DK Shivakumar: ತಿಹಾರ್ ಜೈಲಿಗೆ ಕಳಿಸಿದ್ರೂ ನನಗೆ ಭಯವಿಲ್ಲ: ಡಿಕೆಶಿ ಸವಾಲು ಹಾಕಿದ್ಯಾರಿಗೆ?

ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರು ಚೆನ್ನೈನಲ್ಲಿ ಕರೆದಿದ್ದ ಕ್ಷೇತ್ರ ಪುನರ್ವಿಂಗಡಣೆ ಕುರಿತ ಮೊದಲ ಜಂಟಿ ಸಮಿತಿ ಸಭೆಯಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾಗಿಯಾದರು. ಈ ವೇಳೆ ಡಿಕೆಶಿ ಹಲವು ಮಹತ್ವದ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ತೆಲಂಗಾಣ, ಪಂಜಾಬ್, ಕೇರಳದ ನಾಯಕರೇ, ನಾವೆಲ್ಲರೂ ಇಲ್ಲಿ ಸೇರಿದ್ದೇವೆ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ನಮ್ಮ ಯಾವುದೇ ಸ್ಥಾನಗಳು ಕಡಿಮೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ʼನಾನು ಎಂ.ಕೆ.ಸ್ಟಾಲಿನ್ ಅವರನ್ನು ಅಭಿನಂದಿಸಲು ಬಯಸುತ್ತೇನೆ. ಏಕೆಂದರೆ ಅವರು ಡೀಲಿಮಿಟೇಷನ್‌ ವಿಚಾರದಲ್ಲಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರು ಈ ದೇಶದ ಒಕ್ಕೂಟ ರಚನೆ ಮತ್ತು ಸಂವಿಧಾನವನ್ನು ರಕ್ಷಿಸುತ್ತಿದ್ದಾರೆ ಎಂದು ನಮಗೆ ಬಹಳ ಹೆಮ್ಮೆ ಇದೆ. ನಾವೆಲ್ಲ ಒಟ್ಟಿಗೆ ಸೇರುವುದು ಆರಂಭ. ಇಂದು, ನಾವೆಲ್ಲರೂ ಪ್ರಗತಿ ಏನೆಂದು ಚರ್ಚಿಸುತ್ತೇವೆ ಹಾಗೂ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

DK Shivakumar Challenges BJP Even If Sent To Tihar Jail I Am Not Afraid

ತೆಲಂಗಾಣ, ಪಂಜಾಬ್, ಕೇರಳದ ನಾಯಕರೇ, ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಯಾವುದೇ ಬೆಲೆ ತೆತ್ತಾದರೂ, ನಾವು ನಮ್ಮ ದೇಶವನ್ನು ನಿರಾಸೆಗೊಳಿಸಲು ಸಾಧ್ಯವಿಲ್ಲ. ನಾವು ಬಹಳ ಪ್ರಗತಿಪರ ರಾಜ್ಯದವರು, ನಾವು ಆರ್ಥಿಕವಾಗಿ ಮತ್ತು ಸಾಕ್ಷರತೆಯಲ್ಲಿ ದೃಢವಾಗಿ ನಿಂತಿದ್ದೇವೆ. ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ನಮ್ಮ ಯಾವುದೇ ಸ್ಥಾನಗಳು ಕಡಿಮೆಯಾಗದಂತೆ ನೋಡಿಕೊಳ್ಳುತ್ತೇವೆ. ಬಿಜೆಪಿಯ ಎಲ್ಲ ಕಪ್ಪು ಬಾವುಟಗಳನ್ನು ನಾನು ಸ್ವಾಗತಿಸುತ್ತೇನೆ. ಅವರು ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಿದರೂ ನನಗೆ ಭಯವಿಲ್ಲ ಎಂದು ಸವಾಲ್‌ ಹಾಕಿದರು.

ಜನಸಂಖ್ಯೆಯನ್ನು ಮಾತ್ರ ಆಧರಿಸಿದ ಪ್ರಸ್ತಾವಿತ ಗಡಿ ನಿರ್ಣಯವು ಕೇವಲ ತಾಂತ್ರಿಕ ಹೊಂದಾಣಿಕೆಯಲ್ಲ, ಇದು ದಕ್ಷಿಣ ರಾಜ್ಯಗಳ ಮೇಲಿನ ರಾಜಕೀಯ ದಾಳಿ. ನಮ್ಮ ರಾಜ್ಯಗಳು ಬಹಳ ಹಿಂದಿನಿಂದಲೂ ಭಾರತದ ಬೆಳವಣಿಗೆಯ ಆಧಾರಸ್ತಂಭಗಳಾಗಿ ಆರ್ಥಿಕ ಪ್ರಗತಿಗೆ ಚಾಲನೆ ನೀಡುತ್ತವೆ. ಸಾಮಾಜಿಕ ಅಭಿವೃದ್ಧಿಯನ್ನು ಮುನ್ನಡೆಸುತ್ತವೆ. ಜನಸಂಖ್ಯಾ ಬೆಳವಣಿಗೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತವೆ. ಆದರೂ, ಕೇಂದ್ರವು ಈಗ ನಮ್ಮ ಸಂಸದೀಯ ಪ್ರಾತಿನಿಧ್ಯವನ್ನು ಕಡಿಮೆ ಮಾಡಲು ಯೋಜಿಸಿದೆ. ರಾಷ್ಟ್ರೀಯ ಚರ್ಚೆಯಲ್ಲಿ ನಮ್ಮ ಧ್ವನಿಯನ್ನು ಪರಿಣಾಮಕಾರಿಯಾಗಿ ಮೌನಗೊಳಿಸುತ್ತದೆ. ಇದು ಕೇವಲ ಅನ್ಯಾಯವಲ್ಲ, ಅಭಿವೃದ್ಧಿ ಮತ್ತು ಉತ್ತಮ ಆಡಳಿತಕ್ಕೆ ಶಿಕ್ಷೆಯಾಗಬಾರದು, ಪ್ರತಿಫಲ ನೀಡಬೇಕು ಎಂಬ ಸಾಂವಿಧಾನಿಕ ಭರವಸೆಗೆ ದ್ರೋಹ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಈ ಹೋರಾಟವು ಕೇವಲ ಸಂಖ್ಯೆಯ ಬಗ್ಗೆ ಅಲ್ಲ, ಇದು ನಮ್ಮ ಗುರುತು, ನಮ್ಮ ಸಂಸ್ಕೃತಿ ಮತ್ತು ನಮ್ಮ ಪರಂಪರೆಯ ಬಗ್ಗೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.

DK Shivakumar Challenges BJP Even If Sent To Tihar Jail I Am Not Afraid

ಮುಂದಿನ ಸಭೆ ಹೈದರಾಬಾದ್‌ನಲ್ಲಿ: ಸ್ಟಾಲಿನ್‌ ಘೋಷಣೆ

ಸಭೆಯಲ್ಲಿ ಭಾಗವಹಿಸಲು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಜಂಟಿ ಕ್ರಿಯಾ ಸಮಿತಿಯ ಮೊದಲ ಸಭೆಯಲ್ಲಿ ಭಾಗವಹಿಸಲು ಚೆನ್ನೈಗೆ ಬಂದಿದ್ದಾರೆ. ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಭಕ್ತ ಚರಣ್ ದಾಸ್ ಮತ್ತು ಬಿಜು ಜನತಾದಳ ನಾಯಕ ಸಂಜಯ್ ಕುಮಾರ್ ದಾಸ್ ಬರ್ಮಾ ಕೂಡ ಸಭೆಯಲ್ಲಿದ್ದರು.

ಪ್ರಜಾಪ್ರಭುತ್ವ ಪ್ರಾತಿನಿಧ್ಯವನ್ನು ಬಲಪಡಿಸುವ ಯಾವುದನ್ನೂ ನಾವು ವಿರೋಧಿಸುವುದಿಲ್ಲ. ಆದರೆ, ಆ ಕ್ರಮವು ನ್ಯಾಯಯುತವಾಗಿರಬೇಕು ಮತ್ತು ನ್ಯಾಯಯುತ ರಾಜಕೀಯ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರಬಾರದು. ಈ ಪ್ರತಿಭಟನೆಯು ಗಡಿ ನಿರ್ಣಯದ ವಿರುದ್ಧವಲ್ಲ, ನ್ಯಾಯಯುತ ಗಡಿ ನಿರ್ಣಯಕ್ಕಾಗಿ ಒತ್ತಾಯಿಸಲು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದರು.

DK Shivakumar Challenges BJP Even If Sent To Tihar Jail I Am Not Afraid

ಪ್ರಾತಿನಿಧ್ಯ ಕಡಿಮೆಯಾದರೆ, ಅದು ರಾಜ್ಯಗಳಿಗೆ ಹಣ ಪಡೆಯಲು ಹೋರಾಟಕ್ಕೆ ಕಾರಣವಾಗುತ್ತದೆ. ನಮ್ಮ ಇಚ್ಛೆ ಇಲ್ಲದಿದ್ದರೂ ಕಾನೂನುಗಳನ್ನು ಜಾರಿಗೆ ತರಲಾಗುತ್ತದೆ. ನಮ್ಮ ಜನರ ಮೇಲೆ ಪರಿಣಾಮ ಬೀರುವ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಪ್ರಮುಖ ಅವಕಾಶಗಳನ್ನ ಕಳೆದುಕೊಳ್ಳುತ್ತಾರೆ. ರೈತರು ಬೆಂಬಲವಿಲ್ಲದೆ ಹಿನ್ನಡೆ ಎದುರಿಸುತ್ತಾರೆ. ನಮ್ಮ ಸಂಸ್ಕೃತಿ ಮತ್ತು ಬೆಳವಣಿಗೆ ಅಪಾಯ ಎದುರಿಸುತ್ತದೆ. ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಬೀರುತ್ತದೆ. ಕ್ಷೇತ್ರಗಳ ಗಡಿ ನಿರ್ಣಯ ನಡೆದರೆ ಅಥವಾ ಪ್ರಾತಿನಿಧ್ಯ ಕಡಿಮೆಯಾದರೆ, ನಾವು ನಮ್ಮ ಸ್ವಂತ ದೇಶದಲ್ಲಿ ರಾಜಕೀಯ ಅಧಿಕಾರವನ್ನು ಕಳೆದುಕೊಳ್ಳುವ ನಾಗರಿಕರಾಗುತ್ತೇವೆ ಎಂದು ಕಳವಳ ವ್ಯಕ್ತಪಡಿಸಿದರು. ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಮುಂದಿನ ಸಭೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆಯಲಿದೆ ಎಂದೂ ಸಿಎಂ ಎಂಕೆ ಸ್ಟಾಲಿನ್ ಘೋಷಿಸಿದರು.

ಡಿಕೆಶಿ ವಿರುದ್ಧ ಅಣ್ಣಾಮಲೈ ಕಪ್ಪು ಬಾವುಟ ಪ್ರದರ್ಶನ

ಚೆನ್ನೈ ತಲುಪಿದ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಪಕ್ಷದ ಇತರ ನಾಯಕರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ನಮ್ಮ ತಮಿಳುನಾಡು ರಾಜ್ಯವು ನೆರೆಯ ರಾಜ್ಯಗಳೊಂದಿಗೆ ಹಲವಾರು ಸಮಸ್ಯೆಗಳನ್ನು ಹೊಂದಿದೆ. ಕೇರಳದೊಂದಿಗೆ, ನಮಗೆ ಮುಲ್ಲಪೆರಿಯಾರ್ ಅಣೆಕಟ್ಟು ಸಮಸ್ಯೆ ಇದೆ. ಕರ್ನಾಟಕ ಸರ್ಕಾರವು ಕರ್ನಾಟಕದ ಗಡಿಯಿಂದ ಹೊಸೂರು ಕಡೆಗೆ ಮೆಟ್ರೋ ಮಾರ್ಗವನ್ನು ವಿರೋಧಿಸಿದೆ. ವಿವಿಧ ಸಂದರ್ಭಗಳಲ್ಲಿ, ನಮ್ಮ ಸಿಎಂ ನೆರೆಯ ರಾಜ್ಯಗಳಿಗೆ ಭೇಟಿ ನೀಡಿದಾಗ ಈ ವಿಷಯಗಳನ್ನು ಪ್ರಸ್ತಾಪಿಸಲಿಲ್ಲ. ಆದರೆ ಇಂದು, ಅವರು ಎಲ್ಲ ಮುಖ್ಯಮಂತ್ರಿಗಳನ್ನು ಕರೆದು ಗಡಿ ನಿರ್ಣಯದ ಬಗ್ಗೆ ನಾಟಕ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಡಿಎಂಕೆ ಅಧಿಕಾರಕ್ಕೆ ಬಂದ ನಂತರದ ಕಳೆದ ನಾಲ್ಕು ವರ್ಷಗಳಲ್ಲಿ, ತಮಿಳುನಾಡಿನ ಹಿತಾಸಕ್ತಿಗಳನ್ನು ರಾಜಕೀಯ ಲಾಭಕ್ಕಾಗಿ ನಿರಂತರವಾಗಿ ಬಲಿ ಕೊಡಲಾಗಿದೆ. ತಮಿಳುನಾಡು ಸಿಎಂ ಕೇರಳಕ್ಕೆ ಎಂದಿಗೂ ಅವರೊಂದಿಗೆ ಮಾತನಾಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಹೋಗಿಲ್ಲ. ಆದರೆ ಇಂದು ಅವರು ಕೇರಳ ಸಿಎಂ ಅವರನ್ನು ತಾವು ಸೃಷ್ಟಿಸಿರುವ ಕೃತಕ ಸಮಸ್ಯೆಯ ಬಗ್ಗೆ ಮಾತನಾಡಲು ಆಹ್ವಾನಿಸಿದ್ದಾರೆ. ಕೇರಳ ಸಿಎಂ ಅವರನ್ನು ಆಹ್ವಾನಿಸಿ ತಮಿಳುನಾಡಿನ ಸಮಸ್ಯೆಗಳನ್ನು ಪರಿಹರಿಸದಿದ್ದಕ್ಕಾಗಿ ತಮಿಳುನಾಡು ಸಿಎಂಗೆ ನಮ್ಮ ಖಂಡನೆ ಎಂದು ದೂರಿದರು.

ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ವಿರುದ್ಧ ತಮ್ಮ ನಡೆಯನ್ನು ರೂಪಿಸುತ್ತಿದ್ದಾರೆ. ಅವರು ತಾವು ಅಖಿಲ ಭಾರತ ನಾಯಕ ಮತ್ತು ಸಿದ್ದರಾಮಯ್ಯ ಪ್ರಾದೇಶಿಕ ನಾಯಕ ಎಂದು ತೋರಿಸಲು ತಮಿಳುನಾಡಿಗೆ ಓಡಿ ಬರಲು ಇದೇ ಕಾರಣ. ಪ್ರಧಾನಿಯವರು ಜನಸಂಖ್ಯೆ ಮಾನದಂಡವಲ್ಲ ಎಂದು ಹೇಳಿದ್ದಾರೆ. ಅದು ಅನುಪಾತದ ಆಧಾರದ ಮೇಲೆ ನಡೆಯಲಿದೆ ಎಂದು ಅಣ್ಣಾಮಲೈ ತಿರುಗೇಟು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+