ಆರೆಸ್ಸೆಸ್ ಗೆ ಪ್ರಣಬ್ ಕನ್ನಡಿ ಹಿಡಿದಿದ್ದಾರೆ: ಕಾಂಗ್ರೆಸ್ ವಿಶ್ಲೇಷಣೆ
ನವದೆಹಲಿ, ಜೂನ್ 7: "ಆರ್.ಎಸ್.ಎಸ್ ಕೇಂದ್ರ ಕಚೇರಿಗೆ ಇಂದು ಮಾಜಿ ರಾಷ್ಟ್ರಪತಿ ಡಾ. ಪ್ರಣಬ್ ಮುಖರ್ಜಿ ನೀಡಿದ ಭೇಟಿ ವ್ಯಾಪಕವಾದ ಚರ್ಚೆಯನ್ನು ಹುಟ್ಟುಹಾಕಿದೆ. ಇವತ್ತು ಪ್ರಣಬ್ ಮುಖರ್ಜಿ ತಮ್ಮ ಕೇಂದ್ರ ಕಚೇರಿಯಲ್ಲೇ ಆರ್.ಎಸ್.ಎಸ್ ಗೆ ಕನ್ನಡಿಯನ್ನು ತೋರಿಸಿದ್ದಾರೆ. ಅವರು ಬಹುತ್ವ, ಸಹಿಷ್ಣುತೆ ಮತ್ತು ಬಹುಸಂಸ್ಕೃತಿಯ ಬಗ್ಗೆ ಮಾತನಾಡಿದ್ದಾರೆ," ಎಂದು ಕಾಂಗ್ರೆಸ್ ವಿಶ್ಲೇಷಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ, "ಅತಿಥಿಯಾಗಿ ಪ್ರಣಬ್ ಮುಖರ್ಜಿ ಹೇಳಿದ ವಿಚಾರಗಳು ಚರ್ಚೆಯಾಗಬೇಕು ಮತ್ತು ಪ್ರಾಮುಖ್ಯತೆಯನ್ನು ಪಡೆಯಬೇಕು. ಅದಕ್ಕೆ ಬದಲಾಗಿ ಔಪಚಾರಿಕವಾಗಿ ನಡೆದ ಕ್ರಮಗಳು ಚರ್ಚೆಯಾಗಬಾರದು," ಎಂದು ಅವರು ಹೇಳಿದ್ದಾರೆ. ಕೆಬಿ ಹೆಡಗೇವಾರ್ 'ತಾಯಿ ಭಾರತಾಂಬೆಯ ಮಹಾನ್ ಮಗ' ಎಂದು ಅತಿಥಿಗಳ ಪುಸ್ತಕದಲ್ಲಿ ಮುಖರ್ಜಿ ಬರೆದಿದ್ದರ ಬಗ್ಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

"ಪ್ರಣಬ್ ಮುಖರ್ಜಿ ಅವರು ಭಾರತದ ಇತಿಹಾಸವನ್ನು ಆರ್.ಎಸ್.ಎಸ್ ಗೆ ನೆನಪಿಸಿದ್ದಾರೆ. ಅವರು ಭಾರತದ ಸೌಂದರ್ಯವು ಭಿನ್ನಾಭಿಪ್ರಾಯಗಳು, ಧರ್ಮಗಳು ಮತ್ತು ಭಾಷೆಗಳ ಬಗ್ಗೆ ಸಹಿಷ್ಣುತೆ ಹೊಂದುವುದರಲ್ಲಿದೆ ಎಂಬುದನ್ನು ಆರ್.ಎಸ್.ಎಸ್ ಗೆ ಕಲಿಸಿದರು. ಆರ್.ಎಸ್.ಎಸ್ ಇದನ್ನು ಕೇಳಲು ಸಿದ್ಧವಾಗಿದೆಯೇ?," ಎಂದು ಪ್ರಶ್ನಿಸಿದ್ದಾರೆ.
ಪ್ರಣಬ್ ಮುಖರ್ಜಿ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮತ್ತೋರ್ವ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, "ಆರ್.ಎಸ್.ಎಸ್ ಕೇಂದ್ರ ಕಚೇರಿಯಲ್ಲಿ ತ್ರಿವರ್ಣ ಧ್ವಜ ಏರಿದ್ದಾಗಲೀ ಅಥವಾ ರಾಷ್ಟ್ರ ಗೀತೆ ಹಾಡಿದ್ದಾಗಲೀ ಎಂದೂ ನಾವು ನೋಡಿಲ್ಲ. ಪ್ರಣಬ್ ಮುಖರ್ಜಿ ಅವರ ಅಭಿವ್ಯಕ್ತಿ ಮತ್ತು ವಿಷಯವನ್ನು ಮನವರಿಕೆ ಮಾಡಿಕೊಡುವ ಸಾಮರ್ಥ್ಯದ ಬಗ್ಗೆ ಯಾವುದೇ ಸಂದೇಹವೂ ಇಲ್ಲ. ಆದರೆ ಮಾತುಕತೆಗೆ ಇನ್ನೊಂದು ಕಡೆಯವರು ಕೇಳಬೇಕು ಮತ್ತು ಬದಲಾಗಬೇಕು. ಆರ್.ಎಸ್.ಎಸ್ ಅದನ್ನು ಮಾಡುತ್ತದೆ ಎಂದು ನಂಬೋಣ," ಎಂದು ಹೇಳಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications