಷ್ಟ ಶಕ್ತಿಗಳು ಭಯ ಹುಟ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. ಈ ಮೂಲಕ ಸಂಸತ್ ಮೇಲೆ ನಡೆದಿರುವ ದಾಳಿಯನ್ನ ಕೆ.ಎಸ್. ಈಶ್ವರಪ್ಪ ಖಂಡಿಸಿದ್ರು.

ಬಿಜೆಪಿಗೆ ಬೆಂಬಲ ಸಿಗುತ್ತಿದೆ ಅಂತಾ...
ಲೋಕಸಭೆ ಅಧಿವೇಶನ ನಡೆಯುವಾಗಲೇ ಅಪರಿಚಿತ ವ್ಯಕ್ತಿಗಳು ನುಗ್ಗಿದ ಕಾರಣಕ್ಕೆ, ಅವರಿಂದು ಪ್ರತಿಕ್ರಿಯೆ ನೀಡಿದ್ದಾರೆ. ದೇಶದ್ರೋಹಿ ಚಟುವಟಿಕೆ ಮತ್ತು ಭಯ ಹುಟ್ಟಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಬೆಂಗಳೂರಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು, ರಾಜ ಭವನದಲ್ಲಿ ಕೂಡ ಭಯ ಹುಟ್ಟು ಹಾಕಿದ್ದಾರೆ. ಈಗ ಸದನದಲ್ಲಿ ಕೂಡ ಇಂತಹ ಕಾರ್ಯವನ್ನು ಮಾಡುತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹೆಚ್ಚಿನ ಬೆಂಬಲ ಸಿಗುತ್ತಿರುವ ಹಿನ್ನೆಲೆ ದುಷ್ಕೃತ್ಯ ನಡೆಯುತ್ತಿವೆ ಎಂದು ಆರೋಪ ಮಾಡಿದ್ದಾರೆ ಕೆ.ಎಸ್. ಈಶ್ವರಪ್ಪ.
ಪಾಸ್ ಬಗ್ಗೆ ಏನ್ ಹೇಳಿದ್ರು?
ಮೈಸೂರು ಎಂಪಿ ಪಾಸ್ ತೆಗೆದುಕೊಂಡು ಅಪರಿಚಿತರು ಒಳನುಗ್ಗಿದ ಕುರಿತು ಪ್ರತಿಕ್ರಿಯೆ ನೀಡಿದ ಕೆ.ಎಸ್. ಈಶ್ವರಪ್ಪ ಅವರು, ಪರಿಚಿತರು ಎಂದು ಪಾಸ್ ಕೊಟ್ಟಿರಬಹುದು. ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸುತ್ತೇನೆ ಎಂದಿದ್ದಾರೆ. ಅಲ್ಲದೆ ಇದೇ ವೇಳೆ ಬಿಜೆಪಿಯಲ್ಲಿನ ಭಿನ್ನಮತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿ ಶಕ್ತಿ ಶಾಲಿ.

ಮೂರು ನಾಲ್ಕು ಜನರಲ್ಲಿ ಅಸಮಾಧಾನವು ಇದೆ. ಅಸಮಾಧಾನ ಇದ್ದವರೂ ಕೂಡ ಪಕ್ಷ ನಿಷ್ಟರೇ ಆಗಿದ್ದಾರೆ. ವೈಯಕ್ತಿಕ ಅಸಮಾಧಾನದಿಂದ ಗೊಂದಲವು ಉಂಟಾಗಿದೆ ಇದನ್ನ ಪಕ್ಷದ ವರಿಷ್ಠರು ಸರಿಪಡಿಸುವ ಕಾರ್ಯ ಮಾಡುತ್ತಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಒಟ್ನಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸಂಸತ್ ಭವನಕ್ಕೆ ಅಪರಿಚಿತರು ನುಗ್ಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೇ ಬೇಕು ಅಂತಲೇ ಕೆಲವರು ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದಾರೆ. ಇದರ ಜೊತೆಗೆ ಬಿಜೆಪಿ ಭಿನ್ನಮತದ ಬಗ್ಗೆ ಕೂಡ ರಿಯಾಕ್ಷನ್ ಕೊಟ್ಟಿರುವುದು ವಿಶೇಷ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications