ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಶಿಶುಗಳ ಸಾವು: ಆಸ್ಪತ್ರೆ ವೈದ್ಯರು ಬಿಚ್ಚಿಟ್ಟ ಸತ್ಯವೇನು?
ಮಹಾರಾಷ್ಟ್ರದ ನಾಂದೇಡ್ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ 30ಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿದ್ದಾರೆ. ದುರಂತ ಎಂದರೆ ಇದರಲ್ಲಿ 16 ಶಿಶುಗಳು ಕೂಡ ಸೇರಿವೆ. ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಕೇವಲ 24 ಹಾಸಿಗೆಗಳು ಇದ್ದು, ಆದರೆ ಇಲ್ಲಿ 65 ಶಿಶುಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1ರ ನಡುವೆ 16 ಶಿಶುಗಳು ಸಾವನ್ನಪ್ಪಿವೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.
ನಾಂದೇಡ್ನ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30 ರಿಂದ ಇದುವರೆಗೆ 16 ಶಿಶುಗಳು ಸೇರಿದಂತೆ 30 ಸಾವುಗಳು ಸಂಭವಿಸಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

12 ಶಿಶುಗಳು ಸಾವನ್ನಪ್ಪಿದಾಗ 24 ಹಾಸಿಗೆಗಳ ಸೌಲಭ್ಯವಿರುವ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ದಾಖಲಾತಿಗಳ ಸಂಖ್ಯೆ 65 ಎಂದು ಸೌಲಭ್ಯದ ಹಿರಿಯ ವೈದ್ಯರು ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ. ಪೀಡಿಯಾಟ್ರಿಕ್ಸ್ ತೀವ್ರ ನಿಗಾ ಘಟಕದಲ್ಲಿ (ಪಿಐಸಿಯು) ಮತ್ತೊಂದು ಶಿಶು ಸಾವನ್ನಪ್ಪಿದೆ.
ಔಷಧಿ ಕಾರಣವಲ್ಲ ಎಂದ ವೈದ್ಯ
ನಾಂದೇಡ್ ಸೌಲಭ್ಯದಲ್ಲಿರುವ ಮಕ್ಕಳ ವಿಭಾಗದ ಮುಖ್ಯಸ್ಥ ಡಾ ಕಿಶೋರ್ ರಾಥೋಡ್, ಶಿಶು ರೋಗಿಗಳ ಸಾವಿಗೆ ಔಷಧಿಯ ಕೊರತೆಯೇ ಕಾರಣ ಎನ್ನುವ ಆರೋಪವನ್ನು ನಿರಾಕರಿಸಿದ್ದಾರೆ.
ನವಜಾತ ಶಿಶುಗಳ ತೀವ್ರ ನಿಗಾ ಘಟಕ (NICU) ದಲ್ಲಿ ಸಂಭವಿಸಿದ ಹನ್ನೊಂದು ಸಾವುಗಳಲ್ಲಿ, ಎಂಟು (ಶಿಶುಗಳು) ಅತ್ಯಂತ ನಿರ್ಣಾಯಕ ಹಂತದಲ್ಲಿ ಇಲ್ಲಿಗೆ ಸ್ಥಳಾಂತರಿಸಲ್ಪಟ್ಟಿದ್ದವು. ಆ ಶಿಶುಗಳು 1 ಕೆ.ಜಿಗಿಂತ ಕಡಿಮೆ ತೂಕವನ್ನು ಹೊಂದಿದ್ದವು ಎಂದು ಅವರು ಹೇಳಿದರು.
ಇನ್ನೊಂದು ವಾರ್ಡ್, ಪೀಡಿಯಾಟ್ರಿಕ್ಸ್ ಇಂಟೆನ್ಸಿವ್ ಕೇರ್ ಯುನಿಟ್ (ಪಿಐಸಿಯು) ಈ ಸೌಲಭ್ಯವು 31 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದ್ದು ಆದರೆ 32 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ, ಹಾಸಿಗೆಗಳ ಸೌಲಭ್ಯ ಇಲ್ಲದೇ ಇದ್ದರೂ, ಯಾವುದೇ ರೋಗಿಗೆ ಪ್ರವೇಶವನ್ನು ನಿರಾಕರಿಸಲಾಗಿಲ್ಲ ಎಂದು ಡಾ ರಾಥೋಡ್ ಹೇಳಿದರು.
ದಾಖಲಾತಿಗಳ ಸಂಖ್ಯೆ ಹೆಚ್ಚು ಇದ್ದರೂ ಸಾಮಾನ್ಯ ವಾರ್ಡ್ಗೆ ಮಾತ್ರ ಕನಿಷ್ಠ 90 ಹಾಸಿಗೆಗಳ ಅಗತ್ಯವಿದೆ ಎಂದು ಹೇಳಿದರು.
ಶಂಕರರಾವ್ ಚವ್ಹಾಣ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ.ಎಸ್.ಆರ್.ವಕೋಡೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೃತ 12 ಶಿಶುಗಳಲ್ಲಿ ಆರು ಗಂಡು ಮತ್ತು ಆರು ಹೆಣ್ಣು ಶಿಶುಗಳು ಸೇರಿವೆ, ಸಾವನ್ನಪ್ಪಿದ ಶಿಶುಗಳಲ್ಲಿ ಹೆಚ್ಚಾಗಿ 0-3 ದಿನದ ವಯಸ್ಸಿನವು ಮತ್ತು ತುಂಬಾ ಕಡಿಮೆ ತೂಕ ಹೊಂದಿದ್ದವು ಎಂದು ಮಾಹಿತಿ ನೀಡಿದ್ದಾರೆ.
ಮಂಗಳವಾರ ವರದಿ ಸಲ್ಲಿಸಲು ಛತ್ರಪತಿ ಸಂಭಾಜಿನಗರ ಜಿಲ್ಲೆಯಿಂದ ಮೂವರು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications