ದೀಪಾವಳಿ ಪಟಾಕಿ ನಿಷೇಧಿಸದ ರಾಜ್ಯಗಳ ಪಟ್ಟಿ
ನವದೆಹಲಿ, ನವೆಂಬರ್ 13: ವಾಯುಮಾಲಿನ್ಯ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಸಾಕಷ್ಟು ರಾಜ್ಯಗಳು ದೀಪಾವಳಿ ಪಟಾಕಿಯ ಖರೀದಿ ಹಾಗೂ ಮಾರಾಟದ ಮೇಲೆ ನಿಷೇಧ ಹೇರಿವೆ.
ದೆಹಲಿಯಲ್ಲಿ ವಾಯುಗುಣಮಟ್ಟ ಕಳಪೆಯಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 9ರಿಂದ ನವೆಂಬರ್ 30ರವರೆಗೆ ಎಲ್ಲಾ ರೀತಿಯ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಒಂದು ದಿನದ ಸಂತೋಷ ಸಾವಿರಾರು ಕುಟುಂಬವನ್ನು ಕತ್ತಲೆಗೆ ದೂಡಬಾರದು ಎಂದು ಕಾಳಜಿಯೊಂದಿಗೆ ಹಸಿರು ನ್ಯಾಯಾಧಿಕರಣ ಪಟಾಕಿಯನ್ನು ಸಿಡಿಸದಂತೆ ಸೂಚಿಸಿದೆ.
ದೀಪಾವಳಿ, ಕಾಳಿ ಪೂಜಾ, ಛತ್, ಕಾರ್ತಿಕ ಪೂಜಾ ಹೀಗೆ ಯಾವುದೇ ಹಬ್ಬಗಳಲ್ಲಿ ಪಟಾಕಿ ಸಿಡಿಸದಂತೆ ಸೂಚಿಸಲಾಗಿದೆ. ಒಂದೊಮ್ಮೆ ನಿಯಮವನ್ನು ಉಲ್ಲಂಘಿಸಿದರೆ ಆರು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಯಾವ್ಯಾವ ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ
ದೆಹಲಿ: ನವೆಂಬರ್ 9 ರಿಂದ 30ರವರೆಗೆ ಎಲ್ಲಾ ರೀತಿಯ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಒಂದೊಮ್ಮೆ ನಿಯಮವನ್ನು ಉಲ್ಲಂಘಿಸಿದರೆ ಯಾರೇ ಆಗಿರಲಿ ವಾಯು ಕಾಯ್ದೆ ಪ್ರಕಾರ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.
ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ನವೆಂಬರ್ 5 ರಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ದೀಪಾವಳಿಯನ್ನು ಕೇವಲ ದೀಪಗಳನ್ನು ಬೆಳಗುವುದರ ಮೂಲಕ ಸರಳವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ದೀಪಾವಳಿಯಂದು ಸಾರ್ವಜನಿಕವಾಗಿ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ.
ಒಡಿಶಾ: ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ ಪಟಾಕಿ ಖರೀದಿ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ನವೆಂಬರ್ 10ರಿಂದ 30ರವರೆಗೆ ಪಟಾಕಿಗಳ ಮೇಲೆ ನಿಷೇಧ ಹೇರಲಾಗಿದೆ.
ಕರ್ನಾಟಕ: ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಹೊಡೆಯುವಂತೆ ಮನವಿ ಮಾಡಿದ್ದಾರೆ. ಹಾಗೂ ರಾಜ್ಯದಲ್ಲಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತದೆ.
ರಾಜಸ್ಥಾನ: ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ಹೊಡೆಯುವುದರಿಂದ ಅನೇಕ ಉಸಿರಾಟದ ತೊಂದರೆಗಳಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ನಿಷೇಧ ಹೇರಿದೆ.
ಚಂಡೀಗಢ: ಈಗಿನಿಂದಲೇ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸುವಂತೆ ಆದೇಶ ಹೊರಡಿಸಲಾಗಿದೆ.
ಸಿಕ್ಕಿಂ: ಸರ್ಕಾರವು ಪಟಾಕಿ ಸಿಡಿಸುವುದಕ್ಕೆ ನಿಷೇಧ ಹೇರಿದೆ. ಮುಂದಿನ ಆದೇಶದವರೆಗೂ ಇದು ಮುಂದುವರೆಯಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications