ಸ್ವಾತಂತ್ರ್ಯ ದಿನ ಸಂಭ್ರಮದಲ್ಲಿ ಗಾಂಧೀಜಿ ಗೈರಾಗಿದ್ದರು, ಯಾಕೆ ಗೊತ್ತಾ?
Recommended Video

ಭಾರತದ ಸ್ವಾತಂತ್ರ್ಯ ಸಂಗ್ರಾಮ ಎಂದೊಡನೆ ನೆನಪಾಗುವ ಹೆಸರುಗಳಲ್ಲಿ ಮಹಾತ್ಮಾ ಗಾಂಧೀಜಿ ಅವರ ಹೆಸರು ಅಗ್ರ ಪಂಕ್ತಿಯಲ್ಲಿ ಕಾಣಿಸುತ್ತದೆ. 'ನನ್ನ ಬದುಕೇ ನನ್ನ ಸಂದೇಶ' ಎಂದು ತಮ್ಮ ಬದುಕನ್ನೇ ಪ್ರಯೋಗಕ್ಕೊಡ್ಡಿಕೊಂಡ ಮಹಾನ್ ನಾಯಕ ಮಹಾತ್ಮಾ ಗಾಂಧೀಜಿಯವರು ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿ ಭಾಗವಹಿಸಿಯೇ ಇರಲಿಲ್ಲವಂತೆ!
72ನೇ ಸ್ವಾತಂತ್ರ್ಯ ದಿನಾಚರಣೆ 2018
ಇತ್ತ ಇಡೀ ದೇಶವೂ ಸ್ವಾತಂತ್ರ್ಯ ಸಿಕ್ಕ ಸಂಭ್ರಮದಲ್ಲಿದ್ದರೆ ಮಹಾತ್ಮಾ ಗಾಂಧೀಜಿಯವರು ಕೋಲ್ಕತ್ತಾದಲ್ಲಿ ಉಪವಾಸ ಆಚರಿಸುತ್ತಿದ್ದರಂತೆ! ದೇಶ ವಿಭಜನೆಯ ಕಾವು ಹೆಚ್ಚಿದ್ದರಿಂದ ಪಶ್ಚಿಮ ಬಂಗಾಳ(ಈಗಿನ ಬಾಂಗ್ಲಾದೇಶವೂ ಸೇರಿ)ದಲ್ಲಿ ಮುಸ್ಲಿಂ ಮತ್ತು ಹಿಂದುಗಳ ನಡುವೆ ಕೋಮು ಗಲಭೆ ಎದ್ದಿತ್ತು. ಹಿಂಸೆಯನ್ನು ನಿಯಂತ್ರಿಸುವ, ಶಾಂತಿಯ ಸಂದೇಶ ನೀಡುವ ಸಲುವಾಗಿ ಗಾಂಧೀಜಿ ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರೇ ಬಹುಸಂಖ್ಯೆಯಲ್ಲಿದ್ದ ಹೈದೇರಿ ಮಂಜಿಲ್ ಎಂಬಲ್ಲಿ ಕೆಲ ದಿನ ತಂಗಿದ್ದರು.
ಈ ಸಂದರ್ಭದಲ್ಲಿ, ನೀವು ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿ ಭಾಗವಹಿಸುತ್ತಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದ ಜನರ ಬಳಿ ಗಾಂಧಿ ನೀಡುತ್ತಿದ್ದ ಉತ್ತರ ಒಂದೇ. 'ಇದು ಸಂಭ್ರಮ ಎಂದು ನನಗನ್ನಿಸುತ್ತಿಲ್ಲ. ಭವಿಷ್ಯದಲ್ಲಿ ದೇಶ ಎದುರಿಸಬಹುದಾದ ಸಂಘರ್ಷಗಳನ್ನು ನೆನೆದರೆ ಸಂಭ್ರಮಿಸುವ ಮನಸ್ಸಾಗುವುದಿಲ್ಲ. ಕೋಮು ಗಲಭೆಗೆ ಸಾಕ್ಷಿಯಾಗಿ ನಾನಿಲ್ಲಿದ್ದೇನೆ. ಈ ದಿನ ಪೂರ್ತಿ ನಾನು ಉಪವಾಸವಿದ್ದು, ಚರಕದಲ್ಲಿ ನೂಲು ನೇಯ್ದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತೇನೆ. ಈ ಮಹಾನ್ ಘಳಿಗೆಯನ್ನು ನಾನು ಸಂಭ್ರಮಿಸುವ ರೀತಿ ಇದು' ಎಂದು ಅವರು ಹೇಳಿದ್ದರು.

"ಇಂದಿನ ಸ್ವಾತಂತ್ರ್ಯದ ದಿನವೇ ಭವಿಷ್ಯದಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಸಂಘರ್ಷದ ಬೀಜವನ್ನೂ ಬಿತ್ತುತ್ತಿದೆ. ಹೀಗಿರುವಾಗ ಇದನ್ನು ಹಬ್ಬ ಎಂದು ಕರೆಯುವುದು ಹೇಗೆ? ಸಂಭ್ರಮಿಸುವುದು ಹೇಗೆ" ಎಂದು ತಮ್ಮ ಆಪ್ತರ ಬಳಿ ಗಾಂಧೀಜಿ ಅಳಲು ತೋಡಿಕೊಂಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications