ಭೂತಾನ್ಗೆ 1.5 ಲಕ್ಷ ಕೋವಿಶೀಲ್ಡ್ ಲಸಿಕೆಯನ್ನ ಉಡುಗೊರೆ ನೀಡಿದ ಭಾರತ
ನವದೆಹಲಿ, ಜನವರಿ 20: ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆ ಕೋವಿಶೀಲ್ಡ್ನ 1.5 ಲಕ್ಷ ಡೋಸೇಜ್ ಲಸಿಕೆಯನ್ನು ಭಾರತವು ನೆರೆರಾಷ್ಟ್ರ ಭೂತಾನ್ಗೆ ಉಡುಗೊರೆಯಾಗಿ ನೀಡಿದೆ.
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಲಸಿಕೆಯನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ಮುಂಜಾನೆ ರವಾನಿಸಲಾಗಿದೆ.
ಮೂಲಗಳ ಮಾಹಿತಿ ಪ್ರಕಾರ, 1,50,000 ಡೋಸ್ಗಳನ್ನು ಭೂತಾನ್ ರಾಜಧಾನಿ ಥಿಂಪುವಿಗೆ ನೇರವಾಗಿ ತಲುಪಿಸಲಾಗುವುದು. ಹೀಗೆ ಕೋವಿಡ್ ಲಸಿಕೆಗಳನ್ನು ಭಾರತ ಸರ್ಕಾರದ ಉಡುಗೊರೆಯಾಗಿ ಪಡೆದ ಮೊದಲ ದೇಶ ಭೂತಾನ್ ಆಗಿದೆ.

ಭಾರತ-ಭೂತಾನ್ ವಿಶೇಷ ಸಂಬಂಧಗಳಿಗೆ ಅನುಗುಣವಾಗಿ, ಕೋವಿಡ್-19 ನಿರ್ಬಂಧಗಳ ಹೊರತಾಗಿಯೂ, ಭಾರತವು ಭೂತಾನ್ಗೆ ನಿರಂತರ ವ್ಯಾಪಾರ ಮತ್ತು ಅಗತ್ಯ ವಸ್ತುಗಳನ್ನು ಪೂರೈಸುವುದನ್ನು ಖಾತ್ರಿಪಡಿಸಿತು.
ಭಾರತವು ಇಲ್ಲಿಯವರೆಗೆ ಅಗತ್ಯ ಔಷಧಿಗಳನ್ನು ಮತ್ತು ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಿದೆ. ಇದರಲ್ಲಿ ಪ್ಯಾರಾಸಿಟಮಾಲ್, ಹೈಡ್ರಾಕ್ಸಿಕ್ಲೋರೋಕ್ವಿನ್, ಪಿಪಿಇ ಕಿಟ್ಗಳು, ಎನ್ 95 ಮಾಸ್ಕ್ಗಳು, ಎಕ್ಸರೆ ಯಂತ್ರಗಳು ಮತ್ತು 2.8 ಕೋರ್ಗಿಂತ ಹೆಚ್ಚಿನ ಮೌಲ್ಯದ ಪರೀಕ್ಷಾ ಕಿಟ್ಗಳು ಭೂತಾನ್ಗೆ ನೀಡಲಾಗಿದೆ.
ಕೋವಿಡ್-19 ಕಷ್ಟದ ಸಂದರ್ಭದಲ್ಲೂ ವ್ಯಾಪಾರ ಮತ್ತು ಸಾಗಣೆಗೆ ಅನುಕೂಲವಾಗುವಂತೆ ಭೂತಾನ್ ಸರ್ಕಾರದ ಕೋರಿಕೆಯ ಮೇರೆಗೆ ಭಾರತವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಇದರಲ್ಲಿ ತೋರ್ಶಾ ಟೀ ಗಾರ್ಡನ್ (ಭಾರತ) ಮತ್ತು ಅಹ್ಲೆ (ಭೂತಾನ್) ಮೂಲಕ ಹೊಸ ವ್ಯಾಪಾರ ಮಾರ್ಗವನ್ನು ತೆರೆಯಲಾಗಿದೆ. ನಾಗರ್ಕಟ, ಅಗರ್ತಲಾ, ಮತ್ತು ಪಾಂಡು ಮತ್ತು ಜೋಗಿಗೋಪಾ ನದಿ ಬಂದರುಗಳಲ್ಲಿ ಹೊಸ ವ್ಯಾಪಾರ ಕೇಂದ್ರಗಳು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿವೆ ಎಂದು ಮೂಲಗಳು ತಿಳಿಸಿವೆ.
-
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ









Click it and Unblock the Notifications