ಮಲಯಾಳಂ ನಟ ದಿಲೀಪ್ಗೆ ಪೆಟ್ಟುಗಳ ಮೇಲೆ ಪೆಟ್ಟು
ತಿರುವನಂತಪುರಂ, ಜುಲೈ 11 : ಮಲಯಾಳಂ ನಟಿಯ ಅಪರಹಣ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಮಲಯಾಳಂ ನಟ ದಿಲೀಪ್ ಅವರಿಗೆ ಒಂದರ ಹಿಂದೊಂದರಂತೆ ಸಂಕಷ್ಟಗಳು ಎದುರಾಗುತ್ತಿವೆ.
ಮಲಯಾಳಂ ಕಲಾವಿದರ ಸಂಘದಿಂದ ದಿಲೀಪ್ ಅವರನ್ನು ಉಚ್ಚಾಟಿಸಲಾಗಿದ್ದರೆ, ಅವರ ಮಾಜಿ ಹೆಂಡತಿ ಮಂಜು ವಾರಿಯರ್ ಅವರು, ತಮ್ಮಿಬ್ಬರಿಗೆ ಹುಟ್ಟಿದ ಮಗಳನ್ನು ತಮ್ಮ ಸುಪರ್ದಿಗೆ ಕೊಡಬೇಕೆಂದು ಕೋರ್ಟಿನ ಮೊರೆ ಹೋಗಿದ್ದಾರೆ.

ಮಲಯಾಳಂ ನಟಿಯ ಲೈಂಗಿಕ ದೌರ್ಜನ್ಯದ ಹಿಂದೆ ದಿಲೀಪ್ ಅವರ ಕೈವಾಡ ಇರುವ ಸುಳಿವು ಸಿಕ್ಕಾಗಲೇ, ಮಂಜು ವಾರಿಯರ್ ಅವರು ತಮ್ಮ ಮಾಜಿ ಗಂಡನ ವಿರುದ್ಧ ತಿರುಗಿಬಿದ್ದಿದ್ದರು. ನಟಿಯ ಅಪಹರಣದ ಹಿಂದೆ ಕಾಣದ ಕೈಗಳ ಸಂಚಿದ್ದು, ನಟಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಭಾಷಣ ಮಾಡಿದ್ದರು.
ಈಗ ದಿಲೀಪ್ ಅವರು ಬಂಧಿತರಾಗುತ್ತಿದ್ದಂತೆ, ಕೆಲ ತಿಂಗಳ ಹಿಂದೆ ಮಂಜು ವಾರಿಯರ್ ಅವರು ಮಾಡಿದ್ದ ಭಾಷಣದ ವಿಡಿಯೋ ತುಣುಕು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.
ಈ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ, ಜೈಲಿನಲ್ಲಿದ್ದಾಗ ದಿಲೀಪ್ ಮತ್ತಿತರ ಖ್ಯಾತನಾಮರ ಕೈವಾಡ ಈ ಪ್ರಕರಣದ ಹಿಂದಿದೆ ಎಂದು ಬಾಯಿಬಿಟ್ಟಿದ್ದ. ಅಲ್ಲದೆ, ಲೈಂಗಿಕ ದೌರ್ಜನ್ಯ ಎಸಗಿದಾಗ ಮಾಡಲಾಗಿದ್ದ ವಿಡಿಯೋ ಇದ್ದ ಪೆನ್ ಡ್ರೈವ್ ಅನ್ನು ದಿಲೀಪ್ ಅವರ ಹೆಂಡತಿಯ ಕೈಗೆ ಕೊಟ್ಟಿರುವುದಾಗಿಯೂ ಬಹಿರಂಗಪಡಿಸಿದ್ದ.
ಬಹುಭಾಷಾ ನಟಿ ಲೈಂಗಿಕ ಪ್ರಕರಣ: ನಟ ದಿಲೀಪ್ ಬಂಧನ
ಕನ್ನಡದ ಹಲವಾರು ಚಿತ್ರಗಳಲ್ಲಿ ನಟಿಸಿರುವ ಆ ಖ್ಯಾತ ಮಲಯಾಳಂ ನಟಿಯನ್ನು ಅಪಹರಿಸಿದ್ದ ಪಲ್ಸರ್ ಸುನಿ ಮತ್ತಿತರರು, ಚಲಿಸುತ್ತಿದ್ದ ವಾಹನದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಘಟನೆಯನ್ನೆಲ್ಲ ಪಲ್ಸರ್ ಸುನಿ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದ. ನಂತರ ಮೊಬೈಲನ್ನು ಎಲ್ಲೋ ಬಿಸಾಕಿದ್ದಾಗಿ ಸುಳ್ಳು ಹೇಳಿದ್ದ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications