ಪೊಂಗಲ್ ಗೆ ನಿರ್ಬಂಧಿತ ರಜೆ: ಡಿಎಂಕೆ, ಎಐಡಿಎಂಕೆ ಕಿಡಿ
ಚೆನ್ನೈ, ಜ. 10: ತಮಿಳುನಾಡಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಅಲ್ಲಿನ ಪ್ರಮುಖ ಹಬ್ಬವಾದ ಪೊಂಗಲ್ ಆಚರಣೆ ಸಂದರ್ಭವನ್ನು ನಿರ್ಬಂಧಿತ ರಜೆಯಾಗಿ ಪರಿಗಣಿಸುವಂತೆ ಚಿಂತನೆ ನಡೆಸಿರುವ ಕೇಂದ್ರ ಕ್ರಮವನ್ನು ಡಿಎಂಕೆ ಹಾಗೂ ಎಐಡಿಎಂಕೆ ಪಕ್ಷಗಳು ತೀವ್ರವಾಗಿ ವಿರೋಧಿಸಿವೆ.
ಕೇಂದ್ರದಿಂದ ಈ ಬಗ್ಗೆ ಅಧಿಕೃತ ಆದೇಶ ಬಂದಿಲ್ಲವಾದರೂ, ಈ ಬಗೆಯ ಊಹಾಪೋಹಗಳು ತಮಿಳು ರಾಜಕೀಯ ವಲಯದಲ್ಲಿ ಹರಡಿ ಸಂಚಲನ ಸೃಷ್ಟಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಡಿಎಂಕೆ ಮಹಾ ಕಾರ್ಯದರ್ಶಿ ವಿಕೆ ಶಶಿಕಲಾ, "ತಮಿಳುನಾಡಿನಲ್ಲಿ ಪೊಂಗಲ್ ಆಚರಣೆ ವಿಶೇಷವಾಗಿದ್ದು, ಇಲ್ಲಿಎಲ್ಲಾ ಸರ್ಕಾರಿ ಸೇವೆಗಳಿಗೆ ಸಾರ್ವತ್ರಿಕ ರಜೆಯೆಂದು ಈವರೆಗೆ ಘೋಷಿಸಲಾಗಿದೆ. ಆದರೆ, ತಮಿಳುನಾಡಿನಲ್ಲಿ ಸೇವೆ ಸಲ್ಲಿಸುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಪೊಂಗಲ್ ಹಬ್ಬವನ್ನು ನಿರ್ಬಂಧಿತ ರಜೆಯೆಂದು ಘೋಷಣೆ ಮಾಡಲ ಕೇಂದ್ರ ಸರ್ಕಾರ ಮುಂದಾಗಿರುವುದು ಬೇಸರದ ಸಂಗತಿ'' ಎಂದು ಹೇಳಿದ್ದಾರೆ.
ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷ ಡಿಎಂಕೆ, ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು, "ಬಹು ಸಂಸ್ಕೃತಿಯುಳ್ಳ ದೇಶದಲ್ಲಿ ಇಂಥ ನಿರ್ಬಂಧಗಳನ್ನು ವಿಧಿಸುವುದು ಸಲ್ಲ'' ಎಂದು ಹೇಳಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications