Modi Nomination: ಪ್ರಧಾನಿ ಮೋದಿ ಪಕ್ಕದಲ್ಲಿ ಕುಳಿತಿರುವ ಗಡ್ಡಧಾರಿ ಯಾರು?
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಮೋದಿ ಪಕ್ಕದಲ್ಲಿ ಒಬ್ಬ ಗಡ್ಡಧಾರಿ ಒಬ್ಬರು ಕಾಣಿಸಿಕೊಂಡರು. ಮೋದಿ ನಾಮಿನೇಶನ್ ಮಾಡುವ ವೇಳೆ ಅವರ ಪಕ್ಕದಲ್ಲಿ ಕುಳಿತವರು ಯಾರು ಎಂಬ ಪ್ರಶ್ನೆ ಹಲವರಲ್ಲಿ ಕಾಡುತ್ತಿದೆ. ಅದಕ್ಕೆ ಉತ್ತರ ಇಲ್ಲಿದೆ.
ಪ್ರಧಾನಿ ಮೋದಿ ಆಚರಣೆಯ ಮೇಲೆ ಅಪಾರ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಇದನ್ನು ಮುಚ್ಚಿಡುವುದೇನು ಉಳಿದಿಲ್ಲ. ಅವರು ಯಾವುದೇ ಕೆಲಸವನ್ನು ಮಾಡುವಾಗ ಒಳ್ಳೆಯ ಸಮಯವನ್ನು ನೋಡಿಕೊಂಡೆ ಕೆಲಸ ಮಾಡುತ್ತಾರೆ. ಹಾಗೆ ಪ್ರಧಾನಿ ಮೋದಿ ಮೂರನೇ ಬಾರಿ ವಾರಣಾಸಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸಹ ಒಳ್ಳೆಯ ಸಮಯವನ್ನು ಜ್ಯೋತಿಷಿಗಳಿಂದ ಕೇಳಿದ್ದರು. ಆ ಮುಹೂರ್ತದಲ್ಲೇ ಮೋದಿ ನಾಮಪತ್ರ ಸಲ್ಲಿಸಿದರು. ಇಷ್ಟೇಲ್ಲಾ ಓಕೆ ಅವರ ಪಕ್ಕದಲ್ಲಿ ಬಿಳಿ ಗಡ್ಡವನ್ನು ಬಿಟ್ಟು, ಮೈಯಲ್ಲಿ ಅಂಗವಸ್ತ್ರವನ್ನು ಅಷ್ಟೇ ಹಾಕಿಕೊಂಡು ಕುಳಿತ ವ್ಯಕ್ತಿಯಾರು ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ.

ಮೋದಿ ಪಕ್ಕದಲ್ಲಿ ಕುಳಿತವರು ಯಾರು?
ಪ್ರಧಾನಿ ನರೇಂದ್ರ ಮೋದಿ ಪಕ್ಕದಲ್ಲಿ ಕುಳಿತ ವ್ಯಕ್ತಿ ಖ್ಯಾತ ಜ್ಯೋತಿಷಿ ಮತ್ತು ಅಂಕಗಣಿತ ತಜ್ಞ ಗಣೇಶ್ವರ ಶಾಸ್ತ್ರಿ ದ್ರಾವಿಡ್. ಇವರ ಹೆಸರನ್ನು ನೀವು ಅಯೋಧ್ಯಯ ರಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲೂ ಕೇಳಿರುತ್ತೀರಾ. ಇವರೇ ರಾಮಲಾಲಾ ದೇವಸ್ಥಾನದ ಭೂಮಿ ಪೂಜೆ ಮತ್ತು ಶಿಲಾ ಪೂಜೆಯ ಜೊತೆಗೆ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದ್ದರು.
ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದರು. ಪ್ರಧಾನಿಯವರು ತಮ್ಮ ನಾಮನಿರ್ದೇಶನಕ್ಕೆ ಆಯ್ಕೆ ಮಾಡಿದ ನಾಲ್ವರಲ್ಲಿ ಒಬ್ಬರು ಖ್ಯಾತ ಜ್ಯೋತಿಷಿ ಮತ್ತು ಗಣೇಶ್ವರ ಶಾಸ್ತ್ರಿ ದ್ರಾವಿಡ್ ಕೂಡ ಒಬ್ಬರು. ಪ್ರಧಾನಿ ಮೋದಿಯವರ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಗಣೇಶ್ ಶಾಸ್ತ್ರಿ ದ್ರಾವಿಡ್ ಅವರು ಪ್ರಧಾನಿಯವರ ಪಕ್ಕದಲ್ಲಿಯೇ ಕಾಣಿಸಿಕೊಂಡರು.
ನಾಮಪತ್ರ ಸಲ್ಲಿಸುವ ಶುಭಃ ಮುಹೂರ್ತ ನಿರ್ಧರಿಸದ್ದು ಇವರೇ
ಪ್ರಧಾನಿ ಮೋದಿ ಇಂದು ನಾಮನಿರ್ದೇಶವನ್ನು ಮಾಡುವ ಸಮಯವನ್ನು ಸಹ ಗಣೇಶ್ವರ ಶಾಸ್ತ್ರಿ ನಿರ್ಧರಿಸಿದ್ದರು. ಇದರಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾರಣಾಸಿಯಿಂದ ಬೆಳಗ್ಗೆ 1.55ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ವಾರಣಾಸಿಯ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಜ್ಯೋತಿಷ್ಯ ಮತ್ತು ವೇದಗಳಲ್ಲಿ ಸಾಕಷ್ಟು ಪ್ರಸಿದ್ಧರಾಗಿದ್ದಾರೆ.
#WATCH | Prime Minister Narendra Modi files nomination from Varanasi Lok Sabha seat for #LokSabhaElections2024
— ANI (@ANI) May 14, 2024
Uttar Pradesh CM Yogi Adityanath is also present on the occasion. pic.twitter.com/woWNPgqdiG
ಗಣೇಶ್ವರ ಶಾಸ್ತ್ರಿ ದ್ರಾವಿಡ್ ಕಾಶಿ ವಾಸಿ. ಇವರಿಗೆ ಜಗತ್ಗುರು ರಮಾನಂದಾಚಾರ್ಯ ಪ್ರಶಸ್ತಿ ಸಂದಿದೆ. ದಕ್ಷಿಣ ಭಾರತ ಮೂಲದ ಗಣೇಶ್ವರ ಶಾಸ್ತ್ರಿ ದ್ರಾವಿಡ್ ಅವರು ರಾಮಘಾಟ್ ಪ್ರದೇಶದ ಗಂಗಾ ತೀರದಲ್ಲಿರುವ ಸಂಸ್ಕೃತ ಶಾಲೆಯಲ್ಲಿ ವಾಸಿಸುತ್ತಿದ್ದಾರೆ. ಈ ಶಾಲೆಯೂ ಅವರ ಮುತ್ತಜ್ಜನಿಂದ ನಿರ್ಮಿಸಲ್ಪಟ್ಟಿದೆ. ಅವರ ಸಹೋದರ ಪಂಡಿತ್ ವಿಶೇಶ್ವರ ಶಾಸ್ತ್ರಿ ಕೂಡ ಶಾಸ್ತ್ರಿಯವರೊಂದಿಗೆ ವಾಸಿಸುತ್ತಿದ್ದಾರೆ, ಅವರು ಸಹ ವಿದ್ವಾಂಸರು. ಗಣೇಶ್ವರ ಶಾಸ್ತ್ರಿ ಅವರು ಗ್ರಹ ಮತ್ತು ನಕ್ಷತ್ರಪುಂಜದೊಂದಿಗೆ ಜ್ಯೋತಿಷ್ಯದ ಬಗ್ಗೆ ಹೆಚ್ಚಿನ ಜ್ಞಾನವನ್ನು ಹೊಂದಿದ್ದಾರೆ.
ಗಣೇಶ್ವರ ಶಾಸ್ತ್ರಿ ಅವರ ಮುಕುಟಕ್ಕೆ ಪದ್ಮಭೂಷಣ ಪ್ರಶಸ್ತಿ ಸಹ ಸಂದಿದೆ. ಇವರು ಕಾಶಿಯಲ್ಲಿ ಬರೀ ಗಾಲಿನಲ್ಲಿ ನಡೆಯುತ್ತಾರೆ. ಮತ್ತು ಕಟ್ಟು ನಿಟ್ಟಿನ ನಿಯಮವನ್ನು ಪಾಲಿಸುತ್ತಾರೆ. ಇನ್ನು ಈ ತಂತ್ರಜ್ಞಾನ ಯುಗದಲ್ಲೂ ಇವರ ಬಳಿ ಮೊಬೈಲ್ ಇಲ್ಲ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications