IT Raid: ಐಟಿ ಅಧಿಕಾರಿಗಳ ಮೇಲೆ ದಾಳಿ ಮಾಡಿದ ಡಿಎಂಕೆ ಕಾರ್ಯಕರ್ತರು
ದಾಳಿ ನಡೆಸಲು ಹೋಗಿದ್ದ ಐಟಿ ಅಧಿಕಾರಿಗಳ ಜೊತೆ ಡಿಎಂಕೆ ಕಾರ್ಯಕರ್ತರು ಕಿರಿಕ್ ಮಾಡಿದ್ದಲ್ಲದೆ, ಹಲ್ಲೆ ಮಾಡಲು ಯತ್ನಿಸಿರುವ ಘಟನೆ ತಮಿಳುನಾಡಿನ ಕರೂರಿನಲ್ಲಿ ನಡೆದಿದೆ. 200ಕ್ಕೂ ಅಧಿಕ ಡಿಎಂಕೆ ಕಾರ್ಯಕರ್ತರು ಐಟಿ ಅಧಿಕಾರಿಗಳನ್ನು ತಳ್ಳಾಡಿದ್ದಲ್ಲ, ಕಾರನ್ನು ಜಖಂಗೊಳಿಸಿದ್ದಾರೆ.
ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವರಾದ ಸೆಂಥಿಲ್ ಬಾಲಾಜಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. ಚೆನ್ನೈ, ಕರೂರ್ ಮತ್ತು ಕೊಯಮತ್ತೂರು ಜಿಲ್ಲೆಗಳ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಶುಕ್ರವಾರ ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.

ನಕಲಿ ಮದ್ಯ ಸೇವನೆಯಿಂದ ಹಲವರು ಮೃತಪಟ್ಟ ಬಳಿಕ ಸಚಿವರ ವಿರುದ್ಧ ಭಾರಿ ಟೀಕೆಗಳು ಕೇಳಿಬಂದಿದ್ದವು. ಉದ್ಯೋಗ ಕೊಡಿಸಲು ಅವರು ಲಂಚ ಪಡೆದುಕೊಂಡಿದ್ದಾರೆ ಎನ್ನುವ ಹಗರಣದಲ್ಲಿ ಅವರ ವಿರುದ್ಧ ವಿಚಾರಣೆ ಮುಂದುವರೆಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸುಪ್ರೀಂ ಕೋರ್ಟ್ ಅನುಮತಿ ನೀಡಿದ ನಂತರ ಪ್ರತಿಪಕ್ಷಗಳು ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿವೆ.
ಸೆಂಥಿಲ್ ಬಾಲಾಜಿ ಅವರ ಮನೆ ಮತ್ತು ಕಚೇರಿ ಮಾತ್ರವಲ್ಲದೆ ಕರೂರಿನಲ್ಲಿರುವ ಅವರ ಸಹೋದರ ಅಶೋಕ್ ಅವರ ಆಸ್ತಿಗಳ ಮೇಲೂ ದಾಳಿ ನಡೆಸಲಾಗುತ್ತಿದೆ. ಶೋಧ ಕಾರ್ಯದ ಭಾಗವಾಗಿ ಕರೂರಿನ ರಾಮಕೃಷ್ಣಪುರಂನಲ್ಲಿರುವ ಅಶೋಕ್ ಅವರ ಮನೆಗೆ ಐಟಿ ಅಧಿಕಾರಿಗಳು ಆಗಮಿಸಿದ್ದರು. ಆದರೆ, ಮನೆಗೆ ಬೀಗ ಹಾಕಿದ್ದರಿಂದ ಅಧಿಕಾರಿಗಳು ಹೊರಗೆ ಕಾಯುತ್ತಿದ್ದರು.
Ruckus broke out in Karur today. During the #IT sleuths #raid at #electricity #minister #Senthil_Balaji's brother Ashok's property in #Karur, over 200 #DMK cadres who surrounded the place broke one of the IT officials' car windshield.@xpresstn @NewIndianXpress @mannar_mannan pic.twitter.com/kuOfTZPPiu
— Aravind Raj (@airwindraj) May 26, 2023
ಈ ಸಮಯದಲ್ಲಿ, ಕರೂರ್ ಕಾರ್ಪೋರೇಷನ್ ಮೇಯರ್ ಡಿಎಂಕೆಯ ಕವಿತಾ ಗಣೇಶನ್ ಸೇರಿದಂತೆ 200 ಕ್ಕೂ ಹೆಚ್ಚು ಡಿಎಂಕೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಐಟಿ ಅಧಿಕಾರಿಗಳನ್ನು ಪ್ರಶ್ನಿಸಲು ಪ್ರಾರಂಭಿಸಿದರು. ಐಟಿ ಅಧಿಕಾರಿಗಳಿಗೆ ಗುರುತಿನ ಚೀಟಿ ತೋರಿಸುವಂತೆ ಒತ್ತಡ ಹಾಕಿದ್ದಾರೆ, ಆದರೆ ಅಧಿಕಾರಿಗಳು ಐಡಿ ಕಾರ್ಡ್ ತೋರಿಸಲು ನಿರಾಕರಿಸಿದ ನಂತರ ಸ್ಥಳದಲ್ಲಿ ಗಲಾಟೆ ಶುರುವಾಗಿದೆ.
ಐಟಿ ಅಧಿಕಾರಿಗಳನ್ನು ಸುತ್ತುವರೆದ ಡಿಎಂಕೆ ಕಾರ್ಯಕರ್ತರು, ಅಧಿಕಾರಿಗಳ ಕಾರಿನ ವಿಂಡ್ಶೀಲ್ಡ್ ಮತ್ತು ಹಿಂಬದಿಯ ಕನ್ನಡಿಗಳಲ್ಲಿ ಒಂದನ್ನು ಒಡೆದಿದ್ದಾರೆ. ಇದರಿಂದಾಗಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.
ತಕ್ಷಣವೇ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಕರೂರಿನ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಏಪ್ರಿಲ್ 2, 2021 ರಂದು ನಡೆದ ದಾಳಿಯ ನಂತರ ಸೆಂಥಿಲ್ ಬಾಲಾಜಿ ಮತ್ತು ಅವರ ಸಹೋದರನ ಆಸ್ತಿಗಳ ಮೇಲೆ ಇದು ಎರಡನೇ ಐಟಿ ದಾಳಿಯಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications