ಎಸ್ ಬಿಐ ಖಾತೆದಾರರು, ಡಿಎಲ್ ಹೊಂದಿರುವವರಿಗೆ ಹೊಸ ನಿಯಮ ಜಾರಿ
ನವದೆಹಲಿ, ಸಪ್ಟೆಂಬರ್.27: ಕೇಂದ್ರ ಸರ್ಕಾರ ಜಾರಿಗೊಳಿಸುವ ಹೊಸ ನಿಯಮಗಳ ಪಾಲನೆ ಅತ್ಯಗತ್ಯವಾಗಿದೆ. ವಾಹನ ಚಾಲನೆ ಮತ್ತು ವಾಹನ ನೋಂದಣಿ ಪ್ರಕ್ರಿಯೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಲಾಗಿದ್ದು, ಅಕ್ಟೋಬರ್.01ರಿಂದ ಹೊಸ ನಿಯಮ ಜಾರಿಗೆ ಬರಲಿದೆ.
ಭಾರತೀಯರು ಹಳೆದ ವಾಹನ ನೋಂದಣಿ ಪದ್ಧತಿ ಮತ್ತು ಚಾಲನೆ ಪರವಾನಗಿ ಪ್ರಕ್ರಿಯೆ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ಅಂಶಗಳಿವೆ. ಅಕ್ಟೋಬರ್.01ರಿಂದ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳಲ್ಲಿ ಕ್ರೆಡಿಟ್ ಕಾರ್ಡ್ ಗಳ ಮೂಲಕ ಹಣ ಪಾವತಿಸಿದರೂ ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ. ಇಂಥದ್ದೇ ಹಲವು ಪ್ರಮುಖ ಅಂಶಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.
ಹೆಲ್ಮೆಟ್ ಧರಿಸದ ಬೈಕ್ ಸವಾರನಿಗೆ 42,500 ರೂಪಾಯಿ ದಂಡ
ಭಾರತದಾದ್ಯಂತ ಅಕ್ಟೋಬರ್.01 ರಿಂದ ಏಕರೂಪದ ವಾಹನ ನೋಂದಣಿ ಕಾರ್ಡ್ಗಳು (ಆರ್ಸಿಗಳು) ಮತ್ತು ಚಾಲನಾ ಪರವಾನಗಿಗಳನ್ನು (ಡಿಎಲ್ ಗಳು) ನೀಡಲಾಗುತ್ತದೆ. ಹೊಸ ಚಾಲನಾ ಪರವಾನಗಿಯು ಕ್ವಿಕ್ ರೆಸ್ಪಾನ್ಸ್ (ಕ್ಯೂಆರ್) ಕೋಡ್ ಮತ್ತು ನಿಯರ್ ಫೀಲ್ಡ್ ಕಮ್ಯುನಿಕೇಷನ್ (ಎನ್ಎಫ್ಸಿ) ನಂತಹ ವೈಶಿಷ್ಟ್ಯಗಳೊಂದಿಗೆ ಸುಧಾರಿತ ಮೈಕ್ರೋಚಿಪ್ ಅನ್ನು ಹೊಂದಿರುತ್ತದೆ.

ಡಿಎಲ್ ಮತ್ತು ಆರ್ ಸಿ ನಿಯಮಗಳಲ್ಲಿ ಬದಲಾವಣೆ
ಈ ಬದಲಾವಣೆ ಕೇಂದ್ರೀಕೃತ ಆನ್ಲೈನ್ ಡೇಟಾಬೇಸ್ ನಲ್ಲಿ ಡಿಎಲ್ ಹೊಂದಿರುವವರ ದಾಖಲೆಗಳು ಮತ್ತು ದಂಡವನ್ನು 10 ವರ್ಷಗಳವರೆಗೆ ಉಳಿಸಿಕೊಳ್ಳಲು ಸಹಾಯವಾಗುತ್ತದೆ. ಹೊಸ ಡಿಎಲ್ ವಿಭಿನ್ನ ಸಾಮರ್ಥ್ಯದ ಚಾಲಕರ ದಾಖಲೆಗಳು, ವಾಹನಗಳಲ್ಲಿ ಮಾಡಿದ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲು ಸರ್ಕಾರಕ್ಕೆ ಸಹಕಾರಿಯಾಗಲಿದೆ. ಆರ್ಸಿಗಳಂತೆ, ಅಕ್ಟೋಬರ್ 1 ರಿಂದ ಈ ಪ್ರಕ್ರಿಯೆ ಕಾಗದರಹಿತಗೊಳಿಸಲು ಸರ್ಕಾರ ಸಿದ್ಧವಾಗಿದೆ. ಹೊಸ ಆರ್ಸಿ ಮಾಲೀಕರ ಹೆಸರನ್ನು ಮುಂಭಾಗದಲ್ಲಿ ಮುದ್ರಿಸಿದರೆ ಮೈಕ್ರೊಚಿಪ್ ಮತ್ತು ಕ್ಯೂಆರ್ ಕೋಡ್ ಅನ್ನು ಕಾರ್ಡ್ನ ಹಿಂಭಾಗದಲ್ಲಿ ಹುದುಗಿಸಲಾಗುತ್ತದೆ.

ಕ್ರೆಡಿಟ್ ಕಾರ್ಡ್ ಗಳಿಗೆ ವಿನಾಯಿತಿ ಇರುವುದಿಲ್ಲ
ದೇಶಾದ್ಯಂತ ಪೆಟ್ರೋಲ್ ಬಂಕ್ ಗಳಲ್ಲಿ ವಾಹನಗಳಿಗೆ ಇಂಧನ ಹಾಕಿಸಿಕೊಂಡ ಬಳಿಕ ಕ್ರೆಡಿಟ್ ಕಾರ್ಡ್ ಮೂಲಕ ಹಣ ಪಾವತಿಸಿದರೂ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ. ಡಿಜಿಟಲ್ ಪಾವತಿ ಉತ್ತೇಜಿಸಲು ತೈಲ ಕಂಪನಿಗಳು ಕ್ರೆಡಿಟ್ / ಡೆಬಿಟ್ ಕಾರ್ಡ್ಗಳು ಮತ್ತು ಇ-ವ್ಯಾಲೆಟ್ ಗಳನ್ನು ಬಳಸಿಕೊಂಡು ಈ ರಿಯಾಯಿತಿ ಪರಿಚಯಿಸಿದ್ದವು. ಸಿಹಿ ಸುದ್ದಿ ಎಂದರೆ ಡೆಬಿಟ್ ಕಾರ್ಡ್ಗಳ ಮೇಲಿನ ರಿಯಾಯಿತಿ ಮತ್ತು ಡಿಜಿಟಲ್ ಪಾವತಿಗಳ ಇತರ ವಿಧಾನಗಳು ಸದ್ಯಕ್ಕೆ ಮುಂದುವರಿಯುತ್ತದೆ.

ಕಾರುಸಾಲು, ಗೃಹಸಾಲ, ವೈಯಕ್ತಿಕ ಸಾಲದರ ಕಡಿಮೆ
ಭಾರತೀಯ ರಿಸರ್ವ್ ಬ್ಯಾಂಕ್ ಚಿಲ್ಲರೆ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೀಡುವ ಸಾಲಗಳಿಗೆ ನೀಡುವ ಬಾಹ್ಯ ಬಡ್ಡಿದರದ ನಿಗದಿಗೊಳಿಸುವ ಮಾನದಂಡವನ್ನು ಕಡ್ಡಾಯಗೊಳಿಸಲಾಗಿದೆ. ಗೃಹ ಸಾಲ, ವಾಹನ ಸಾಲ ಮತ್ತು ವೈಯಕ್ತಿಕ ಸಾಲಗಳ ಮೇಲಿನ ದರವನ್ನು ಕಡಿಮೆಗೊಳಿಸಲಾಗಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ ಕಾರ್ಪೊರೇಟ್ ತೆರಿಗೆಯನ್ನು ಅಕ್ಟೋಬರ್. 01 ರಿಂದ ಜಾರಿಗೆ ಬರುವಂತೆ ಕಡಿತಗೊಳಿಸಲಾಗುತ್ತದೆ.

ಕನಿಷ್ಠ ಬಾಕಿ ಮೊತ್ತದ ಪ್ರಮಾಣ ಇಳಿಸಿದ ಎಸ್ ಬಿಐ
ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಖಾತೆದಾರರು ಮಾಸಿಕ ಹೊಂದಿರಬೇಕಾದ ಕನಿಷ್ಠ ಬಾಕಿ ಮೊತ್ತದ ಪ್ರಮಾಣವನ್ನು ಮೊದಲಿಗಿಂತಲೂ ಇಳಿಕೆ ಮಾಡಿದೆ. ಮೆಟ್ರೋ ಮತ್ತು ನಗರ ಕೇಂದ್ರದಲ್ಲಿ ಖಾತೆ ಹೊಂದಿರುವವರು ಕನಿಷ್ಠ ಮಾಸಿಕ 3,000 ಮತ್ತು ಗ್ರಾಮೀಣ ಶಾಖೆಗಳಲ್ಲಿ ಖಾತೆ ಹೊಂದಿರುವವರು 1,000 ಬಾಕಿ ಹೊಂದಿರಬೇಕು. ಖಾತೆದಾರರು ಈ ಮೊತ್ತ ನಿರ್ವಹಿಸಲು ವಿಫಲವಾದಲ್ಲಿ ಶುಲ್ಕವನ್ನು ಸಹ ಕಡಿಮೆಗೊಳಿಸಲಾಗುತ್ತದೆ. ಅಲ್ಲದೇ ಶೇಕಡಾ 50 ರಷ್ಟು ಕಡಿಮೆಯಾದರೆ, ವ್ಯಕ್ತಿಗೆ 10 ರೂ ಮತ್ತು ಜಿಎಸ್ಟಿ ವಿಧಿಸಲಾಗುತ್ತದೆ. ಖಾತೆದಾರನು ಶೇಕಡಾ 50-75 ಕ್ಕಿಂತ ಕಡಿಮೆಯಾದರೆ, ಅಂಥವರು 12 ರೂ.ಗಳ ದಂಡ ಮತ್ತು ಜಿಎಸ್ಟಿ ಪಾವತಿಸಬೇಕಾಗುತ್ತದೆ. ಖಾತೆದಾರನು ಶೇಕಡಾ 75 ಕ್ಕಿಂತ ಹೆಚ್ಚು ಕಡಿಮೆಯಾದರೆ, ಅದು 15 ರೂ.ಗಳ ದಂಡ ಮತ್ತು ಜಿಎಸ್ ಟಿ ವಿಧಿಸಲಾಗುತ್ತದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications