ಬುಡಕಟ್ಟು ಸಮುದಾಯದ ನಾಯಕನಿಗೆ ಮುಖ್ಯಮಂತ್ರಿ ಪಟ್ಟ ಗ್ಯಾರಂಟಿ?
ಬಿಜೆಪಿ ಮತ್ತೆ ಹೊಸ ಬಲ, ಹುಮ್ಮಸ್ಸಿನ ಮೂಲಕ ಮುನ್ನುಗ್ಗಿದೆ. ಅದ್ರಲ್ಲೂ ಪಂಚರಾಜ್ಯ ಚುನಾವಣೆ ಫಲಿತಾಂಶ 2024 ರ ಲೋಕಸಭೆ ಚುನಾವಣೆಗೆ ಮೊದಲು ಬಲ ತುಂಬುತ್ತಿದ್ದು, ಬಿಜೆಪಿ ಕೇಂದ್ರ ನಾಯಕರು ಫುಲ್ ಖುಷ್ ಆಗಿದ್ದಾರೆ. ಹೀಗಾಗಿ ಬುಡಕಟ್ಟು ಸಮುದಾಯದ ನಾಯಕನಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ.
ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಮಿಜೋರಾಂ ಎಲೆಕ್ಷನ್ ನಡೆದಿದ್ದು 5 ರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಹೊರಬಿದ್ದಿರುವ 5 ರಾಜ್ಯದ ರಿಸಲ್ಟ್ ಪೈಕಿ ಈಗಾಗಲೇ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಜಯ ಕಂಡಿದೆ. ಇದು ಬಿಜೆಪಿಗೆ ಮತ್ತಷ್ಟು ಬಲ ತುಂಬಿದೆ. ಅದರಲ್ಲೂ ಛತ್ತೀಸ್ಗಢ ರಾಜ್ಯದಲ್ಲಿ ಪಕ್ಕಾ ಕಾಂಗ್ರೆಸ್ ಗೆಲ್ಲುತ್ತೆ ಅಂತಾ ಬಹುತೇಕ ಸಮೀಕ್ಷೆಗಳು ಹೇಳಿದ್ದವು. ಇದನ್ನೆಲ್ಲಾ ಮೀರಿ ಈಗ ಬಿಜೆಪಿಗೆ ಅಧಿಕಾರ ಸಿಕ್ಕಿದ್ದು, ಇಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡಲು ಬಿಜೆಪಿ ವರಿಷ್ಠರು ಚಿಂತಿಸುತ್ತಿದ್ದಾರೆ.

ಬುಡಕಟ್ಟು ಸಮುದಾಯದ ನಾಯಕ ಸಿಎಂ?
ಈಗಿನ ಪರಿಸ್ಥಿತಿ ಅವಲೋಕನ ಮಾಡಿದರೆ, ಬಿಜೆಪಿಗೆ ಛತ್ತೀಸ್ಗಢ ರಾಜ್ಯದಲ್ಲಿ ಬುಡಕಟ್ಟು ಸಮುದಾಯದ ನಾಯಕ ಬೇಕು. ಏಕೆಂದ್ರೆ ಛತ್ತೀಸ್ಗಢದಲ್ಲಿ ಈ ಸಮುದಾಯವೇ ಅಂತಿಮ ಎನ್ನಬಹುದು. ಸಾಕಷ್ಟು ಕ್ಷೇತ್ರಗಳಲ್ಲಿ ಬುಡಕಟ್ಟು ಸಮುದಾಯ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಹಾಗೇ ಈ ಬಾರಿ ಬುಡಕಟ್ಟು ಸಮುದಾಯದ ಮತಗಳು ಬಿಜೆಪಿ ಪರವಾಗಿದ್ದ ಕಾರಣಕ್ಕೆ ಬಿಜೆಪಿ ಗೆದ್ದು ಬೀಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಇನ್ನು ಈ ಸಮಯದಲ್ಲೇ, ಬುಡಕಟ್ಟು ಸಮುದಾಯ ನಾಯಕನಿಗೆ ಸಿಎಂ ಪಟ್ಟ ನೀಡಲು ಬಿಜೆಪಿ ವರಿಷ್ಟು ಚರ್ಚೆಯ ನಡೆಸಿದ್ದಾರೆ ಎನ್ನಲಾಗಿದೆ. ಹಾಗಾದರೆ ಯಾರು ಅವರೆಲ್ಲಾ? ಈ ಬಾರಿ ಛತ್ತೀಸ್ಗಢ ರಾಜ್ಯದಲ್ಲಿ ಯಾರಿಗೆ ಸಿಎಂ ಪಟ್ಟ ಸಿಗಬಹುದು? ಸಿಎಂ ರೇಸ್ನಲ್ಲಿ ಇರುವ ನಾಯಕರು ಯಾರು? ಯಾರು? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ಛತ್ತೀಸ್ಗಢ ನೂತನ ಸಿಎಂ ಯಾರು?
ವಿಷ್ಣು ದೇವ್ ಸಾಯಿ ಛತ್ತೀಸ್ಗಢದ ರಾಜಕೀಯದಲ್ಲಿ ಹಿಡಿತ ಹೊಂದಿದ್ದಾರೆ. ಹಾಗೇ ಇದೇ ನಾಯಕ ಬುಡಕಟ್ಟು ಸಮುದಾಯವನ್ನ ಕೂಡ ಪ್ರತಿನಿಧಿಸುತ್ತಾರೆ. ಹೀಗಾಗಿ ಬಿಜೆಪಿ ಕೇಂದ್ರ ನಾಯಕರ ಮೊದಲ ಆಯ್ಕೆ ವಿಷ್ಣು ದೇವ್ ಸಾಯಿ ಆಗಬಹುದು ಎನ್ನಲಾಗಿದೆ. ಇವರ ಜತೆ ರೇಣುಕಾ ಸಿಂಗ್, ರಾಮವಿಚಾರ್ ನೇತಮ್, ಅರುಣ್ ಸಾವೋ ಹೆಸರು ಕೂಡ ಛತ್ತೀಸ್ಗಢದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿಬರುತ್ತಿದೆ.
ಮಧ್ಯ ಭಾರತದ ರಾಜ್ಯದಲ್ಲಿ ಏನಾಗುತ್ತಿದೆ?
ಒಟ್ನಲ್ಲಿ ಬಿಜೆಪಿ ಕೇಂದ್ರ ನಾಯಕರು ಈಗ ಅಳೆದು ತೂಗಿ ಲೆಕ್ಕ ಹಾಕುತ್ತಿದ್ದಾರೆ. ಯಾಕೆ ಅಂದ್ರೆ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ಅಲರ್ಟ್ ಆಗಿ ಹೆಜ್ಜೆ ಇಡಬೇಕು. ಅದರಲ್ಲೂ ಸಮುದಾಯದ ಬಲ ಹೆಚ್ಚಾಗಿರುವ ನಾಯಕರಿಗೆ ಈಗ ಒತ್ತು ನೀಡಲು ಚಿಂತನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ಛತ್ತೀಸ್ಗಢ ಅಖಾಡದಲ್ಲಿ ಏನು ಬೇಕಾದರೂ ಆಗಲಿದೆ. ಇದಕ್ಕಾಗಿ ಕಾದು ನೋಡಬೇಕಿದೆ ಅಂತಿದ್ದಾರೆ ರಾಜಕೀಯ ತಜ್ಞರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications