ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ದಂಪತಿ
ಕೇದರನಾಥ್ ಮೇ 17: ಭಾನುವಾರವಷ್ಟೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೋಮವಾರ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೂರು ದಿನಗಳ ಚಿಂತನ್ ಶಿಬಿರದಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಉತ್ತರಾಖಂಡದ ಜಗತ್ ಪ್ರಸಿದ್ಧ ಕೇದಾರನಾಥ ಶಿವ ದೇಗುಲಕ್ಕೆ ಪತ್ನಿ ಉಷಾ ಅವರ ಜತೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಶುಕ್ರವಾರ ಬೆಳಗ್ಗೆ (ಮೇ 6) ಕೇದಾರನಾಥ ದೇವಾಲಯದ ಬಾಗಿಲು ತೆರೆದಿವೆ. ಮೊದಲ ದಿನ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಪತ್ನಿ ಗೀತಾ ಧಾಮಿ ಅವರೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ಧಾಮದ ಬಾಗಿಲು ತೆರೆಯುವ ಸಂದರ್ಭದಲ್ಲಿ ಸಾವಿರಾರು ಭಕ್ತರು ಸೇರಿದ್ದರು.
ವೈದಿಕ ಪಠಣದೊಂದಿಗೆ ವರ್ಷಗಳ ಹಿಂದಿನ ಸಾಂಪ್ರದಾಯಿಕ ಆಚರಣೆಯ ನಂತರ ದೇವಾಲಯದ ಬಾಗಿಲು ತೆರೆಯಲಾಯಿತು. ಈ ವಿಶೇಷ ದಿನಕ್ಕಾಗಿ ದೇವಾಲಯವನ್ನು 15 ಕ್ವಿಂಟಾಲ್ ಹೂವುಗಳಿಂದ ಅಲಂಕರಿಸಲಾಗಿತ್ತು. ಕಳೆದ ವರ್ಷ ನವೆಂಬರ್ 6 ರಂದು ದೇವಾಲಯದ ದ್ವಾರಗಳು ಆರು ತಿಂಗಳ ಕಾಲ ಚಳಿಗಾಲಕ್ಕಾಗಿ ಮುಚ್ಚಲ್ಪಟ್ಟಿದ್ದವು. ಆರು ತಿಂಗಳ ಬಳಿಕ ಕೇದಾರನಾಥ ದೇವಾಲಯವನ್ನು ತೆರೆಯಲಾಗಿದೆ.
ಕೇದಾರನಾಥ ದೇವಾಲಯದ ನಿರ್ಮಾತೃ ಯಾರು ಎನ್ನುವ ಪ್ರಶ್ನೆಯ ಮಧ್ಯೆ ನಿರ್ಮಾಣದ ಹಲವು ಅಚ್ಚರಿಗಳು
ಮಂದಾಕಿನಿ ನದಿಯ ದಂಡೆಯ ಮೇಲಿರುವ ಕೇದಾರನಾಥ ದೇವಾಲಯವು ಯಮುನೋತ್ರಿ, ಗಂಗೋತ್ರಿ ಮತ್ತು ಬದರಿನಾಥವನ್ನು ಒಳಗೊಂಡಿರುವ ನಾಲ್ಕು ಪುರಾತನ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಇದರಿಂದ ಇದನ್ನು 'ಚಾರ್ ಧಾಮ್' ಎಂದು ಕರೆಯಲಾಗುತ್ತದೆ. ಎಂಟನೇ ಶತಮಾನದಲ್ಲಿ ಜಗದ್ ಗುರು ಆದಿ ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟ ಕೇದಾರನಾಥ ದೇವಾಲಯವು ಶಿವನಿಗೆ ಸಮರ್ಪಿತವಾಗಿದೆ.
ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ಪೋರ್ಟಲ್ಗಳನ್ನು ತೆರೆಯುವುದರೊಂದಿಗೆ ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಮೇ 3 ರಂದು ವಾರ್ಷಿಕ ಚಾರ್ಧಾಮ್ ಯಾತ್ರೆ ಪ್ರಾರಂಭವಾಯಿತು. ಬದರಿನಾಥ ದೇವಾಲಯದ ಪೋರ್ಟಲ್ಗಳು ಮೇ 8 ರಂದು ತೆರೆಯಲ್ಪಟ್ಟಿವೆ. ಈ ತಿಂಗಳ ಆರಂಭದಲ್ಲಿ ರಾಜ್ಯ ಸರ್ಕಾರವು ಚಾರ್ ಧಾಮ್ಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆಯನ್ನು ಮಿತಿಗೊಳಿಸಿದೆ.
ಪ್ರತಿದಿನ ಒಟ್ಟು 15,000 ಯಾತ್ರಾರ್ಥಿಗಳಿಗೆ ಬದರಿನಾಥ, 12,000 ಕೇದಾರನಾಥ, 7,000 ಗಂಗೋತ್ರಿ ಮತ್ತು 4,000 ಯಮುನೋತ್ರಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. 45 ದಿನಗಳ ಕಾಲ ಈ ವ್ಯವಸ್ಥೆ ಮಾಡಲಾಗಿದೆ. ಈ ವರ್ಷ ಯಾತ್ರಾರ್ಥಿಗಳು COVID-19 ಪರೀಕ್ಷಾ ವರದಿ ಅಥವಾ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಲ್ಲ. ಚಾರ್ ಧಾಮ್ಗಳು ದೇಶ ಮತ್ತು ವಿದೇಶಗಳಿಂದ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಮತ್ತು ಭಕ್ತರನ್ನು ಸೆಳೆಯುತ್ತವೆ.