just in:ಸ್ವಾತಂತ್ರ್ಯ ಹೋರಾಟಗಾರರ ಕಥೆ ಎಲ್ಲರೂ ನೋಡಿ-ಪ್ರಹ್ಲಾದ್ ಜೋಶಿ
ನವದೆಹಲಿ, ಆಗಸ್ಟ್ 18: 'ಸ್ವರಾಜ್; ಭಾರತ್ ಕೆ ಸ್ವತಂತ್ರ ಸಂಗ್ರಾಮ್ ಕಿ ಸಮಗ್ರ ಗಾಥಾ' ಎಂಬ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ ಮತ್ತು ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸುವ 'ಸ್ವರಾಜ್: ಭಾರತ್ ಕೆ ಸ್ವತಂತ್ರ ಸಂಗ್ರಾಮ್ ಕಿ ಸಮಗ್ರ ಗಾಥಾ' ಟಿವಿ ಶೋನ ವಿಶೇಷ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಂತ್ರಿ ಮಂಡಳಿ ಮತ್ತು ಇತರ ಗಣ್ಯರೊಂದಿಗೆ ಭಾಗವಹಿಸಿದರು.
ದೆಹಲಿಯ ಸಂಸತ್ ಭವನದ ಗ್ರಂಥಾಲಯ ಕಟ್ಟಡದ ಬಾಲಯೋಗಿ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಈ ವಿಶಿಷ್ಟ ಸರಣಿ ಪ್ರದರ್ಶನವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವರಾಜ್ ಸಿನಿಮಾ ವೀಕ್ಷಣೆ ವೀಕ್ಷಿಸಿದ ಬಳಿಕ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಭಾವನಾತ್ಮಕ ಅನಿಸಿಕೆ ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರು, ಸಂಸದರು ಈ ಸಿನಿಮಾ ವೀಕ್ಷಿಸಿದರು. ಪ್ರಧಾನಿ ಮೋದಿ ಜೊತೆ ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ. ನಮ್ಮ ವೀರರು, ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ವಿಶೇಷ ಸರಣಿಯನ್ನು ತಾವೆಲ್ಲರೂ ನೋಡಲೇಬೇಕೆಂದು ಸಚಿವ ಜೋಶಿ ಟ್ವೀಟ್ ಮಾಡಿದ್ದಾರೆ.
"ಉಳ್ಳಾಲದ ರಾಣಿ ಅಬ್ಬಕ್ಕ ಮತ್ತು ಕೆಳದಿಯ ಶಿವಪ್ಪ ನಾಯ್ಕ, ಕೆಳದಿ ಚೆನ್ನಮ್ಮ ಅವರ ಆತ್ಮಸ್ಥೈರ್ಯದ ಸ್ಪೂರ್ತಿದಾಯಕ ಅಲೆ ಮತ್ತು ಅಂತಿಮ ತ್ಯಾಗದ ಅಲೆಯನ್ನು ಪ್ರದರ್ಶಿಸಲಾಯಿತು. ನಮ್ಮ ಜನ್ಮಭೂಮಿಗಾಗಿ ಅವರ ಬದ್ಧತೆ ಮತ್ತು ತ್ಯಾಗ ಅಪ್ರತಿಮವಾಗಿ ಉಳಿಯುತ್ತದೆ" ಎಂದಿದ್ದಾರೆ.
"75 ಸಂಚಿಕೆಯ ಈ ವಿಶೇಷ ಸರಣಿಯನ್ನು ತಾವೆಲ್ಲರೂ ಖಂಡಿತವಾಗಿಯೂ ನೋಡಲೇ ಬೇಕು. ಪ್ರತಿ ಸಂಚಿಕೆಯೂ ನಮ್ಮ ವೀರ ಹಾಗೂ ಸ್ಪೂರ್ತಿಯ ಚಿಲುಮೆಯಂತಿದ್ದ ಹಲವು ನಾಯಕರ ಇತಿಹಾಸವನ್ನು ತಿಳಿಸುತ್ತದೆ ಹಾಗೂ ದೇಶಭಕ್ತಿಯನ್ನು ಮತ್ತಷ್ಟು ಜಾಗೃತಗೊಳಿಸುತ್ತದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ ದೂರದರ್ಶನದಲ್ಲಿ ಈ ಸರಣಿ ಪ್ರಸಾರವಾಗಲಿದೆ" ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ಅನುರಾಗ್ ಠಾಕೂರ್ ಮತ್ತು ಪಿಯೂಷ್ ಗೋಯಲ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications