Air Pollution: ಸದ್ದೇ ಇಲ್ಲದೆ ಜೀವ ತೆಗೆಯುತ್ತಿದೆ ಗಾಳಿ, ತಜ್ಞರ ಎಚ್ಚರಿಕೆ ಸಂದೇಶ!
ಭಾರತದಲ್ಲಿ ವಾಯು ಮಾಲಿನ್ಯ ಎಂಬುದು ದೊಡ್ಡ ಪಿಡುಗಾಗಿ ಪರಿಣಮಿಸಿದೆ, ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿ ಪರಿಸ್ಥಿತಿ ದೇವರಿಗೆ ಪ್ರೀತಿ ಎಂಬಂತಾಗಿದೆ. ವಾಯು ಮಾಲಿನ್ಯ ಪರಿಣಾಮ ಈಗ ದೆಹಲಿ ಜನ ಊರು ಬಿಡುವಂತೆ ಆಗಿದ್ದು, ಸಾವಿರಾರು ಜನ ಉಸಿರಾಡಲು ಪರದಾಡುತ್ತಾ ಆಸ್ಪತ್ರೆ ಸೇರಿದ್ದಾರೆ. ಇಂತಹ ಹೊತ್ತಲ್ಲೇ ದೂರದ ಲಂಡನ್ನಿಂದ ಭವಿಷ್ಯದ ಬಗ್ಗೆ ಭಯಾನಕ ಸುದ್ದಿಯು ಹೊರಬಿದ್ದಿದ್ದು, ಭಾರತೀಯರಿಗೆ ತಜ್ಞರು ನೀಡಿದ ಸಂದೇಶ ಏನು ಗೊತ್ತೆ?
ರಾಜಧಾನಿ ದೆಹಲಿಯ ಗಾಳಿ ಗುಣಮಟ್ಟ ಮನುಷ್ಯರು ಉಸಿರಾಡಲು ಆಗದ ಸ್ಥಿತಿ ತಲುಪಿದೆ. ಈಗ ಅಲ್ಲಿ 300ರ ಆಸುಪಾಸಿಗೆ ಗಾಳಿಯ ಗುಣಮಟ್ಟ ಕುಸಿತ ಕಂಡಿದ್ದು, ಹಲವು ಪ್ರದೇಶಗಳಲ್ಲಿ ನೇರ ಹೊರಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಇಂತಹ ಸಮಯದಲ್ಲಿ ಭಾರತವು ಕೋವಿಡ್ ಸಾಂಕ್ರಾಮಿಕದ ನಂತರ ಎದುರಿಸುತ್ತಿರುವ ಅತಿದೊಡ್ಡ ಬಿಕ್ಕಟ್ಟು ವಾಯುಮಾಲಿನ್ಯ ಆಗಿದೆ ಎಂದು ಬ್ರಿಟನ್ ಶ್ವಾಸಕೋಶ ಶಾಸ್ತ್ರಜ್ಞರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಭಾರತ ಸರ್ಕಾರ ಕೂಡ ಈ ಬಗ್ಗೆ ಕ್ರಮ ಕೈಗೊಂಡು ಮಾಲಿನ್ಯ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದೆ. ಆದರೆ ಈಗಾಗಲೇ ಪರಿಸ್ಥಿತಿ ಕೈಮೀರಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸವಾಲಾಗಿ ಪರಿಣಮಿಸಲಿದೆ ಎಂದಿದ್ದಾರೆ ತಜ್ಞರು.

ಉತ್ತರ ಭಾರತದಲ್ಲಿ ಭೀಕರ ಪರಿಸ್ಥಿತಿ
ಲಿವರ್ಪೂಲ್ ಶ್ವಾಸಕೋಶ ಸಲಹೆಗಾರ ಮತ್ತು ಭಾರತದ ಆರೋಗ್ಯ ಇಲಾಖೆ ಕೋವಿಡ್-19 ಸಲಹಾ ಸಮಿತಿ ಮಾಜಿ ಸದಸ್ಯರೂ ಆಗಿದ್ದ ಮನೀಶ್ ಗೌತಮ್ ಈ ಬಗ್ಗೆ ಮಾತನಾಡಿದ್ದು, ಭಾರತ ಸರ್ಕಾರ ವಾಯುಮಾಲಿನ್ಯ ನಿಯಂತ್ರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಎಲ್ಲಾ ರೀತಿ ಪ್ರಯತ್ನ ಮಾಡುತ್ತಾ ಇದ್ದರೂ ಅದು ತಡವಾಗಿದೆ. ಪ್ರಮುಖವಾಗಿ ಉತ್ತರ ಭಾರತದಲ್ಲಿ ವಾಸಿಸುತ್ತಿರುವ ಲಕ್ಷ ಲಕ್ಷ ಜನಕ್ಕೆ ಈಗಾಗಲೇ ಹಾನಿಯಾಗಿದೆ. ಕಳಪೆ ಗುಣಮಟ್ಟದ ಗಾಳಿ ಪರಿಣಾಮ ಅನಾರೋಗ್ಯ ಹೆಚ್ಚುತ್ತಾ ಇದ್ದು, ಭವಿಷ್ಯದಲ್ಲಿ ಇದು ದೊಡ್ಡ ಹೊರೆಯಾಗಿ ಪರಿಣಮಿಸಲಿದೆ ಎಂದಿದ್ದಾರೆ ಮನೀಶ್ ಗೌತಮ್.
ಬೊಜ್ಜು & ಹೃದಯ ಸಂಬಂಧಿ ಸಮಸ್ಯೆ
ಪಿಟಿಐ ಜೊತೆ ಈ ಬಗ್ಗೆ ಮಾತನಾಡಿರುವ ಶ್ವಾಸಕೋಶ ಶಾಸ್ತ್ರಜ್ಞರು ನಗರ ಪ್ರದೇಶಗಳಲ್ಲಿ ವಿಮಾನ, ವಾಹನಗಳು ಹೊರಸೂಸುವ ವಿಷಯುಕ್ತ ಗಾಳಿ ಪರಿಣಾಮ ಹಲವು ಸಮಸ್ಯೆ ಎದುರಾಗುತ್ತಿವೆ. ಈ ಪೈಕಿ ಭಾರತ ಹಾಗೂ ಬ್ರಿಟನ್ ಸೇರಿ ಹಲವು ದೇಶಗಳಲ್ಲಿ ಬೊಜ್ಜಿನ ಸಮಸ್ಯೆ ಮಾತ್ರವಲ್ಲ ಹೃದಯ ಸಂಬಂಧಿ ಕಾಯಿಲೆಗಳೂ ಕಳೆದ ಒಂದು ದಶಕದಲ್ಲಿ ಹೆಚ್ಚಾಗಿದೆ ಎಂದಿದ್ದಾರೆ. ಹೀಗಾಗಿ ತುಂಬಾ ಮುತುವರ್ಜಿ ವಹಿಸಿ ಪರಿಸ್ಥಿತಿ ನಿಭಾಯಿಸಲು ಸಲಹೆ ನೀಡಿದ್ದಾರೆ ತಜ್ಞರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications