ಓಮಿಕ್ರಾನ್: ಲಾಕ್ಡೌನ್ ಜಾರಿ, ಯುಪಿ ಚುನಾವಣೆ ಮುಂದೂಡಿಕೆಯಾದಾಗ ಆಶ್ಚರ್ಯಬೇಡ: ಸುಬ್ರಮಣಿಯನ್
ನವದೆಹಲಿ, ಡಿಸೆಂಬರ್ 24: ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ವೈರಸ್ನ ಹೊಸ ರೂಪಾಂತರ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯು ದೇಶದಲ್ಲಿ ಏರಿಕೆ ಆಗುತ್ತಿದೆ. ಕಳೆದ ಒಂದು ದಿನದಲ್ಲಿ ದೇಶದಲ್ಲಿ ಓಮಿಕ್ರಾನ್ ದ್ವಿಗುಣ ವರದಿ ಆಗಿದೆ. ಈ ಎಲ್ಲಾ ಬೆಳವಣಿಗೆಯ ನಡುವೆ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಓಮಿಕ್ರಾನ್ ಹಿನ್ನೆಲೆಯಿಂದಾಗಿ ಲಾಕ್ಡೌನ್ ಆಗುವ ಹಾಗೂ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯು ಮುಂದೂಡಿಕೆ ಆಗುವ ಸುಳಿವನ್ನು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ, ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಎಂಬುವುದನ್ನು ಕೂಡಾ ಉಲ್ಲೇಖ ಮಾಡಿದ್ದಾರೆ. "ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಸಂದರ್ಭದಲ್ಲಿ ಓಮಿಕ್ರಾನ್ ಹಿನ್ನೆಲೆಯಿಂದಾಗಿ ಲಾಕ್ಡೌನ್ ಆದಾಗ ಹಾಗೂ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯು ಸೆಪ್ಟೆಂಬರ್ಗೆ ಮುಂದೂಡಿಕೆ ಆದಾಗ ಯಾವುದೇ ಆಶ್ವರ್ಯಕ್ಕೆ ಒಳಗಾಗಬೇಡಿ," ಎಂದು ಸುಬ್ರಮಣಿಯನ್ ಸ್ವಾಮಿ ಮಾರ್ಮಿಕವಾಗಿ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
"ಈ ವರ್ಷದ ಆರಂಭದಲ್ಲಿ ನೇರವಾಗಿ ಯಾವುದನ್ನು ಮಾಡಲು ಸಾಧ್ಯವಾಗಲಿಲ್ಲವೋ, ಅದನ್ನು ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡುವ ಸಾಧ್ಯತೆ ಇದೆ," ಎಂದು ಕೂಡಾ ಸುಬ್ರಮಣಿಯನ್ ಸ್ವಾಮಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಮೋದಿಗೆ 2024 ರ ಚುನಾವಣೆ ವೇಳೆ ಈಗಿನ ಓಮಿಕ್ರಾನ್ ಪ್ರಭಾವ ಬೀರುತ್ತಾ?
ಇನ್ನು ಸುಬ್ರಮಣಿಯನ್ ಸ್ವಾಮಿ ಟ್ವೀಟ್ಗೆ ಹಲವಾರು ಮಂದಿ ರಿಪ್ಲೈ ಮಾಡಿದ್ದಾರೆ. ಈ ಪೈಕಿ ಓರ್ವ ಟ್ವಿಟ್ಟಿಗರು, "ಸ್ವಾಮಿ ಸರ್, ಒಂದು ವೇಳೆ ಉತ್ತರ ಪ್ರದೇಶ ಚುನಾವಣೆ ಮುಂದೂಡಿಕೆಯಾದರೆ, ಓಮಿಕ್ರಾನ್ನಿಂದಾಗಿ ಲಾಕ್ಡೌನ್ ಮಾಡಿದರೆ, 2024 ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮೇಲೆ ಯಾವ ಪ್ರಭಾವ ಬೀರಬಹುದು," ಎಂದು ಪ್ರಶ್ನೆ ಮಾಡಿದ್ದಾರೆ. ಆ ಪ್ರಶ್ನೆಗೂ ಮಾರ್ಮಿಕವಾಗಿ ಉತ್ತರ ನೀಡಿರುವ ಸುಬ್ರಮಣಿಯನ್ ಸ್ವಾಮಿ, "ಆಗ 75 ನೇ ವರ್ಷದ ಡೆಡ್ಲೈನ್ ಅನ್ನು ತಲುಪಿರುತ್ತಾರೆ," ಎಂದು ಪ್ರಧಾನಿ ಮೋದಿಯನ್ನು ಉದ್ದೇಶಿಸಿ ಹೇಳಿದ್ದಾರೆ.
ಯುಪಿ ಚುನಾವಣೆ ಮುಂದೂಡಲು ಅಲಹಾಬಾದ್ ಹೈಕೋರ್ಟ್ ಒತ್ತಾಯ
ಮುಂದಿನ ವರ್ಷ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ, ಉತ್ತರಾಖಂಡದಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಈ ಹಿನ್ನೆಲೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿಯನ್ನು ನಡೆಸುತ್ತಿದೆ. ಈ ನಡುವೆ ದೇಶದಲ್ಲಿ ಕೊರೊನಾ ವೈರಸ್ನ ಹೊಸ ರೂಪಾಂತರ ಓಮಿಕ್ರಾನ್ ಭೀತಿಯನ್ನು ಸೃಷ್ಟಿ ಮಾಡಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳ ಅವಧಿಗೆ ಮುಂದೂಡಿಕೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಒತ್ತಾಯ ಮಾಡಿದೆ. ರಾಜ್ಯದಲ್ಲಿ ಚುನಾವಣಾ ಪ್ರಚಾರದ ಮೆರವಣಿಗೆಗಳನ್ನು ನಿಷೇಧಿಸುವಂತೆ ಕೋರ್ಟ್ ಸಲಹೆ ನೀಡಿದೆ.
ದೇಶದಲ್ಲಿ ಭಯ ಹುಟ್ಟಿಸುತ್ತಿರುವ ಕೊವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ನಡುವೆ ಚುನಾವಣಾ ಪ್ರಚಾರದ ಮೆರವಣಿಗೆಗಳನ್ನು ನಡೆಸದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೂ ಕೋರ್ಟ್ ಒತ್ತಾಯಿಸಿದೆ. ಈ ಬಗ್ಗೆ ಯಾವುದೇ ಪ್ರಕರಣದ ನಂಟು ಹೊಂದಿಲ್ಲದ ಜಾಮೀನು ಅರ್ಜಿಯ ವಿಚಾರಣೆ ವೇಳೆ ಅಲಹಾಬಾದ್ ಉಚ್ಚ ನ್ಯಾಯಾಲಯವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರವನ್ನು ನಿಲ್ಲಿಸದಿದ್ದರೆ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಎದುರಿಸಿದ ಪರಿಸ್ಥಿತಿಗಿಂತ ಇನ್ನೂ ಅಧಿಕ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಹೊಸ ರೂಪಾಂತರದ ಓಮಿಕ್ರಾನ್ನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಕೋವಿಡ್ನ ಮೂರನೇ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ನ್ಯಾಯಮೂರ್ತಿ ಶೇಖರ್ ಯಾದವ್ ಎಚ್ಚರಿಸಿದ್ದಾರೆ. (ಒನ್ಇಂಡಿಯಾ ಸುದ್ದಿ)
Don't be surprised by a Lockdown for Omicron and postponement of UP elections to September under President Rule in UP. What could not directly be done earlier this year can be then done indirectly early next year
— Subramanian Swamy (@Swamy39) December 23, 2021
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications