ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ: ಹೆಚ್.ಡಿ.ಕುಮಾರಸ್ವಾಮಿ ಭರವಸೆ
ಬೆಂಗಳೂರು,ಸೆಪ್ಟೆಂಬರ್ 14: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸುವ ಉದ್ದಿಮೆದಾರರ ಜತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಜೆಡಿಎಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜತೆ ಮಾತನಾಡಿ, ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಶಿರಾ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಶಾಸಕರಿಗೆ ಭರವಸೆ ನೀಡಿದರು.

ಹಾಗೆಯೇ ನಮ್ಮ ಇಲಾಖೆ ಹಂತದಲ್ಲಿಯೂ ಚರ್ಚೆ ಮಾಡುತ್ತೇನೆ ಎಂದ ಅವರು; ಗಡಿ ಭಾಗದಲ್ಲಿ ಕೈಗಾರಿಕೆಗಳು ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದು ಸಚಿವರು ಹೇಳಿದರು. ಮೊದಲಿನಿಂದಲೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಅಭಿವೃದ್ಧಿ ಪರವಾದ ದೊಡ್ಡ ಕೊಡುಗೆ ನೀಡಿದ್ದಾರೆ. ವೈಜಾಗ್ ಉಕ್ಕು ಘಟಕದ ಪುನರುದ್ಧಾರಕ್ಕೆ ನಾನು ಪ್ರಯತ್ನ ಮಾಡುತ್ತಿವುದು ನಿಮಗೆ ಗೊತ್ತೇ ಇದೆ. ಹನ್ನೆರಡು ವರ್ಷ ನಿರಂತರವಾಗಿ ಲಾಭದಲ್ಲಿದ್ದ ಈ ಕಾರ್ಖಾನೆ ಈಗ ನಷ್ಟದಲ್ಲಿದೆ. ಅದಕ್ಕೆ ಮರುಜೀವ ಕೊಡುವುದಕ್ಕೆ ನಾನು ಪ್ರಯತ್ನ ಮಾಡುತ್ತಿದ್ದೇನೆ. ಅದೇ ರೀತಿ ಮಡಕಶಿರಾ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ನಡೆಸುವೆ ಎಂದರು ಅವರು.
ನಾನು ಕೇಂದ್ರದ ಉಕ್ಕು ಖಾತೆ ಸಚಿವನಾದ ಮೇಲೆ ಆ ಕಾರ್ಖಾನೆಯ ವೈಜಾಗ್ ಸ್ಟೀಲ್ ಪುನರುಜ್ಜೀವನಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಅದು ಸವಾಲಿನ ಕೆಲಸ ಎನ್ನುವುದು ಗೊತ್ತಿದೆ. ಆದರೂ ನರೇಂದ್ರ ಮೋದಿ ಅವರ ಬೆಂಬಲದ ಜತೆಯಲ್ಲಿ ನಾನು ಮುಂದುವರಿದಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.
ಮಡಕಶಿರಾ ಶಾಸಕ ಎಂಎಸ್ ರಾಜು ಮಾತನಾಡಿ; ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. 3000 ಎಕರೆ ಜಾಗ ಇದೆ, ಪೆನುಗೊಂಡ ಹೆದ್ದಾರಿ ಬಳಿಯೂ ಜಾಗ ಇದೆ. ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗ ಇದೆ. ಕೈಗಾರಿಕೆ ಕ್ಲಸ್ಟರ್ ಮಾಡಿದರೆ ಮಡಕಶಿರಾ ಸೇರಿ ಅಲ್ಲಿ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ. ಮಡಕಶಿರಾ ಜತೆಗೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡುತ್ತಾ ಹೇಳಿದರು.
ಎಲ್ಲಾ ಮಕ್ಕಳು ವಯಸ್ಸಾದ ತಮ್ಮ ತಂದೆ ತಾಯಿಯನ್ನು ಊರಿನಲ್ಲಿ ಬಿಟ್ಟು ಬಂದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪಾವಗಡ ಹತ್ತಿರವೇ 1600 ಎಕರೆ ಭೂಮಿ ಇದೆ. ಕೈಗಾರಿಕೆ ಸ್ಥಾಪನೆ ಮಾಡಿದರೆ ಅಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಮನವಿ ಮಾಡಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಕೆ ಎನ್ ತಿಪ್ಪೇಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂಜಿನಪ್ಪ ಸೇರಿದಂತೆ ಹಲವಾರು ನಾಯಕರು ಹಾಜರಿದ್ದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications