ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳ ಜತೆ ಚರ್ಚೆ: ಹೆಚ್.ಡಿ.ಕುಮಾರಸ್ವಾಮಿ ಭರವಸೆ
ಬೆಂಗಳೂರು,ಸೆಪ್ಟೆಂಬರ್ 14: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸುವ ಉದ್ದಿಮೆದಾರರ ಜತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಜೆಡಿಎಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜತೆ ಮಾತನಾಡಿ, ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಶಿರಾ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, ಕೆಲಸಕ್ಕೆ ವಲಸೆ ಹೋಗುವುದು ತಪ್ಪುತ್ತದೆ. ಅಲ್ಲಿಗೆ ಸೂಕ್ತವಾಗುವ ಕೈಗಾರಿಕೆ ತರುವುದಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಶಾಸಕರಿಗೆ ಭರವಸೆ ನೀಡಿದರು.

ಹಾಗೆಯೇ ನಮ್ಮ ಇಲಾಖೆ ಹಂತದಲ್ಲಿಯೂ ಚರ್ಚೆ ಮಾಡುತ್ತೇನೆ ಎಂದ ಅವರು; ಗಡಿ ಭಾಗದಲ್ಲಿ ಕೈಗಾರಿಕೆಗಳು ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದು ಸಚಿವರು ಹೇಳಿದರು. ಮೊದಲಿನಿಂದಲೂ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಅಭಿವೃದ್ಧಿ ಪರವಾದ ದೊಡ್ಡ ಕೊಡುಗೆ ನೀಡಿದ್ದಾರೆ. ವೈಜಾಗ್ ಉಕ್ಕು ಘಟಕದ ಪುನರುದ್ಧಾರಕ್ಕೆ ನಾನು ಪ್ರಯತ್ನ ಮಾಡುತ್ತಿವುದು ನಿಮಗೆ ಗೊತ್ತೇ ಇದೆ. ಹನ್ನೆರಡು ವರ್ಷ ನಿರಂತರವಾಗಿ ಲಾಭದಲ್ಲಿದ್ದ ಈ ಕಾರ್ಖಾನೆ ಈಗ ನಷ್ಟದಲ್ಲಿದೆ. ಅದಕ್ಕೆ ಮರುಜೀವ ಕೊಡುವುದಕ್ಕೆ ನಾನು ಪ್ರಯತ್ನ ಮಾಡುತ್ತಿದ್ದೇನೆ. ಅದೇ ರೀತಿ ಮಡಕಶಿರಾ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ನಡೆಸುವೆ ಎಂದರು ಅವರು.
ನಾನು ಕೇಂದ್ರದ ಉಕ್ಕು ಖಾತೆ ಸಚಿವನಾದ ಮೇಲೆ ಆ ಕಾರ್ಖಾನೆಯ ವೈಜಾಗ್ ಸ್ಟೀಲ್ ಪುನರುಜ್ಜೀವನಕ್ಕೆ ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ಅದು ಸವಾಲಿನ ಕೆಲಸ ಎನ್ನುವುದು ಗೊತ್ತಿದೆ. ಆದರೂ ನರೇಂದ್ರ ಮೋದಿ ಅವರ ಬೆಂಬಲದ ಜತೆಯಲ್ಲಿ ನಾನು ಮುಂದುವರಿದಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.
ಮಡಕಶಿರಾ ಶಾಸಕ ಎಂಎಸ್ ರಾಜು ಮಾತನಾಡಿ; ಮಡಕಶಿರಾ ಮತ್ತು ಸುತ್ತಮುತ್ತಲ ಪ್ರದೇಶದ ಸುಮಾರು 40,000ಕ್ಕೂ ಹೆಚ್ಚು ನಮ್ಮ ಭಾಗದ ಬಡ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. 3000 ಎಕರೆ ಜಾಗ ಇದೆ, ಪೆನುಗೊಂಡ ಹೆದ್ದಾರಿ ಬಳಿಯೂ ಜಾಗ ಇದೆ. ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಅನುಕೂಲವಾದ ಜಾಗ ಇದೆ. ಕೈಗಾರಿಕೆ ಕ್ಲಸ್ಟರ್ ಮಾಡಿದರೆ ಮಡಕಶಿರಾ ಸೇರಿ ಅಲ್ಲಿ ನಮ್ಮ ಗಡಿಗೆ ಹೊಂದಿಕೊಂಡಿರುವ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಬಡ ಯುವಕರಿಗೆ ಅನುಕೂಲ ಆಗುತ್ತದೆ. ಮಡಕಶಿರಾ ಜತೆಗೆ ಪಾವಗಡ, ಶಿರಾ, ಮಧುಗಿರಿ, ಹಿರಿಯೂರು ಭಾಗದ ಯುವಕರಿಗೆ ಉದ್ಯೋಗ ದೊರೆಯುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡುತ್ತಾ ಹೇಳಿದರು.
ಎಲ್ಲಾ ಮಕ್ಕಳು ವಯಸ್ಸಾದ ತಮ್ಮ ತಂದೆ ತಾಯಿಯನ್ನು ಊರಿನಲ್ಲಿ ಬಿಟ್ಟು ಬಂದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಪಾವಗಡ ಹತ್ತಿರವೇ 1600 ಎಕರೆ ಭೂಮಿ ಇದೆ. ಕೈಗಾರಿಕೆ ಸ್ಥಾಪನೆ ಮಾಡಿದರೆ ಅಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಮನವಿ ಮಾಡಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಕೆ ಎನ್ ತಿಪ್ಪೇಸ್ವಾಮಿ, ಮಾಜಿ ಶಾಸಕ ತಿಮ್ಮರಾಯಪ್ಪ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂಜಿನಪ್ಪ ಸೇರಿದಂತೆ ಹಲವಾರು ನಾಯಕರು ಹಾಜರಿದ್ದರು.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications