ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಗೆಲ್ಲಲೇಬೇಕಾದ ಅನಿವಾರ್ಯ ಸ್ಥಿತಿ!
ಮಹತ್ವದ ಮಹಾರಾಷ್ಟ್ರ ಚುನಾವಣೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಮುಕ್ತಾಯವಾಗಲಿದೆ. ಉತ್ತರ ಭಾರತ & ದಕ್ಷಿಣ ಭಾರತದ ನಡುವೆ ಕೊಂಡಿಯಂತೆ ಆಗಿರುವ ಮಹಾರಾಷ್ಟ್ರ ರಾಜ್ಯಕ್ಕೆ ಹಾಗೂ ಕರ್ನಾಟಕಕ್ಕೂ ಅವಿನಾಭಾವ ನಂಟು ಇದೆ. ಹೀಗಿದ್ದಾಗ ಕರ್ನಾಟಕದಲ್ಲಿ ಗೆದ್ದಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಅಖಾಡದಲ್ಲೂ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಅಕಸ್ಮಾತ್ ಕಾಂಗ್ರೆಸ್ ಸೋತು ಹೋದರೆ ಏನೆಲ್ಲಾ ಆಗಬಹುದು? ಈ ಹಾದಿಯಲ್ಲಿ ಕಾಂಗ್ರೆಸ್ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಗೆದ್ದರೆ ಏನಾಗುತ್ತದೆ? ಬನ್ನಿ ತಿಳಿಯೋಣ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕೇವಲ ರಾಜಕೀಯ ಅಖಾಡವಾಗಿ ಉಳಿದಿಲ್ಲ. ಯಾಕೆ ಅಂದ್ರೆ ಕಾಂಗ್ರೆಸ್ ನಾಯಕರ ಪಾಲಿಗೆ ಈ ರಾಜ್ಯದಲ್ಲಿ ಗೆದ್ದೇ ಗೆಲ್ಲಬೇಕಾದ ಅನಿವಾರ್ಯ ಸ್ಥಿತಿ ಕೂಡ ಇದೆ. ಹರ್ಯಾಣ ಸೇರಿದಂತೆ ಅದಕ್ಕೂ ಹಿಂದಿನ ವಿಧಾನಸಭಾ ಚುನಾವಣೆಗಳು ಸ್ವತಃ ಕಾಂಗ್ರೆಸ್ ನಾಯಕರಿಗೆ ಆಘಾತ ನೀಡಿವೆ. ದಕ್ಷಿಣ ಭಾರತದಲ್ಲಿ ಬಲವಾಗಿ ನಿಲ್ಲುತ್ತಿರುವಾಗಲೇ ಕಾಂಗ್ರೆಸ್ ನಾಯಕರಿಗೆ ಉತ್ತರ ಭಾರತ & ಮಧ್ಯ ಭಾರತದಲ್ಲಿ ಸಾಕಷ್ಟು ಪ್ರತಿರೋಧ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಂದ ಎದುರಾಗುತ್ತಿದೆ. ಇಂತಹ ಸಮಯದಲ್ಲೇ...

ಕಾಂಗ್ರೆಸ್ ಪಕ್ಷಕ್ಕೆ ಈ ಗೆಲುವು ಅನಿವಾರ್ಯ!
ಹೌದು, ಇನ್ನೇನು ಕೆಲವೇ ನಿಮಿಷದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಮೀಕ್ಷೆ ಹೊರ ಬೀಳಲಿದೆ. ಹೀಗೆ ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳಲಿವೆ? ಎಂಬ ಕುರಿತು ಮತದಾರರು ಕೂಡ ಸಾಕಷ್ಟು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಆದರೆ ಅದಕ್ಕೆ ಮೊದಲು ಕಾಂಗ್ರೆಸ್ ನಾಯಕರು ಮಹಾರಾಷ್ಟ್ರ ರಾಜ್ಯದಲ್ಲಿ ಗೆದ್ದೇ ಗೆಲ್ಲಬೇಕು ಎಂಬ ಭಾರಿ ಒತ್ತಡ ಎದುರಿಸುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ.
ಉತ್ತರ ಭಾರತದಲ್ಲಿ ಹುಟ್ಟಿ, ಎಲ್ಲಾ ಕಡೆಗೂ ಹರಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಉತ್ತರದಲ್ಲೇ ನೆಲೆ ಸಿಗುತ್ತಿಲ್ಲ ಎಂಬುದು ಎದುರಾಳಿಗಳ ಆರೋಪ. ಹಾಗೇ ಮತ್ತೊಂದು ಕಡೆ ದಕ್ಷಿಣ ಭಾರತ ಕಾಂಗ್ರೆಸ್ ಪಕ್ಷಕ್ಕೆ ಸುರಕ್ಷಿತ ಜಾಗವಾಗಿದ್ದರೆ, ಉತ್ತರ ಭಾರತದಲ್ಲಿ ಪ್ರಬಲ ರಾಜ್ಯಗಳನ್ನ ಈಗ ಉಳಿಸಿಕೊಳ್ಳಬೇಕಾದ ಅನಿವಾರ್ಯ ಸ್ಥಿತಿಗೆ ಕಾಂಗ್ರೆಸ್ ಸಿಲುಕಿದೆ. ಇಲ್ಲವಾದರೆ ಭವಿಷ್ಯದಲ್ಲಿ, ಕಾಂಗ್ರೆಸ್ ಪಕ್ಷ ದಕ್ಷಿಣ ಭಾರತಕ್ಕೆ ಸೀಮಿತವಾಗುವ ಅಪಾಯ ಆವರಿಸಿದೆ.
ಜಾರ್ಖಂಡ್ ಗೆಲ್ಲಲು ಕಾಂಗ್ರೆಸ್ ಪ್ಲಾನ್ ಏನು?
ಮಹಾರಾಷ್ಟ್ರ ಮಾತ್ರವಲ್ಲ ಇಂದು ಜಾರ್ಖಂಡ್ ರಾಜ್ಯದಲ್ಲೂ ವಿಧಾನಸಭೆ ಚುನಾವಣೆಯು ನಡೆದಿದೆ. ಒಟ್ಟು 2 ಹಂತದಲ್ಲಿ ಜಾರ್ಖಂಡ್ ರಾಜ್ಯದ ವಿಧಾನಸಭೆಗೆ ಮತದಾನ ನಡೆದಿದ್ದು, ಇಂದು 2ನೇ ಮತ್ತು ಕೊನೆಯ ಹಂತದಲ್ಲಿ ವೋಟಿಂಗ್ ಆಗಿದೆ. ಹೀಗಿದ್ದಾಗ ಜಾರ್ಖಂಡ್ನಲ್ಲಿ ಕಾಂಗ್ರೆಸ್ ಮೈತ್ರಿಕೂಟ ಆಡಳಿತ ನಡೆಸುತ್ತಿದ್ದು, ಈಗ ಅಧಿಕಾರ ಉಳಿಸಿಕೊಳ್ಳುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಶನಿವಾರದ ತನಕ ರಿಸಲ್ಟ್ ನೋಡಲು ಕಾಯಬೇಕಿದೆ!
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications