ಡಿಎಂಕೆ ಫೈಲ್ಸ್: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ತಮಿಳುನಾಡು ಸರ್ಕಾರದಿಂದ ಮಾನನಷ್ಟ ಮೊಕದ್ದಮೆ ಏಕೆ?
ಚೆನ್ನೈ, ಮೇ.11: ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರೆಸಿರುವ ಬಗ್ಗೆ ತಮಿಳುನಾಡು ಸರ್ಕಾರ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಈ ಭ್ರಷ್ಟಾಚಾರದ ಆರೋಪಗಳನ್ನು "ಡಿಎಂಕೆ ಫೈಲ್ಸ್" ಎಂದು ಕರೆಯಲಾಗುತ್ತಿದೆ.
ಸರ್ಕಾರದ ಪರವಾಗಿ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ದೇವರಾಜನ್ ಅವರು ಮಾನನಷ್ಟ ಮೊಕದ್ದಮೆಯನ್ನು ಸಲ್ಲಿಸಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 199 (ಮಾನನಷ್ಟಕ್ಕಾಗಿ ಪ್ರಾಸಿಕ್ಯೂಷನ್) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಅಣ್ಣಾಮಲೈ ಅವರು ಡಿಎಂಕೆ ಫೈಲ್ಸ್ ಬಿಡುಗಡೆ ಮಾಡಲು ಏಪ್ರಿಲ್ 14 ರಂದು ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಳೆದ ತಿಂಗಳು, ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ಎಂಕೆ ಸ್ಟಾಲಿನ್ ಸೇರಿದಂತೆ ಡಿಎಂಕೆ ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿ 'ಡಿಎಂಕೆ ಫೈಲ್ಸ್' ಬಿಡುಗಡೆ ಮಾಡಿದ್ದರು.
2011 ರಲ್ಲಿ ಚೆನ್ನೈ ಮೆಟ್ರೋ ಗುತ್ತಿಗೆಯನ್ನು ಸರಿಪಡಿಸಲು ಎಂಕೆ ಸ್ಟಾಲಿನ್ ಅವರಿಗೆ 200 ಕೋಟಿ ಪಾವತಿಸಲಾಗಿದೆ ಎಂದು ಅಣ್ಣಾಮಲೈ ಆರೋಪಿಸಿದ್ದರು. ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ ಎಂದು ಹೇಳಿರುವ ಅಣ್ಣಾಮಲೈ, ಮುಖ್ಯಮಂತ್ರಿಗಳ ಕುಟುಂಬ ಸದಸ್ಯರು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವ ದುಬೈ ಕಂಪನಿಯ ನಿರ್ದೇಶಕರು ಎಂದು ಆರೋಪಿಸಿದ್ದರು.

ಪ್ರತಿಯಾಗಿ, ಆಡಳಿತಾರೂಢ ಡಿಎಂಕೆ ಪಕ್ಷ ಮತ್ತು ಅದರ ಅಧ್ಯಕ್ಷ ಎಂಕೆ ಸ್ಟಾಲಿನ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕಾನೂನು ನೋಟಿಸ್ ಜಾರಿಗೊಳಿಸಿತು. ಡಿಎಂಕೆಯು ಅಣ್ಣಾಮಲೈ ಅವರು ಕ್ಷಮೆ ಯಾಚಿಸಬೇಕು ಮತ್ತು 500 ಕೋಟಿ ರೂ.ಗಳ ಮಾನನಷ್ಟ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.
ಆದರೆ, ಅಣ್ಣಾಮಲೈ ಪ್ರಕರಣದ ವಿರುದ್ಧ ಹೋರಾಟ ನಡೆಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ತಾವು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದು, ಯಾವುದೇ ಅಪರಾಧ ಮಾಡಿಲ್ಲ ಎಂದು ಆರೋಪಗಳನ್ನು ನಿರಾಕರಿಸಿದ್ದಾರೆ.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications