DK Shivakumar: ಡಿ ಕೆ ಶಿವಕುಮಾರ್ ಡಾವೊಸ್ ಪ್ರವಾಸ ರದ್ದು: ಕಾರಣ ಇಲ್ಲಿದೆ
ದೆಹಲಿ: ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ.
ರಾಜ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನದ ಜೊತೆಗೆ ಜನವರಿ 22ರಿಂದ ಆರಂಭವಾಗುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗವಹಿಸಬೇಕಾಗಿದೆ. ಹೀಗಾಗಿ ಡಾವೋಸ್ ಪ್ರವಾಸವನ್ನ ರದ್ದುಗೊಳಿಸಲಾಗಿದೆ.

ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಕೆಶಿ
ಅಸ್ಸಾಂ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ಖಂಡಿತವಾಗಿ ಅಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿದೆ. ಆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಮಗೆಲ್ಲರಿಗೂ ಚುನಾವಣೆ ನಿರ್ವಹಣೆ ಮಾಡಿ ಅನುಭವವಿದೆ. ನಾವೆಲ್ಲರೂ ಒಟ್ಟಾಗಿ ಅಸ್ಸಾಂನಲ್ಲಿ ಬದಲಾವಣೆಗಾಗಿ ಕೆಲಸ ಮಾಡುತ್ತೇವೆ. ಅಲ್ಲಿನ ಜನರ ಅಭಿಲಾಷೆಯೂ ಇದೇ ಆಗಿದೆ. ಗ್ಯಾರಂಟಿಯಾಗಿ ಸರ್ಕಾರ ಅಧಿಕಾರಕ್ಕೇರಲಿದೆ. ಸ್ಪಷ್ಟ ಸಂದೇಶವನ್ನು ನೀಡಲು ನಾವು ಬಯಸುತ್ತೇವೆ. ನಮ್ಮ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತೇವೆ ಎಂದರು. ಅಸ್ಸಾಂ ರಾಜ್ಯದಲ್ಲಿ ಪಕ್ಷದ ನಾಯಕತ್ವ ವಹಿಸಿಕೊಂಡಿರುವವರು ಯುವಕರು. ಇಲ್ಲಿನ ಎಲ್ಲಾ ನಾಯಕರು ಬೆಂಬಲ ನೀಡುತ್ತಿದ್ದಾರೆ. ನಮ್ಮ ಒಗ್ಗಟ್ಟು ಸ್ಪಷ್ಟ ಸಂದೇಶವನ್ನು ನೀಡಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಪಕ್ಷ ಮುನ್ನಡೆಯಲಿದೆ ಎಂದರು.
ಭೂಪೇಶ್ ಬಘೇಲ್ ಅವರು ಯಾವ ಕಾರ್ಯತಂತ್ರಗಳನ್ನು ಚುನಾವಣೆಯಲ್ಲಿ ಅನುಸರಿಸಬೇಕು ಎಂದು ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ ಸಭೆಯಲ್ಲಿ ಸಾಕಷ್ಟು ನಾಯಕರು ತಮ್ಮ ಆಲೋಚನೆಗಳನ್ನು ತಿಳಿಸಿದ್ದಾರೆ. ಪಕ್ಷದ ಪದಾಧಿಕಾರಿಗಳು ಅಸ್ಸಾಂನ ಪ್ರಸ್ತುತ ಸ್ಥಿತಿಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications