ಆಹಾರದ ಬಗ್ಗೆ ದೂರಿತ್ತು ವಜಾಗೊಂಡಿದ್ದ ಸೈನಿಕನ ಮಗ ಸಾವು
ಚಂಡೀಗಢ, ಜನವರಿ 18: ಸೇನೆಯಲ್ಲಿ ನೀಡಲಾಗುವ ಆಹಾರ ಕಳಪೆ ಮಟ್ಟದ್ದಾಗಿದೆ ಎಂದು ವಿಡಿಯೋ ಮಾಡಿ ಆರೋಪಿಸಿದ ಕಾರಣಕ್ಕೆ ಸೇವೆಯಿಂದ ವಜಾಗೊಂಡಿದ್ದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರ ಮಗನ ಮೃತದೇಹ ಶುಕ್ರವಾರ ಆತನ ನಿವಾಸದಲ್ಲಿ ಪತ್ತೆಯಾಗಿದೆ.
ರೆವಾರಿ ಜಿಲ್ಲೆಯ ಶಾಂತಿ ವಿಹಾರದ ಮನೆಯಲ್ಲಿ ನೆಲೆಸಿದ್ದ 22 ವರ್ಷದ ರೋಹಿತ್ ತನಗೆ ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
'ರೋಹಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕರೆ ಬಂದಿತ್ತು. ಘಟನಾ ಸ್ಥಳದಲ್ಲಿ ಒಳಗಿನಿಂದ ಬಾಗಿಲು ಹಾಕಿಕೊಂಡಿರುವುದು ಗಮನಕ್ಕೆ ಬಂದಿತು. ದೇಹವು ಹಾಸಿಗೆ ಮೇಲೆ ಬಿದ್ದಿತ್ತು. ಕೈಗಳಲ್ಲಿ ಪಿಸ್ತೂಲು ಇತ್ತು. ಆತನ ತಂದೆ ಕುಂಭ ಮೇಳದಲ್ಲಿ ಭಾಗವಹಿಸಲು ತೆರಳಿದ್ದಾರೆ. ಅವರಿಗೆ ಮಾಹಿತಿ ನೀಡಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2017ರಲ್ಲಿ ತೇಜ್ ಬಹದ್ದೂರ್ ಯಾದವ್, ಪಾಕಿಸ್ತಾನದ ಗಡಿಭಾಗಕ್ಕೆ ಹೊಂದಿಕೊಂಡಂತೆ ಇರುವ ಪ್ರದೇಶದಲ್ಲಿನ ಭದ್ರತಾ ಪಡೆಗಳಿಗೆ ವಿತರಿಸಲಾಗುವ ಆಹಾರದ ಗುಣಮಟ್ಟದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದರು.
ಈ ವಿಡಿಯೋ ಒಂದೆಡೆ ಸೇನೆಯ ಬಗ್ಗೆ ಆಕ್ರೋಶ ವ್ಯಕ್ತವಾಗಲು ಕಾರಣವಾಗಿದ್ದರೆ, ತೇಜ್ ಬಹದ್ದೂರ್ ನಡೆದುಕೊಂಡ ರೀತಿ ಸಹ ಟೀಕೆಗೆ ಗುರಿಯಾಗಿತ್ತು.
Haryana: Rohit, 22-year-old son of Tej Bahadur Yadav (BSF constable who was dismissed from service after he had released a video last year on quality of food served to soldiers) found dead at his residence in Shanti Vihar, Rewari. pic.twitter.com/sVhY5ve6Ju
— ANI (@ANI) 17 January 2019
ನಿಯಮಾವಳಿಗೆ ವಿರುದ್ಧವಾಗಿ ಕಾರ್ಯಾಚರಣೆ ನಡೆಸುವ ವೇಳೆ ಎರಡು ಮೊಬೈಲ್ ಫೋನ್ಗಳನ್ನು ಕೊಂಡೊಯ್ದಿದ್ದು ಮತ್ತು ಕಠಿಣ ಸೂಚನೆಯ ಹೊರತಾಗಿಯೂ, ಸಮವಸ್ತ್ರದಲ್ಲಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದು ತಪ್ಪು ಎಂದು ಪರಿಗಣಿಸಿದ್ದ ಸಮ್ಮರಿ ಸೆಕ್ಯುರಿಟಿ ಫೋರ್ಸ್ ಕೋರ್ಟ್, ಸೇನೆಯ ಆದೇಶಗಳನ್ನು ಕಡೆಗಣಿಸಿದ್ದಕ್ಕಾಗಿ ಸೇವೆಯಿಂದ ವಜಾಗೊಳಿಸಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications