ಸಿಎಂ ಪಟ್ಟಕ್ಕೆ ಪಟ್ಟು; ದೆಹಲಿಗೆ ಬಂದ ಕನಕಪುರ ಬಂಡೆ: ರಾಹುಲ್ ಗಾಂಧಿ ಭೇಟಿಯಾಗ್ತಾರಾ ಡಿ ಕೆ ಶಿವಕುಮಾರ್?
ದೆಹಲಿ, ಡಿಸೆಂಬರ್ 03: ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಅಧಿಕಾರ ಹಂಚಿಕೆ ಕುರಿತಂತೆ ಕಾಂಗ್ರೆಸ್ ನಾಯಕರಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಮಧ್ಯೆ ಗುದ್ದಾಟಗಳು ನಡೆದಿದ್ದು, ಹೈಕಮಾಂಡ್ ಸೂಚನೆ ಮೇರೆ ಎರಡು ಭಾರೀ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಅಲ್ಲದೇ ಇಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ ಸಿ ವೇಣುಗೋಪಾಲ್ ಅವರನ್ನ ಭೇಟಿ ಮಾಡಿದ್ರೆ, ಇತ್ತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿಗೆ ಭೇಟಿ ಕೊಟ್ಟಿರುವ ಸಂದರ್ಭದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಈಗ ನಮ್ಮ ನಾಯಕರು ಸಂಸತ್ ಅಧಿವೇಶನದಲ್ಲಿ ಬ್ಯುಸಿ ಇದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ಗುರುವಾರ ಬೆಳಗ್ಗೆ ಬೆಂಗಳೂರಿಗೆ ಮರಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ದೆಹಲಿ ಭೇಟಿಯ ಉದ್ದೇಶದ ಕುರಿತು ಮಾತನಾಡಿ, ಮದುವೆ ಸಮಾರಂಭದಲ್ಲಿ ಭಾಗವಹಿಸುವುದು ಹಾಗೂ ಡಿ.14 ಪ್ರತಿಭಟನಾ ಸಮಾವೇಶಕ್ಕೆ ಕರ್ನಾಟಕ ರಾಜ್ಯದಿಂದ 10 ಸಾವಿರ ಜನರನ್ನು ಕರೆತರಲು ನಿರ್ಧರಿಸಲಾಗಿದೆ. ಇದರ ಪೂರ್ವ ತಯಾರಿ ನೋಡಿಕೊಳ್ಳುವುದು, ಪಕ್ಷದ ಅಧ್ಯಕ್ಷನಾಗಿ ನನ್ನ ಜವಾಬ್ದಾರಿ ಎಂದು ತಿಳಿಸಿದರು.

8 ರಂದು ಸಿಡಬ್ಲ್ಯುಎಂಎ ಸಭೆ ಇದೆ ಎಂದು ಕೇಳಿದಾಗ, "ಈ ಬಗ್ಗೆ ಎಲ್ಲಾ ದಾಖಲೆ ಸಿದ್ಧ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಾವು ನಮ್ಮ ವಿಚಾರ ಪ್ರತಿಪಾದಿಸಬೇಕು. ಇಲ್ಲದಿದ್ದರೆ, ಸಭೆ ಮುಂದೂಡಿಕೊಂಡು ಹೋಗಲಾಗುವುದು. ನಾವು ಅವರ ಮುಂದೆ ಪ್ರೆಸೆಂಟೇಷನ್ ಸಲ್ಲಿಸಬೇಕು. ಇದಕ್ಕೆ 6 ತಿಂಗಳ ಕಾಲಾವಕಾಶ ಇದೆ ಎಂದು ತಿಳಿಸಿದರು.
ಸಿಎಂ ಜೊತೆಗಿನ ಉಪಹಾರ ಸಭೆಯಲ್ಲಿ ಏನು ಚರ್ಚೆ ಆಯಿತು ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಉಪಹಾರ ಸಭೆಯಲ್ಲಿ ಸಿಎಂ ಜೊತೆ ಸಾಕಷ್ಟು ವಿಚಾರ ಚರ್ಚೆ ಮಾಡಿದ್ದೇನೆ. ಎಲ್ಲರೂ ಒಟ್ಟಾಗಿ ಕರ್ನಾಟಕ ರಾಜ್ಯವನ್ನು ಮುನ್ನಡೆಸುವುದು, ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications