ಜುಮ್ಮು ಕಾಶ್ಮೀರದಲ್ಲಿ ಮಹಿಳೆಯ ಹೆರಿಗೆ ಮಾಡಿಸಲು ವೈದ್ಯರಿಗೆ ಸಹಾಯ ಮಾಡಿದ್ದು ವಾಟ್ಸಾಪ್!
ಹಿಮಪಾತದಿಂದ ಗ್ರಾಮಕ್ಕೆ ಸಂಪರ್ಕ ಕಡಿತವಾಗಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ವಾಟ್ಸಾಪ್ ಕರೆ ಸಹಾಯ ಮಾಡಿದೆ.
ಶ್ರೀನಗರ, ಫೆಬ್ರವರಿ. 12: ಜಮ್ಮು ಕಾಶ್ಮೀರದಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ದೂರದ ಕುಗ್ರಾಮಗಳ ಸ್ಥಿತಿ ತೀರ ಕೆಟ್ಟದಾಗಿದೆ. ಇಂತಹ ಸ್ಥಿತಿಯಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸಹಾಯಕವಾಗಿ ನಿಂತಿದ್ದು ವಾಟ್ಸಾಪ್.
ಹೌದು, ಜಮ್ಮು ಮತ್ತು ಕಾಶ್ಮೀರದ ದೂರದ ಕೆರಾನ್ನಲ್ಲಿ ಹೆರಿಗೆ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಗೆ ವಾಟ್ಸಾಪ್ ಕರೆ ಮೂಲಕ ಕ ಆರೋಗ್ಯವಂತ ಮಗುವಿಗೆ ಜನ್ಮ ನೀಡುವಲ್ಲಿ ವೈದ್ಯರು ಸಹಾಯ ಮಾಡಿದ್ದಾರೆ. ಮೊದಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದ ಮಹಿಳೆಯ ಮೊಗದಲ್ಲಿ ಸಂತಸ ಮೂಡಿಸಿದ್ದಾರೆ.
"ಶುಕ್ರವಾರ ರಾತ್ರಿ, ಎಕ್ಲಾಂಪ್ಸಿಯಾ, ದೀರ್ಘಕಾಲದ ಹೆರಿಗೆ ಮತ್ತು ಎಪಿಸಿಯೊಟೊಮಿಯಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ನೋವು ಶುರುವಾಗಿದೆ. ಇಂತಹ ಸಂಕೀರ್ಣವಾದ ಹೆರಿಗೆಯ ಇತಿಹಾಸ ಹೊಂದಿರುವ ಮಹಿಳೆ ಕೆರಾನ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು" ಎಂದು ಕ್ರಾಲ್ಪೋರಾದ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಮೀರ್ ಮೊಹಮ್ಮದ್ ಶಾಫಿ ಹೇಳಿದರು.

ಚಳಿಗಾಲದಲ್ಲಿ ಕುಪ್ವಾರ ಜಿಲ್ಲೆಯ ಉಳಿದ ಭಾಗಗಳಿಗೂ ಕೆರಾನ್ ಗ್ರಾಮದಕ್ಕೂ ಸಂಪರ್ಕ ಕಡಿತಗೊಂಡಿದ್ದರಿಂದ ರೋಗಿಯನ್ನು ಹೆರಿಗೆ ಸೌಲಭ್ಯವಿರುವ ಆಸ್ಪತ್ರೆಗೆ ಕರೆದೊಯ್ಯಲು ತುಂಬಾ ಸಮಸ್ಯೆಯಾಗಿದೆ. ಗುರುವಾರ ಮತ್ತು ಶುಕ್ರವಾರ ಸುರಿದ ನಿರಂತರ ಹಿಮಪಾತದಿಂದ ವೈದ್ಯಕೀಯ ಅಧಿಕಾರಿಗಳು ಮಹಿಳೆಯನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಆಗಿಲ್ಲ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಹುಡುಕುವುದು ಆಸ್ಪತ್ರೆ ಸಿಬ್ಬಂದಿಗೆ ಆನಿವಾರ್ಯವಾಗಿತ್ತು.
ಇಂತಹ ಸ್ಥಿತಿಯಲ್ಲಿ ಕ್ರಾಲ್ಪೋರಾ ಉಪಜಿಲ್ಲಾ ಆಸ್ಪತ್ರೆಯ ಸ್ತ್ರೀರೋಗತಜ್ಞ ಡಾ.ಪರ್ವೈಜ್ ಅವರು ಕೆರಾನ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಅರ್ಷದ್ ಸೋಫಿ ಮತ್ತು ಅವರ ಅರೆವೈದ್ಯಕೀಯ ಸಿಬ್ಬಂದಿಗೆ ಮಗುವನ್ನು ಹೆರಿಗೆ ಮಾಡುವ ಕಾರ್ಯವಿಧಾನದ ಕುರಿತು ವಾಟ್ಸಾಪ್ ಕರೆ ಮೂಲಕ ಮಾರ್ಗದರ್ಶನ ನೀಡಿದ್ದಾರೆ.

"ರೋಗಿಯನ್ನು ಹೆರಿಗೆಗೆ ಕರೆದುಕೊಂಡು ಹೋಗಲಾಯಿ. ಆರು ಗಂಟೆಗಳ ನಂತರ ಆರೋಗ್ಯವಂತ ಹೆಣ್ಣು ಮಗು ಜನಿಸಿತು. ಪ್ರಸ್ತುತ ಮಗು ಮತ್ತು ತಾಯಿ ಇಬ್ಬರೂ ಆಸ್ಪತ್ರೆ ನಿಗಾ ಘಟಕದಲ್ಲಿದ್ದಾರೆ. ಇಬ್ಬರು ಆರೋಗ್ಯವಾಗಿದ್ದಾರೆ" ಎಂದು ಡಾ. ಮೀರ್ ಮೊಹಮ್ಮದ್ ಶಫಿ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications