ಚೀನಾದಲ್ಲಿ ಅಜಿತ್ ದೋವಲ್, ಧೋಕ್ಲಾಂ ಸಮಸ್ಯೆಯತ್ತ ಎಲ್ಲರ ಚಿತ್ತ
ಬೀಜಿಂಗ್, ಜುಲೈ 27: ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಚೀನಾದಲ್ಲಿದ್ದಾರೆ. ಬ್ರಿಕ್ಸ್ ದೇಶಗಳ ಎನ್ಎಸ್ಎ ಮಟ್ಟದ ಮಾತುಕತೆಗಾಗಿ ಚೀನಾಕ್ಕೆ ದೋವಲ್ ತೆರಳಿದ್ದು ಭೇಟಿ ವೇಳೆ ಚೀನಾದ ಭದ್ರತಾ ಸಲಹೆಗಾರರ ಜತೆ ಸಿಕ್ಕಿಂ ಗಡಿ ವಿವಾದದ ಬಗ್ಗೆ ಚರ್ಚಿಸಲಿದ್ದಾರೆ.
ಧೋಕ್ಲಾಂ ಸಮಸ್ಯೆಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ದೋವಲ್ ಪ್ರಸ್ತಾಪಿಸುವ ಸಾಧ್ಯತೆ ಇದೆ. "ಮೊದಲಿಗೆ ದೋವಲ್ ಎರಡೂ ದೇಶಗಳ ಮಧ್ಯೆ ಮಾತುಕತೆಗೆ ಹಾದಿ ಸುಗಮಗೊಳಿಸಲಿದ್ದಾರೆ. ನಂತರ ಪ್ರಧಾನ ಮಂತ್ರಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಇಚ್ಛಿಸಿದ್ದಾರೆ ಎಂಬುದನ್ನು ದೋವಲ್ ಚೀನಾದ ಗಮನಕ್ಕೆ ತರಲಿದ್ದಾರೆ," ಎಂದು ಮಾಜಿ ರಾ ಅಧಿಕಾರಿ ಅಮರ್ ಭೂಷಣ್ 'ಒನ್ಇಂಡಿಯಾ'ಕ್ಕೆ ತಿಳಿಸಿದ್ದಾರೆ.

ಇದಾದ ನಂತರ ರಾಜಕೀಯ ಮತ್ತು ಹಣಕಾಸು ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಭವಿಷ್ಯದ ಸಂಬಂಧಗಳ ಬಗ್ಗೆ ಚರ್ಚಿಸಲಿದ್ದಾರೆ. ದೋಕ್ಲಾಂನಂಥ ಸಣ್ಣ ವಿಷಯಕ್ಕೆ ಎರಡೂ ದೇಶಗಳು ಕಿತ್ತಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂಬುದನ್ನು ಭಾರತ ಮತ್ತು ಚೀನಾ ಎರಡೂ ದೇಶಗಳು ಅರಿತುಕೊಂಡಿವೆ.
ಈಗಾಗಲೇ ಒಪ್ಪಂದಕ್ಕೂ ಮೊದಲು ಭಾರತ ದೋಕ್ಲಾಂ ನಿಂದ ಸೇನಾಪಡೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಚೀನಾ ಷರತ್ತು ಮುಂದಿಟ್ಟಿದೆ. ಆದರೆ ಇದಕ್ಕೆ ದೋವಲ್ ಒಪ್ಪಿಕೊಳ್ಳುವ ಸಾಧ್ಯತೆಗಳು ಕಡಿಮೆ ಇದೆ. ಚೀನಾದ ಸೈನಿಕರ ಜಾಗದಲ್ಲಿ ಭೂತಾನ್ ಸೈನಿಕರನ್ನು ನೇಮಿಸಿದರೆ ಮಾತ್ರ ಭಾರತ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳಲು ಒಪ್ಪಿಕೊಳ್ಳುವ ಸಾಧ್ಯತೆ ಇದೆ.
ಇನ್ನು ಚಳಿಗಾಲ ಬರುತ್ತಿದ್ದಂತೆ ಸಮಸ್ಯೆ ತನ್ನಿಂದ ತಾನಾಗೇ ಪರಿಹಾರವಾಗಲಿದೆ ಎನ್ನುತ್ತಾರೆ ಅಮರ್ ಭೂಷಣ್. ಚೀನಾದ ಸೈನಿಕರಿಗೆ ಈ ಪ್ರದೇಶದಲ್ಲಿ ಚಳಿಗಾಲದಲ್ಲಿ ಇರಲು ಸಾಧ್ಯವಿಲ್ಲ ಎಂಬುದು ಇದಕ್ಕೆ ಅವರು ನೀಡುವ ಕಾರಣ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications