T20 World Cup 2024: ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ?
T20 World Cup 2024: ನಿನ್ನೆ ನಡೆದ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಗೆದ್ದು ಬೀಗಿದೆ. ಇನ್ನು ಈ ಐತಿಹಾಸಿಕ ಟಿ20 ವಿಶ್ವಕಪ್ ಗೆಲುವು ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಇಂದು ಭಾರತೀಯ ಕ್ರಿಕೆಟ್ ತಂಡಕ್ಕೆ ಕರೆ ಮಾಡಿ ಆಟಗಾರರನ್ನು ಅಭಿನಂದಿಸಿದ್ದಾರೆ. ಅಲ್ಲದೇ, ಇದೇ ವೇಳೆ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಏನು ಹೇಳಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
ರೋಹಿತ್ ಶರ್ಮಾ ಅವರ ಅದ್ಭುತ ನಾಯಕತ್ವದ ಬಗ್ಗೆ ಮತ್ತು ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದರು.

ಇನ್ನು ಟಿ-20 ವಿಶ್ವಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ-20 ಪಂದ್ಯಗಳಿಗೆ ನಿವೃತ್ತಿ ಘೋಷಿಸಿದರು. ವಿಜಯೋತ್ಸವದ ಕೆಲವೇ ನಿಮಿಷಗಳಲ್ಲಿ ಕೊಹ್ಲಿ ನಿವೃತ್ತಿ ಘೋಷಿಸಿದರೆ, ಇನ್ನು ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದರು.
ಹಾರ್ದಿಕ್ ಪಾಂಡ್ಯ ಅವರ ಅಂತಿಮ ಓವರ್ನಲ್ಲಿ ಸೂರ್ಯಕುಮಾರ್ ಯಾದವ್ ಅವರು ಡೇವಿಡ್ ಮಿಲ್ಲರ್ ಅವರನ್ನು ಔಟ್ ಮಾಡಲು ಬೌಂಡರಿ ಲೈನ್ನಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದು, ಇದನ್ನು ಕೂಡ ಪ್ರಧಾನಿ ಮೋದಿ ಶ್ಲಾಘಿಸಿದರು. ಮತ್ತೊಂದೆಡೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಎರಡೂವರೆ ವರ್ಷಗಳ ಅವಧಿ ಮುಕ್ತಾಯವಾದ ಹಿನ್ನೆಲೆ ರಾಹುಲ್ ದ್ರಾವಿಡ್ ಅವರು ಭಾರತೀಯ ಕ್ರಿಕೆಟ್ಗೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಹೇಳಿ ಧನ್ಯವಾದ ಅರ್ಪಿಸಿದರು.
ವಿಡಿಯೋ ಸಂದೇಶವೊಂದರಲ್ಲಿ ಪ್ರಧಾನಿ ಮೋದಿ ಅವರು, ಭಾರತ ಕ್ರಿಕೆಟ್ ತಂಡವು ವಿಶ್ವಕಪ್ ಗೆದ್ದುಕೊಂಡಿದ್ದು, ಈ ಮೂಲಕ ಕೋಟ್ಯಂತರ ಭಾರತೀಯರ ಹೃದಯಗಳನ್ನು ಗೆದ್ದಿದೆ ಎಂದು ಹೇಳಿದ್ದರು. ಅಲ್ಲದೆ, ಒಂದೇ ಒಂದು ಪಂದ್ಯವನ್ನು ಸೋಲದಿರುವುದು ಸಣ್ಣ ಸಾಧನೆಯಲ್ಲ ಎಂದರು.
ನಮ್ಮ ಭಾರತ ತಂಡ 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಮನೆಗೆ ತಂದಿತು ಮತ್ತು 2011ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ. ಟಿ20 ಕಪ್ ಅನ್ನು ತಮ್ಮದೇ ಶೈಲಿಯಲ್ಲಿ ಮನೆಗೆ ತಂದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಂಡವನ್ನು ಜೂನ್ 29ರ ಮಧ್ಯರಾತ್ರಿಯೇ ಅಭಿನಂದಿಸಿದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications