Stand With Wayanad: ವಯನಾಡ್ ನಿರಾಶ್ರಿತರಿಗೆ ಸಹಾಯ ಮಾಡಲು ಬಯಸುವಿರಾ? ಹೀಗೆ ಮಾಡಿ...
ವಯನಾಡ್ ಆಗಸ್ಟ್ 1:- ಕೇರಳದ ವಯನಾಡ್ನಲ್ಲಿ ಭೀಕರ ಭೂಕುಸಿತ ಸಂಭವಿಸಿದ ಬೆನ್ನಲ್ಲೆ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ದುರಂತದಲ್ಲಿ ಮನೆಗಳು ಹಾಗೂ ಕುಟುಂಬಸ್ಥರನ್ನು ಕಳೆದುಕೊಂಡು ಅದೆಷ್ಟೋ ಜನ ಬೀದಿಪಾಲಾಗಿದ್ದಾರೆ. ಈ ನೊಂದ ಜೀವಗಳಿಗೆ ಸಹಾಯ ಮಾಡುವ ಇಚ್ಚೆ ನಿಮಗಿದ್ದರೆ ನಿಮ್ಮ ಕೈಲಾದಷ್ಟು ದೇಣಿಗೆ ನೀಡಬಹುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ.
ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಇದುವರೆಗೆ ಸುಮಾರು 280 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ಸಂತ್ರಸ್ತರಿಗೆ ಸಹಾಯ ಮಾಡಲು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವಯನಾಡ್ ಸಂತ್ರಸ್ತರಿಗೆ ಸಹಾಯ ಮಾಡಲು ಇಚ್ಚಿಸುವವರು ದೇಣಿಗೆ ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ.

ಇದಲ್ಲದೆ ತಮ್ಮ ಸಚಿವ ಸಂಪುಟವು ತಮ್ಮ ಒಂದು ತಿಂಗಳ ವೇತನವನ್ನು ಪರಿಹಾರ ನಿಧಿಗೆ ನೀಡುವುದಾಗಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಯನಾಡ್ನಲ್ಲಿ ಸಂಭವಿಸಿದ ಭಯಾನಕ ಭೂಕುಸಿತಕ್ಕೆ ನೂರಾರು ಮನೆಗಳು ಮಣ್ಣಲ್ಲಿ ಮಣ್ಣಾಗಿ ಹೋಗಿವೆ. ಅದೆಷ್ಟೋ ಜನ ಕೆಸರಿನಲ್ಲಿ ಮುಚ್ಚಿ ಹೋಗಿದ್ದಾರೆ. ನೂರಾರು ಜನರ ಪ್ರಾಣದೊಂದಿಗೆ ಸಾಕಷ್ಟು ಆಸ್ತಿಪಾಸ್ತಿ ಹಾನಿಗೊಳಗಾಗಿದೆ.
ಬದುಕುಳಿದವರನ್ನು ಸ್ಥಳಾಂತರಿಸಿ ಆಶ್ರಯ ನೀಡಲಾಗಿದೆ. ಅವರಿಗೆ ಸದ್ಯ ತುರ್ತು ಸಹಾಯದ ಅಗತ್ಯವಿದೆ. ಹೀಗಾಗಿ ಜನ ಮಾನವೀಯತೆ ದೃಷ್ಟಿಯಿಂದ ಸಹಾಯಕ್ಕೆ ಬರಬೇಕೆಂದು ಸಿಎಂ ಮನವಿ ಮಾಡಿದ್ದಾರೆ.
ನಿಧಿಗೆ ಪ್ರಮುಖ ಕೊಡುಗೆ ನೀಡಿದವರಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಲುಲು ಗ್ರೂಪ್ ಅಧ್ಯಕ್ಷ ಎಂಕೆ ಯೂಸುಫ್ ಅಲಿ, ದುಬೈ ಮೂಲದ ಉದ್ಯಮಿ ರವಿ ಪಿಳ್ಳೈ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತಮಿಳು ನಟ ವಿಕ್ರಮ್ ಮತ್ತು ದಲೈ ಲಾಮಾ ಟ್ರಸ್ಟ್ ಸೇರಿದ್ದಾರೆ.

ತಮ್ಮ ಮನವಿಯಲ್ಲಿ ಸಿಎಂ ಹೇಳಿದ್ದು ಹೀಗೆ.....
"ಜುಲೈ 30 ರಂದು ಮುಂಡಕ್ಕೈ, ವಯನಾಡ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ 100ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರಿಗೆ ಗಾಯಗಳಾಗಿವೆ. ಹಲವಾರು ಜನ ನಾಪತ್ತೆಯಾಗಿದ್ದಾರೆ. ಜನರ ವಾಸಸ್ಥಾನಗಳು ನಾಶವಾಗಿವೆ. ಭೂಕುಸಿತ ಮತ್ತು ಹಠಾತ್ ಪ್ರವಾಹಗಳಿಂದಾಗಿ ಜನ ಮನೆ ಹಾಗೂ ಕುಟುಂಬಸ್ಥರನ್ನು ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಈಗ ಕೇರಳ ಸರ್ಕಾರ ನಿರಾಶ್ರಿತರ ಸಹಾಯಕ್ಕೆ ನಿಲ್ಲಬೇಕಾಗಿದೆ. ಅವರ ಜೀವಹಾನಿ ಮತ್ತು ಜೀವನೋಪಾಯವನ್ನು ಸರಿದೂಗಿಸಲು, ಸ್ಥಳಾಂತರಗೊಂಡವರಿಗೆ ಪುನರ್ವಸತಿ ಕಲ್ಪಿಸಲು ಮತ್ತು ಅವರ ಮನೆಗಳನ್ನು ಪುನರ್ನಿರ್ಮಿಸುವ ಪ್ರಯತ್ನಗಳು ಅತ್ಯಗತ್ಯ. ಇದರಿಂದಾಗಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ (CMDRF) ಉದಾರವಾಗಿ ಕೊಡುಗೆ ನೀಡುವ ಮೂಲಕ ನೈಸರ್ಗಿಕ ವಿಕೋಪಗಳಿಂದ ಹಾನಿಗೊಳಗಾದವರ ಚೇತರಿಕೆಗೆ ನೀವು ಬೆಂಬಲ ನೀಡಬಹುದು'' ಎಂದು ಸಿಎಂ ಮನವಿ ಮಾಡಿದ್ದಾರೆ.
ಸಾರ್ವಜನಿಕರು ಹೇಗೆ ಸಹಾಯ ಮಾಡಬಹುದು?
ಈ ಹಂತಗಳನ್ನು ಅನುಸರಿಸುವ ಮೂಲಕ ನೆಟಿಜನ್ಗಳು ಆನ್ಲೈನ್ನಲ್ಲಿ ವಯನಾಡ್ ಸಂತ್ರಸ್ತರಿಗೆ ಸಹಾಯ ಮಾಡಬಹುದು:
*https://donation.cmdrf.kerala.gov.in/ ಗೆ ಭೇಟಿ ನೀಡಿ.
*ಎರಡು ಆಯ್ಕೆಗಳಲ್ಲಿ ಒಂದನ್ನು ಆರಿಸಿ: "ವೈಯಕ್ತಿಕವಾಗಿ ದಾನ ಮಾಡಿ" ಅಥವಾ "ಗುಂಪಾಗಿ ದಾನ ಮಾಡಿ."
*ನಿಮ್ಮ ಆದ್ಯತೆಯ ಪಾವತಿ ವಿಧಾನವನ್ನು ಆಯ್ಕೆಮಾಡಿ (internet banking, debit card, UPI, etc.)
*ದೇಣಿಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಫಾರ್ಮ್ ಅನ್ನು ಭರ್ತಿ ಮಾಡಿ.
*ಮೊಬೈಲ್ ಫೋನ್ಗಳಿಂದ ಹಣದ ಸಹಾಯವನ್ನು ಫೇನ್ಪೇ ಮಾಡುವ ಮೂಲಕವೂ ಮಾಡಬಹುದು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications