'ಕಂದು ಕತ್ತೆ'ಗೆ ಸಿಕ್ಕಿತು ಪರೀಕ್ಷಾ ಪ್ರವೇಶ ಪತ್ರ!
ಶ್ರೀನಗರ, ಏಪ್ರಿಲ್ 28: ಸೆಮೆಸ್ಟರ್ ಪೂರ್ತಿ ತರಗತಿಗೆ ಚಕ್ಕರ್ ಹೊಡೆದು ಕೊನೆಗೆ ಹಾಜರಾಗಿ ಕಡಿಮೆಯಾಗಿ ಹಾಲ್ ಟಿಕೆಟ್ಗಾಗಿ ಪ್ರಿನ್ಸಿಪಾಲರನ್ನು ಅಂಗಲಾಚುವ ವಿದ್ಯಾರ್ಥಿಗಳು ಈ ಸುದ್ದಿ ಕೇಳಿದರೆ ದಂಗಾಗುತ್ತಾರೆ. ಕೆಲಸಕ್ಕಾಗಿ ಪ್ರವೇಶ ಪರೀಕ್ಷೆಗಳನ್ನು ಬರೆಯಲು ಅವಕಾಶ ಸಿಗದೆ ಒದ್ದಾಡುವ ಉದ್ಯೋಗಾಕಾಂಕ್ಷಿಗಳು ಬೇಸರಪಟ್ಟುಕೊಳ್ಳಲೂಬಹುದು.
ಜಮ್ಮು ಮತ್ತು ಕಾಶ್ಮೀರದ ಸೇವಾ ಆಯ್ಕೆ ಮಂಡಳಿಯು ತಹಶೀಲ್ದಾರ್ ಹುದ್ದೆಯ ನೇಮಕಾತಿ ಪರೀಕ್ಷೆಗೆ ಕತ್ತೆಯೊಂದಕ್ಕೆ ಹಾಲ್ಟಿಕೆಟ್ ನೀಡಿದೆ.
ಅಂದಹಾಗೆ ಆ ಕತ್ತೆಯ ಹೆಸರು "ಕಚೂರ್ ಖಾರ್" (ಕಂದು ಕತ್ತೆ) ಎಂದು. ಈ ಕತ್ತೆ ಶ್ರೀನಗರದ ಖನ್ಯಾರ್ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಭಾನುವಾರ ಮಧ್ಯಾಹ್ನ ಒಂದು ಗಂಟೆಯಿಂದ ಪರೀಕ್ಷೆ ಬರೆಯಬೇಕಿದೆ!

ಕತ್ತೆಗೆ ನೀರುವ ಪ್ರವೇಶಪತ್ರದ ಚಿತ್ರ ಟ್ವಿಟರ್ ಮತ್ತು ಫೇಸ್ಬುಕ್ಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಕತ್ತೆಯ ಹೆಸರಿನ ಜತೆ ಅದರ ಫೋಟೊಗ್ರಾಫ್ ಕೂಡ ಬಳಸಲಾಗಿದೆ.
ಈ ಸಂಬಂಧ ಕೆಲವರು ಮಂಡಳಿಗೆ ಕರೆ ಮಾಡಿದರೂ ಅವರಿಂದ ಸೂಕ್ತ ಪ್ರತಿಕ್ರಿಯೆ ಬರಲಿಲ್ಲ.
ಇದು ಕಿಡಿಗೇಡಿಗಳು ತೀಟೆಗಾಗಿ ಮಾಡಿರುವ ಕೃತ್ಯ ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಈ ರೀತಿ ಹಾಲ್ ಟಿಕೆಟ್ ಸೃಷ್ಟಿಸಿ ಬೇಕೆಂದೇ ಸುದ್ದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
2015ರಲ್ಲಿ ವೃತ್ತಿಪರ ಪ್ರವೇಶ ಪರೀಕ್ಷಾ ಮಂಡಳಿಯು ಹಸುವೊಂದಕ್ಕೆ ಪರೀಕ್ಷೆ ಬರೆಯಲು ಪ್ರವೇಶಪತ್ರ ನೀಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆ ಕೂಡ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿತ್ತು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications