ಸನಾತನ ಧರ್ಮ ವಿವಾದ: ಡಿಎಂಕೆಯನ್ನು ಡೆಂಗ್ಯೂ, ಮಲೇರಿಯಾ, ಸೊಳ್ಳೆಗೆ ಹೋಲಿಸಿದ ಬಿಜೆಪಿ ನಾಯಕ ಅಣ್ಣಾಮಲೈ
ಚೆನ್ನೈ, ಸೆಪ್ಟೆಂಬರ್ 07: ಡಿಎಂಕೆ ಪಕ್ಷವು ಡೆಂಗ್ಯೂ, ಮಲೇರಿಯಾ ಮತ್ತು ಸೊಳ್ಳೆ ಇದ್ದಂತೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಟೀಕಿಸಿದ್ದಾರೆ. ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ವಿರುದ್ಧ ಅವರು ಕಿಡಿಕಾರಿದ್ದಾರೆ.
ಕಳೆದ ವಾರ ಚೆನ್ನೈನಲ್ಲಿ ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾ ವೈರಸ್ ಇದ್ದ ಹಾಗೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.
ಈ ವಿಚಾರವಾಗಿ ವಿಡಿಯೊ ಮೂಲಕ ಪ್ರತಿಕ್ರಿಯಿಸಿರುವ ಅಣ್ಣಾಮಲೈ ಡಿಎಂಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ನಮಗೆ ಡಿಎಂಕೆ ನಾಟಕ ಗೊತ್ತು. ನಿಮ್ಮ ಅಧಿಕಾರದ ಮೊದಲ ವರ್ಷದಲ್ಲಿ ಸನಾತನ ಧರ್ಮವನ್ನು ವಿರೋಧಿಸುತ್ತೀರಿ. ಎರಡನೇ ವರ್ಷದಲ್ಲಿ ಸನಾತನ ಧರ್ಮವನ್ನು ತೊಡೆದುಹಾಕುತ್ತೀರಿ ಎಂದು ಹೇಳುತ್ತೀರಿ. ಮೂರನೇ ವರ್ಷದಲ್ಲಿ ನೀವು ಸನಾತನ ಧರ್ಮವನ್ನು ಬೇರುಸಹಿತ ಕಿತ್ತುಹಾಕಲು ಬಯಸುತ್ತೀರಿ. ಆದರೆ, ನಾಲ್ಕನೇ ವರ್ಷ ನಮ್ಮ ಪಕ್ಷದ ಸದಸ್ಯರಲ್ಲಿ ಶೇ 90 ಮಂದಿ ಹಿಂದೂಗಳಿದ್ದಾರೆ ಎಂಬುದಾಗಿ ಹೇಳುತ್ತೀರಿ' ಎಂದು ಅಣ್ಣಾಮಲೈ ಹೇಳಿದ್ದಾರೆ.
ಐದನೇ ವರ್ಷ ನೀವೂ ಹಿಂದೂ ಎಂದು ಹೇಳುತ್ತೀರಿ. ತಮಿಳುನಾಡು ಹಲವು ವರ್ಷಗಳಿಂದ ಈ ನಾಟಕವನ್ನು ನೋಡಿದೆ. ಚುನಾವಣೆ ಬಂದಾಗ ನೀವು ಅಮರ್, ಅಕ್ಬರ್, ಆಂಟನಿ ಆಗುತ್ತೀರಿ. ರಾಹುಲ್ ಗಾಂಧಿಯವರು ಕಳೆದ 17 ವರ್ಷಗಳಿಂದ ವಿಫಲರಾಗಿದ್ದಾರೆ. ಅವರು ಒಂದು ರಾಜ್ಯದಲ್ಲಿ ಅಮರ್ ಆಗುತ್ತಾರೆ. ಇನ್ನೊಂದು ರಾಜ್ಯದಲ್ಲಿ ಅಕ್ಬರ್ ಮತ್ತು ಇನ್ನೊಂದು ರಾಜ್ಯದಲ್ಲಿ ಆಂಟನಿ ಆಗುತ್ತಾರೆ ಎಂದು ತಿಳಿಸಿದ್ದಾರೆ.
2024ರಲ್ಲಿ ಡಿಎಂಕೆ ಸರ್ವನಾಶವಾಗಲಿದೆ. ನಾನು ಅದನ್ನು ಹೇಳುತ್ತಿಲ್ಲ. ಡಿಎಂಕೆಯ ಡಿ ಎಂದರೆ ಡೆಂಗ್ಯೂ, ಎಂ ಎಂದರೆ ಮಲೇರಿಯಾ ಮತ್ತು ಕೆ ಎಂದರೆ ಕೊಸು ( ಸೊಳ್ಳೆ ) ಎಂದು ನಿಮ್ಮ ಮಗ ( ಸ್ಟಾಲಿನ್ ಪುತ್ರ ಉದಯನಿಧಿ ) ಹೇಳಿದ್ದಾನೆ ಎಂದು ಅಣ್ಣಾಮಲೈ ಲೇವಡಿ ಮಾಡಿದ್ದಾರೆ.
'ನೀವಿಬ್ಬರೂ ( ಸ್ಟಾಲಿನ್ ಹಾಗೂ ಉದಯನಿಧಿ ) ಕೀಳು ಮಟ್ಟದ ಹೇಳಿಕೆ ನೀಡುವುದರಲ್ಲಿ ನಿರತವಾಗಿದ್ದೀರಿ. ಏಕೆಂದರೆ ನೀವು ಸೋತ ಯುದ್ಧದಲ್ಲಿ ಹೋರಾಡುತ್ತಿದ್ದೀರಿ ಎಂದು ನಿಮಗೆ ತಿಳಿದಿದೆ. ಆದರೆ ನೀವು ಪ್ರಧಾನಿ ಮೋದಿಯವರ ಬಗ್ಗೆ ಕೆಲವು ಸುಳ್ಳುಗಳನ್ನು ಮಾತನಾಡಿದ್ದೀರಿ. ಅದಕ್ಕೆ ಪ್ರತಿಕ್ರಿಯಿಸುವುದು ನನ್ನ ಕರ್ತವ್ಯ' ಎಂದು ಹೇಳಿದ್ದಾರೆ.
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಕ್ಕೆ ಹೋಲಿಸಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಹೋರಾಟ ನಡೆಸುವುದಾಗಿ ತಮಿಳುನಾಡು ಬಿಜೆಪಿ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ದೂರನ್ನೂ ಸಹ ನೀಡಿದೆ.
ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿರುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಪ್ರಧಾನಿಯಾದವರು ನಕಲಿ ಸುದ್ದಿಗಳನ್ನು ನಂಬಬಹುದೇ ಎಂದು ಪ್ರಶ್ನಿಸಿದ್ದಾರೆ. ತಮ್ಮ ಪುತ್ರ ಉದಯನಿಧಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎಂದು ಅವರು ಆರೋಪಿಸಿದ್ದಾರೆ.
ಕಳೆದ 9 ವರ್ಷಗಳಲ್ಲಿ ಯಾವುದೇ ಭರವಸೆಯನ್ನು ಈಡೇರಿಸಿದ ಮೋದಿ ಚುನಾವಣೆಗೋಸ್ಕರ ಸನಾತನ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications