ಉತ್ತರ ಪ್ರದೇಶ: ಡಾ. ಕಫೀಲ್ ಖಾನ್ ಸಹೋದರನ ಮೇಲೆ ಗುಂಡಿನ ದಾಳಿ
ಗೋರಖ್ಪುರ, ಜೂನ್ 11: ಉತ್ತರ ಪ್ರದೇಶದ ಗೋರಖ್ಪುರದ ಆಸ್ಪತ್ರೆಯಲ್ಲಿ ನಡೆದ ಶಿಶುಗಳ ಸರಣಿ ಸಾವಿನ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಆರೋಪಿ ಡಾ. ಕಫೀಲ್ ಖಾನ್ ಅವರ ಸಹೋದರ ಮೇಲೆ ಗುಂಡಿನ ದಾಳಿ ನಡೆದಿದೆ.
ಉದ್ಯಮಿ ಆಗಿರುವ ಖಾಶಿಫ್ ಜಮೀಲ್ ಮೇಲೆ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಬೈಕ್ನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ.
ಜಮೀಲ್ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ.
ಜಮೀಲ್ ಅವರ ಕತ್ತಿನ ಭಾಗಕ್ಕೆ ಗುಂಡು ಹೊಕ್ಕಿದ್ದು, ಅದನ್ನು ಹೊರತೆಗೆಯಲು ತುರ್ತು ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಲಾಗಿತ್ತು. ಎಂದು ಡಾ. ಕಫೀಲ್ ಖಾನ್ ತಿಳಿಸಿದರು.

ಗುಂಡನ್ನು ಹೊರ ತೆಗೆಯಲಾಗಿದ್ದು, ಜಮೀಲ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರನ್ನು 48 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಜಮೀಲ್ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯಾವುದೇ ನಿರ್ದಿಷ್ಟ ಕಾರಣಗಳು ತಿಳಿಯುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆ ಬಳಿಕ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರು ಯೋಗಿ ಆದಿತ್ಯನಾಥ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಯೋಗಿ ಆದಿತ್ಯನಾಥ ಅವರ ಬಳಿ ಆಮ್ಲಜನಕಕ್ಕೆ ಹಣವಿಲ್ಲದೆ ಹೋದಾಗ ಡಾ. ಕಫೀಲ್ ಅವರು ಮಕ್ಕಳನ್ನು ಉಳಿಸಿದರು. ಅದರ ಪರಿಣಾಮ ಅವರನ್ನು ಜೈಲಿನ ಕಂಬಿ ಹಿಂದೆ ಇರಿಸಲಾಯಿತು. ಈಗ ಅವರ ಸಹೋದರನ ಮೇಲೆ ಗುಂಡು ಹಾರಿಸಲಾಗಿದೆ.
ದ್ವೇಷ ಭಾಷಣಗಳು, ಹಿಂಸಾಚಾರ, ರಕ್ತಪಾತ ಮತ್ತು ಗುಂಡಿನ ದಾಳಿಯ ಕೊಡುಗೆಗಳನ್ನು ನಿಮ್ಮ ಅಚ್ಛೇ ದಿನ್ ನೀಡುತ್ತಿರುವುದಕ್ಕೆ ಮೋದಿಜಿ ಅವರಿಗೆ ಧನ್ಯವಾದಗಳು ಎಂದು ಮೇವಾನಿ ಟ್ವೀಟ್ ಮಾಡಿದ್ದಾರೆ.
2017ರ ಆಗಸ್ಟ್ ತಿಂಗಳಿನಲ್ಲಿ ಗೋರಖ್ಪುರದ ಬಿಆರ್ಡಿ ಆಸ್ಪತ್ರೆಯಲ್ಲಿ ಒಂದು ವಾರದ ಅವಧಿಯಲ್ಲಿಯೇ 60ಕ್ಕೂ ಅಧಿಕ ಹಸುಳೆಗಳು ಮೃತಪಟ್ಟಿದ್ದವು. ಆಮ್ಲಜನಕದ ಪೂರೈಕೆಯ ಕೊರತೆಯಿಂದ ಈ ಮಕ್ಕಳು ಮೃತಪಟ್ಟಿರುವುದಾಗಿ ಆರೋಪಿಸಲಾಗಿತ್ತು.
This is the price you pay for being the brother of Dr. Kafeel who exposed Yogi gov. Your brother will be shot at, your mother Gauri Lankesh will be killed, your Professors Dabholkars, Kalburgis, Pansares will be killed. U bloody activist shut your mouth pic.twitter.com/rcCwRMJ86H
— Jignesh Mevani (@jigneshmevani80) 10 June 2018
ಆದರೆ, ಶಿಶುಗಳ ಸಾವಿಗೆ ಆಮ್ಲಜನಕದ ಕೊರತೆಯ ವರದಿಗಳನ್ನು ಉತ್ತರ ಪ್ರದೇಶ ಸರ್ಕಾರ ತಳ್ಳಿಹಾಕಿತ್ತು. ಮಕ್ಕಳ ವಿಭಾಗದ ಉಸ್ತುವಾರಿಯಾಗಿದ್ದ ಡಾ. ಖಾನ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಖಾನ್ ಅವರು ಎಂಟು ತಿಂಗಳ ಕಾಲ ಜೈಲಿನಲ್ಲಿದ್ದರು. ಖಾನ್ ಅವರ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications