ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ
ಕಣ್ಣೂರು (ಕೇರಳ): 2026ರ ಕೇರಳ ವಿಧಾನಸಭಾ ಚುನಾವಣೆಯ ಅಖಾಡದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಕಣ್ಣೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇರಳದ ಜನತೆ ಈಗ ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಈ ಬಾರಿ ಯುಡಿಎಫ್ (UDF) ಮೈತ್ರಿಕೂಟ ಭರ್ಜರಿ ಜಯ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕೇರಳದ ಕಣ್ಣೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಮಟ್ಟನ್ನೂರಿನ ವಯಂತೋಡ್ ಜಂಕ್ಷನ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತಯಾಚಿಸಿದರು. ಕೇರಳದ ಪ್ರಸ್ತುತ ಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, "ಕಳೆದ 10 ವರ್ಷಗಳಲ್ಲಿ ಕೇರಳದಲ್ಲಿ ಯಾವುದೇ ಅಭಿವೃದ್ಧಿ ನಡೆದಿಲ್ಲ. ರಾಜ್ಯದ ಯುವಜನತೆ ಉದ್ಯೋಗವಿಲ್ಲದೆ ಬೀದಿಗೆ ಬಂದಿದ್ದಾರೆ. ಅಭಿವೃದ್ಧಿಯಿಲ್ಲದೆ ಯಾವುದೇ ರಾಜ್ಯ ಪ್ರಗತಿ ಹೊಂದಲು ಸಾಧ್ಯವಿಲ್ಲ. ಹೀಗಾಗಿಯೇ ಜನರು ಈ ಬಾರಿ ಆಡಳಿತ ಬದಲಾವಣೆಯನ್ನು ಬಯಸುತ್ತಿದ್ದಾರೆ" ಎಂದು ಆಡಳಿತಾರೂಢ ಎಲ್ಡಿಎಫ್ ಸರ್ಕಾರದ ವಿರುದ್ಧ ಟೀಕಿಸಿದರು.

ಕೇರಳದ ಮತದಾರರು ಈಗಾಗಲೇ ಬದಲಾವಣೆಯ ಮುನ್ಸೂಚನೆ ನೀಡಿದ್ದಾರೆ ಎಂದರು. ಸಂಸತ್ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಮೈತ್ರಿಕೂಟಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜನ ನಮಗೆ ಸಾಥ್ ನೀಡಿದ್ದಾರೆ. ಅದೇ ರೀತಿ ಈ ವಿಧಾನಸಭಾ ಚುನಾವಣೆಯಲ್ಲೂ ಅಭಿವೃದ್ಧಿಯ ಹೆಸರಿನಲ್ಲಿ ಜನರು ನಮಗೆ ಅಭೂತಪೂರ್ವ ವಿಜಯವನ್ನು ಉಡುಗೊರೆಯಾಗಿ ನೀಡಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಪಕ್ಷದ ಗೆಲುವು ಸುಲಭ
ಕೇರಳದಲ್ಲಿ ಕಾಂಗ್ರೆಸ್ ಮೂರನೇ ಎರಡರಷ್ಟು ಬಹುಮತದೊಂದಿಗೆ ಭರ್ಜರಿ ಜಯ ಸಾಧಿಸಲಿದೆ ಎಂದು ನನ್ನ ಎಲ್ಲ ಸ್ನೇಹಿತರು ಮತ್ತು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಈ ಬಾರಿ ನಮಗೆ ಯಾವುದೇ ಅಡೆತಡೆಯಿಲ್ಲದೆ ಸುಲಭವಾದ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಸ್ತುತ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷಗಳ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಜನರು ಅವರ ಆಡಳಿತದಿಂದ ಬೇಸತ್ತಿದ್ದಾರೆ. ಅಭಿವೃದ್ಧಿ ಕುಂಠಿತಗೊಂಡಿರುವುದು ಮತ್ತು ಯುವಜನತೆಯ ಸಮಸ್ಯೆಗಳಿಗೆ ಸ್ಪಂದಿಸದಿರುವುದು ಅವರಿಗೆ ಮುಳುವಾಗಲಿದೆ. ಅಂತಿಮವಾಗಿ ಯುಡಿಎಫ್ ಅತ್ಯಂತ ಆರಾಮದಾಯಕವಾಗಿ ಅಧಿಕಾರ ಹಿಡಿಯಲಿದೆ" ಎಂದು ಗುಡುಗಿದರು.
ಕೇರಳದಲ್ಲೂ 'ಕರ್ನಾಟಕ ಮಾಡೆಲ್' ಪ್ರಭಾವ
ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳು ಕೇರಳದ ಮತದಾರರ ಮೇಲೂ ಪ್ರಭಾವ ಬೀರಿದೆ ಎನ್ನಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರ ಆಗಮನವು ಕೇರಳದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ್ದು, ಮಟ್ಟನ್ನೂರು ಸೇರಿದಂತೆ ಕಣ್ಣೂರಿನ ಹಲವೆಡೆ ಅವರು ನಡೆಸಿದ ರೋಡ್ ಶೋಗಳಿಗೆ ಜನಸಾಗರವೇ ಹರಿದುಬಂದಿದೆ.
ಡಿ.ಕೆ.ಶಿವಕುಮಾರ್ ಅವರ ಆಗಮನದ ಹಿನ್ನೆಲೆಯಲ್ಲಿ ವಯಂತೋಡ್ ಜಂಕ್ಷನ್ನಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಬಾವುಟಗಳನ್ನು ಹಿಡಿದು, ಘೋಷಣೆಗಳನ್ನು ಕೂಗುತ್ತಾ ಅದ್ದೂರಿ ಸ್ವಾಗತ ಕೋರಿದರು. ತೆರೆದ ವಾಹನದಲ್ಲಿ ಸಾಗಿದ ಡಿ.ಕೆ. ಶಿವಕುಮಾರ್, ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಾರ್ವಜನಿಕರತ್ತ ಕೈಬೀಸುತ್ತಾ ಉತ್ಸಾಹ ತುಂಬಿದರು. ಕರ್ನಾಟಕದ ಚುನಾವಣಾ ತಂತ್ರಗಾರಿಕೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರಿಗೆ ಕೇರಳದಲ್ಲೂ ಭಾರಿ ಬೆಂಬಲ ವ್ಯಕ್ತವಾಗಿದೆ.
ರೋಡ್ ಶೋ ಉದ್ದಕ್ಕೂ ಮಾತನಾಡಿದ ಅವರು, "ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಕಾಂಗ್ರೆಸ್ ಬೆಂಬಲಿಸುವುದು ಇಂದಿನ ಅಗತ್ಯ. ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿದಂತೆ, ಕೇಂದ್ರದಲ್ಲೂ ಜನಪರ ಆಡಳಿತ ನೀಡಲು ಹಸ್ತದ ಗುರುತಿಗೆ ಮತ ನೀಡಿ" ಎಂದು ಕರೆ ನೀಡಿದರು. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಪರವಾಗಿ ಪ್ರಚಾರ ನಡೆಸಲು ಕರ್ನಾಟಕದ ಹಲವು ನಾಯಕರು ಆಗಮಿಸುತ್ತಿದ್ದು, ಡಿ.ಕೆ.ಶಿವಕುಮಾರ್ ಅವರ ರೋಡ್ ಶೋ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸಿದೆ.
-
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ










Click it and Unblock the Notifications