'ಹಣಕಾಸು ಸಚಿವರೇ, ಪ್ರಶ್ನೆಗೆ ಹೆದರಬೇಡಿ, ಉತ್ತರ ಕೊಡಿ ಸಾಕು'
Recommended Video
ನವದೆಹಲಿ, ಫೆಬ್ರವರಿ 3: ಕೇಂದ್ರ ಬಜೆಟ್ ಭಾಷಣ ಅತ್ಯಂತ ಸುದೀರ್ಘವಾಗಿತ್ತು. ಆದರೆ ಅದು ಸಂಪೂರ್ಣ ಟೊಳ್ಳು ಮತ್ತು ದೇಶದ ನಿರುದ್ಯೋಗದ ಮಟ್ಟದ ಕುರಿತು ಗಮನ ಹರಿಸುವಲ್ಲಿ ವಿಫಲವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸುದೀರ್ಘ ಬಜೆಟ್ ಭಾಷಣವನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತ್ತೊಂದು ಟೀಕಾಸ್ತ್ರ ಬಿಟ್ಟಿದ್ದಾರೆ.
'ಹೆದರಬೇಡಿ, ನನ್ನ ಪ್ರಶ್ನೆಗೆ ಉತ್ತರ ಕೊಡಿ ಸಾಕು' ಎನ್ನುವ ಮೂಲಕ ನಿರ್ಮಲಾ ಸೀತಾರಾಮನ್ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ.
ದೇಶದ ಯುವಜನತೆಗೆ ಉದ್ಯೋಗ ಒದಗಿಸುವಲ್ಲಿ ಹೀನಾಯ ರೀತಿಯಲ್ಲಿ ವಿಫಲರಾಗಿದ್ದಾರೆ. ಅದರ ಬಗ್ಗೆ ಪ್ರಶ್ನೆ ಕೇಳುತ್ತಿದ್ದೇವೆ. ಅದಕ್ಕೆ ಪ್ರತಿಕ್ರಿಯೆ ನೀಡುವುದು ನಿಮ್ಮ ಜವಾಬ್ದಾರಿ ಎಂದು ರಾಹುಲ್ ಹೇಳಿದ್ದಾರೆ.

'ಹಣಕಾಸು ಸಚಿವರೇ, ನನ್ನ ಪ್ರಶ್ನೆಗಳಿಗೆ ಹೆದರಬೇಡಿ. ನಾನು ಅದನ್ನು ಯುವಜನರ ಪರವಾಗಿ ಕೇಳುತ್ತಿದ್ದೇನೆ. ಮತ್ತು ಅದಕ್ಕೆ ಪ್ರತಿಕ್ರಿಯಿಸುವುದು ನಿಮ್ಮ ಹೊಣೆಗಾರಿಕೆ. ದೇಶದ ಯುವಜನರಿಗೆ ಉದ್ಯೋಗದ ಅವಶ್ಯಕತೆ ಇದೆ. ನಿಮ್ಮ ಸರ್ಕಾರ ಉದ್ಯೋಗಗಳನ್ನು ಒದಗಿಸುವಲ್ಲಿ ತೀವ್ರವಾಗಿ ವಿಫಲವಾಗಿದೆ' ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಶನಿವಾರ ಬಜೆಟ್ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಮಾಡಿದ್ದ ಭಾಷಣವನ್ನು ರಾಹುಲ್ ಲೇವಡಿ ಮಾಡಿದ್ದರು.
'ಇದು ಇತಿಹಾಸದಲ್ಲಿ ಅತ್ಯಂತ ಉದ್ದನೆಯ ಬಜೆಟ್ ಆಗಿರಬಹುದು. ಆದರೆ ಅದರಲ್ಲಿ ಏನೂ ಇರಲಿಲ್ಲ. ಅದು ಟೊಳ್ಳಾಗಿತ್ತು. ಮುಂದೇನು ಮಾಡಬೇಕು ಎಂದು ಪ್ರಧಾನಿ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ಇಬ್ಬರಿಗೂ ಯಾವುದೇ ಸುಳಿವೇ ಇಲ್ಲ ಎನಿಸುತ್ತದೆ. ದೇಶ ಪ್ರಮುಖವಾಗಿ ಎದುರಿಸುತ್ತಿರುವ ಸಮಸ್ಯೆ ನಿರುದ್ಯೋಗ. ನಮ್ಮ ಯುವಜನರು ಉದ್ಯೋಗ ಪಡೆದುಕೊಳ್ಳಲು ನೆರವಾಗುವ ಯಾವುದೇ ಕಾರ್ಯತಂತ್ರದ ಯೋಜನೆ ಕಾಣಿಸಲಿಲ್ಲ' ಎಂದು ರಾಹುಲ್ ಟೀಕಿಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications