ನೇಣು ಕುಣಿಕೆಯಿಂದ ಯಾಕೂಬ್ ಗೆ ತಾತ್ಕಾಲಿಕ ರಿಲೀಫ್
ನವದೆಹಲಿ, ಜುಲೈ 28: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ಗೆ ನೇಣು ಕುಣಿಕೆಯಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜುಲೈ 30ರಂದು ಗಲ್ಲುಶಿಕ್ಷೆ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆ ನೀಡಿದ್ದು, ಈಗ ತ್ರಿಸದಸ್ಯ ವಿಭಾಗೀಯ ನ್ಯಾಯಾಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ತ್ರಿಸದಸ್ಯ ಪೀಠ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಮೆಮನ್ ಗಲ್ಲುಶಿಕ್ಷೆ ಸಾಧ್ಯವಿಲ್ಲ.
ಜುಲೈ 30ರಂದು ಗಲ್ಲು ಶಿಕ್ಷೆಗೇರಬೇಕಿದ್ದ ಯಾಕೂಬ್ ಮೆಮನ್, ಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ ತಾತ್ಕಾಲಿಕ ತಡೆ ನೀಡಿದೆ. ಅರ್ಜಿ ವಿಚಾರಣೆಯನ್ನು ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. [ಮೆಮನ್ ಗಲ್ಲಿಗೇರಿಸಲು ಡೇಟ್ ಫಿಕ್ಸ್]

ಗಲ್ಲಿಗೇರಿಸಲು ಎರಡು ದಿನ ಬಾಕಿ ಇರುವಾಗ ಯಾಕೂಬ್ ಸಲ್ಲಿಸಿರುವ ಅರ್ಜಿ ಪುರಸ್ಕರಿಸಬೇಕೇ? ಈ ಪ್ರಕರಣದಲ್ಲಿ ಇನ್ನೂ ಅರ್ಜಿ ವಿಚಾರಣೆ ಅಗತ್ಯವಿದೆಯೇ? ಎಂಬ ಪ್ರಶ್ನೆಗಳಿಗೆ ಪರಿಹಾರ ಸಿಗದ ಕಾರಣ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಲಾಗಿದೆ.[ಸುಪ್ರೀಂ ಮೊರೆ ಹೋದ ಯಾಕೂಬ್]
ಮುಖ್ಯ ನ್ಯಾಯಮೂರ್ತಿಗಳ ಅಧಿಕಾರ: ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು ಅವರು ಈ ವಿಷಯದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ. ಹೊಸದಾಗಿ ತ್ರಿಸದಸ್ಯ ರಚನೆ ಜವಾಬ್ದಾರಿ ಕೂಡಾ ನ್ಯಾ. ದತ್ತು ಅವರ ಮೇಲಿದೆ.
ಈ ಹಿಂದೆ ಮೆಮನ್ ಸಲ್ಲಿಸಿದ್ದ ಕ್ಯೂರೇಟರ್ ಅರ್ಜಿಯನ್ನು ತಿರಸ್ಕರಿಸಿದ್ದ ತ್ರಿಸದಸ್ಯ ನ್ಯಾಯಪೀಠದಲ್ಲಿ ನ್ಯಾ. ದತ್ತು ಅವರು ಇದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಇದಾದ ಬಳಿಕೆ ಮಹಾರಾಷ್ಟ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟಿಗೆ ಮತ್ತೊಮ್ಮೆ ಮೆಮನ್ ಮನವಿ ಸಲ್ಲಿಸಿದ್ದರು.
ಮತ್ತೆ ಅರ್ಜಿ ಸಲ್ಲಿಸಿದ್ದು ಏಕೆ?: ಕ್ಯೂರೇಟರ್ ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಇದ್ದ ಪರಿಸ್ಥಿತಿಗೂ ಈಗಿನ ಪರಿಸ್ಥಿತಿಗೂ ವ್ಯತ್ಯಾಸವಿದೆ. 1996 ಸ್ಕಿಜೋಫ್ರೆನಿಯಾ ಕಾಯಿಲೆಯಿಂದ ಬಳಲುತ್ತಿದ್ದೇನೆ. 20 ವರ್ಷಗಳಿಂದ ಜೈಲುವಾಸ ಅನುಭವಿಸಿದ್ದೇನೆ. ನನಗೆ ನೀಡಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ, ಗಲ್ಲು ಹಾಗೂ ಜೀವಾವಧಿ ಎರಡನ್ನು ಹೇಗೆ ಅನುಭವಿಸಲಿ ಎಂದು ಪ್ರಶ್ನಿಸಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications