ಮಲಯಾಳಂ ನಟ ದಿಲೀಪ್ಗೆ ಪೆಟ್ಟುಗಳ ಮೇಲೆ ಪೆಟ್ಟು
ತಿರುವನಂತಪುರಂ, ಜುಲೈ 11 : ಮಲಯಾಳಂ ನಟಿಯ ಅಪರಹಣ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಮಲಯಾಳಂ ನಟ ದಿಲೀಪ್ ಅವರಿಗೆ ಒಂದರ ಹಿಂದೊಂದರಂತೆ ಸಂಕಷ್ಟಗಳು ಎದುರಾಗುತ್ತಿವೆ.
ಮಲಯಾಳಂ ಕಲಾವಿದರ ಸಂಘದಿಂದ ದಿಲೀಪ್ ಅವರನ್ನು ಉಚ್ಚಾಟಿಸಲಾಗಿದ್ದರೆ, ಅವರ ಮಾಜಿ ಹೆಂಡತಿ ಮಂಜು ವಾರಿಯರ್ ಅವರು, ತಮ್ಮಿಬ್ಬರಿಗೆ ಹುಟ್ಟಿದ ಮಗಳನ್ನು ತಮ್ಮ ಸುಪರ್ದಿಗೆ ಕೊಡಬೇಕೆಂದು ಕೋರ್ಟಿನ ಮೊರೆ ಹೋಗಿದ್ದಾರೆ.

ಮಲಯಾಳಂ ನಟಿಯ ಲೈಂಗಿಕ ದೌರ್ಜನ್ಯದ ಹಿಂದೆ ದಿಲೀಪ್ ಅವರ ಕೈವಾಡ ಇರುವ ಸುಳಿವು ಸಿಕ್ಕಾಗಲೇ, ಮಂಜು ವಾರಿಯರ್ ಅವರು ತಮ್ಮ ಮಾಜಿ ಗಂಡನ ವಿರುದ್ಧ ತಿರುಗಿಬಿದ್ದಿದ್ದರು. ನಟಿಯ ಅಪಹರಣದ ಹಿಂದೆ ಕಾಣದ ಕೈಗಳ ಸಂಚಿದ್ದು, ನಟಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಭಾಷಣ ಮಾಡಿದ್ದರು.
ಈಗ ದಿಲೀಪ್ ಅವರು ಬಂಧಿತರಾಗುತ್ತಿದ್ದಂತೆ, ಕೆಲ ತಿಂಗಳ ಹಿಂದೆ ಮಂಜು ವಾರಿಯರ್ ಅವರು ಮಾಡಿದ್ದ ಭಾಷಣದ ವಿಡಿಯೋ ತುಣುಕು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.
ಈ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ, ಜೈಲಿನಲ್ಲಿದ್ದಾಗ ದಿಲೀಪ್ ಮತ್ತಿತರ ಖ್ಯಾತನಾಮರ ಕೈವಾಡ ಈ ಪ್ರಕರಣದ ಹಿಂದಿದೆ ಎಂದು ಬಾಯಿಬಿಟ್ಟಿದ್ದ. ಅಲ್ಲದೆ, ಲೈಂಗಿಕ ದೌರ್ಜನ್ಯ ಎಸಗಿದಾಗ ಮಾಡಲಾಗಿದ್ದ ವಿಡಿಯೋ ಇದ್ದ ಪೆನ್ ಡ್ರೈವ್ ಅನ್ನು ದಿಲೀಪ್ ಅವರ ಹೆಂಡತಿಯ ಕೈಗೆ ಕೊಟ್ಟಿರುವುದಾಗಿಯೂ ಬಹಿರಂಗಪಡಿಸಿದ್ದ.
ಬಹುಭಾಷಾ ನಟಿ ಲೈಂಗಿಕ ಪ್ರಕರಣ: ನಟ ದಿಲೀಪ್ ಬಂಧನ
ಕನ್ನಡದ ಹಲವಾರು ಚಿತ್ರಗಳಲ್ಲಿ ನಟಿಸಿರುವ ಆ ಖ್ಯಾತ ಮಲಯಾಳಂ ನಟಿಯನ್ನು ಅಪಹರಿಸಿದ್ದ ಪಲ್ಸರ್ ಸುನಿ ಮತ್ತಿತರರು, ಚಲಿಸುತ್ತಿದ್ದ ವಾಹನದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಘಟನೆಯನ್ನೆಲ್ಲ ಪಲ್ಸರ್ ಸುನಿ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದ. ನಂತರ ಮೊಬೈಲನ್ನು ಎಲ್ಲೋ ಬಿಸಾಕಿದ್ದಾಗಿ ಸುಳ್ಳು ಹೇಳಿದ್ದ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications