ಭಾರತೀಯ ಕಮಾಂಡರ್ಸ್ ಗಳಿಗೆ ಸೇನೆಯ ಗೌಪ್ಯ ಸಂದೇಶ
ನವದೆಹಲಿ, ಸಪ್ಟೆಂಬರ್.09: ಭಾರತ-ಚೀನಾದ ನಿಗದಿತ ಗಡಿ ರೇಖೆಯಲ್ಲಿ ಯಾವುದೇ ಕಾರಣಕ್ಕೂ ಅತಿಕ್ರಮಣವಾಗದಂತೆ ಕಟ್ಟೆಚ್ಚರ ವಹಿಸಲು ಭಾರತೀಯ ಸೇನಾ ಫೀಲ್ಡ್ ಕಮಾಂಡರ್ಸ್ ಗಳಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಲಾಗಿದೆ.
"ಭಾರತೀಯ ಗಡಿ ಪ್ರದೇಶವನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಶಿಸ್ತುಕ್ರಮಗಳನ್ನು ಪಾಲನೆ ಮಾಡುವಂತೆ ಸೂಚಿಸಲಾಗಿದೆ. ನಿಗದಿತ ಪ್ರದೇಶದಲ್ಲಿ ಗಸ್ತು ತಿರುಗುವಾಗ ಅಥವಾ ಯಾವುದೇ ಕಾರ್ಯ ಸಾಧನೆ ಸಂದರ್ಭದಲ್ಲಿ ಯಾವುದೇ ರೀತಿ ಹೆಚ್ಚುವರಿ ಶಕ್ತಿ ಅಥವಾ ಅತಿಯಾದ ಬಲ ಪ್ರದರ್ಶಿಸಬಾರದು" ಎಂದು ಕ್ಷೇತ್ರ ಕಮಾಂಡರ್ಗಳಿಗೆ ಸೂಚಿಸಲಾಗಿದೆ.
ಚೀನಾದ ಗಡಿ ನಿಯಂತ್ರಣ ರೇಖೆಯ ಬಳಿ ಚೀನಾ ಯೋಧರು ಫೈರಿಂಗ್ ಪ್ರಯೋಗವನ್ನು ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಗಡಿಯಲ್ಲಿ ಚೀನಾ ನಡೆಸುತ್ತಿರುವ ಗುಂಡಿನ ದಾಳಿಯ ಪ್ರಯೋಗದ ಸದ್ದು ಭಾರತದ ಗಡಿ ಪ್ರದೇಶಗಳವರೆಗೂ ಕೇಳಿಸುತ್ತಿದೆ. ಲಡಾಖ್ ನಿಂದ ಅರುಣಾಚಲ ಪ್ರದೇಶದ ಗಡಿಯಲ್ಲಿ ಗುಂಡಿನ ಮೊರೆತ ಕೇಳಿ ಬರುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಲಡಾಖ್ ಪೂರ್ವ ಭಾಗದಲ್ಲಿರುವ ಪ್ಯಾಂಗಾಂಗ್ ತ್ಸೋ ಸರೋವರದ ಬಳಿ ಭಾರತ ಕೂಡಾ ಸೇನೆಯ ಪ್ರಮಾಣವನ್ನು ಹೆಚ್ಚಿಸಿತು. ಸಪ್ಟೆಂಬರ್.07ರಂದು ರಾಚಿನ್ ಲಾ- ರೆಂಜಂಗ್ಲಾ-ಮುಖ್ಪರಿ ಮತ್ತು ಮಗರ್ ಪರ್ವತ ಶ್ರೇಣಿಯ ಬಳಿ ಚೀನಾ ಯೋಧರು ಮಧ್ಯಕಾಲೀನ ಶೈಲಿಯ ಯುದ್ಧ ಶಸ್ತ್ರಾಸ್ತ್ರ ಮತ್ತು ದೊಣ್ಣೆಗಳನ್ನು ಹಿಡಿದು ನಿಂತಿದ್ದರು. ಇದರ ಜೊತೆಗೆ ಗಡಿ ಪ್ರದೇಶಗಳಲ್ಲಿ ಚೀನಾದ 50000 ಯೋಧರ ಜೊತೆಗೆ ಭಾರಿ ಪ್ರಮಾಣದ ಟ್ಯಾಂಕರ್ ಗಳು ನಿಂತಿರುವುದು ಕಂಡು ಬಂದಿತ್ತು.
More From
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications